ಹಸಿರು ಪಟಾಕಿ ಕಾಗದಕ್ಕಷ್ಟೇ ಸೀಮಿತ


Team Udayavani, Oct 27, 2019, 12:13 PM IST

bg-tdy-1

ಬೆಳಗಾವಿ: ಬೆಳಕಿನ ಹಬ್ಬ ದೀಪಾವಳಿಗೆ ಜನರು ಸಿಡಿಮದ್ದು, ಪಟಾಕಿ ಸಿಡಿಸಿ ಹಬ್ಬ ಆಚರಿಸುತ್ತಿರುತ್ತಾರೆ. ಇದರಿಂದ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿರುವುದನ್ನು ಮನಗಂಡ ಸರ್ಕಾರ ಹಸಿರು ಪಟಾಕಿಗಳ ಮಾರಾಟಕ್ಕೆ ಆದೇಶ ಹೊರಡಿಸಿದೆ. ಆದರೆ ಇನ್ನೂವರೆಗೆ ಮಾರುಕಟ್ಟೆಯಲ್ಲಿ ಲಭ್ಯವಿಲ್ಲದ ಹಸಿರು ಪಟಾಕಿ ಸದ್ಯ ಕಾಗದಕ್ಕಷ್ಟೇ ಸೀಮಿತೊಂಡಿದೆ.

ದೀಪಾವಳಿ ಹಬ್ಬ ಬೆಳಕಿನ ಹಬ್ಬ ಆಗಿರಲಿ ಎಂದು ಜನರು ಪಟಾಕಿಗಳನ್ನು ಹೊಡೆದು ಸಂಭ್ರಮಿಸುತ್ತಾರೆ. ಈ ಸಲ ಕೇಂದ್ರ ಸರ್ಕಾರ ಹಸಿರು ಪಟಾಕಿಗಳನ್ನು ಮಾರಾಟಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಇದರಿಂದ ಪರಿಸರ ಮಾಲಿನ್ಯ ಆಗುವುದಿಲ್ಲ. ರಾಸಾಯನಿಕ ಪದಾರ್ಥಗಳನ್ನು ಬಳಸದೇ ತಯಾರಿಸಿರುವ ಈ ಪಟಾಕಿಯಿಂದ ವಾಯು ಮಾಲಿನ್ಯ ತಡೆಯಬಹುದು. ಈಗಾಗಲೇ ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದ್ದರೂ ಬೆಳಗಾವಿಯ ಮಾರುಕಟ್ಟೆಗಳಲ್ಲಂತೂ ಇನ್ನೂ ಇವು ಸಿಗುತ್ತಿಲ್ಲ. ಹಸಿರು ಪಟಾಕಿಗಳಲ್ಲಿ ಯಾವುದೇ ರಾಸಾಯನಿಕ ಇರುವುದಿಲ್ಲ. ಬೇರಿಯಮ್‌ ಸಲ್ಫೆಟ್‌ ಬಳಕೆ ಮಾಡಿದ್ದರಿಂದ ವಾಯು ಮಾಲಿನ್ಯ ಆಗುವುದಿಲ್ಲ. ಹೀಗಾಗಿ ಸರ್ಕಾರ ಇದನ್ನೇ ಕಟ್ಟುನಿಟ್ಟಾಗಿ ಮಾರಾಟ ಮಾಡುವಂತೆ ಆದೇಶಿಸಿದೆ. ಆದರೆ ಬೆಳಗಾವಿಯಲ್ಲಿರುವ ಸುಮಾರು 30ಕ್ಕೂ ಹೆಚ್ಚು ಲೈಸನ್ಸ್‌ ಹೊಂದಿರುವ ಅಂಗಡಿಗಳಲ್ಲಿ ಹಸಿರು ಪಟಾಕಿಗಳು ಸಿಗುತ್ತಿಲ್ಲ.

ಹಳೆಯ ಪಟಾಕಿಗಳದ್ದೇ ಸದ್ದು: ಕೆಲವೇ ದಿನಗಳ ಹಿಂದೆಯಷ್ಟೇ ಸರ್ಕಾರದ ಆದೇಶ ಬಂದಿರುವುದರಿಂದ ನಾವು ಹಳೆಯ ಪಟಾಕಿಗಳನ್ನೇ ಖರೀದಿಸಿದ್ದೇವೆ. ಜತೆಗೆ ಕಳೆದ ವರ್ಷದ ಸಂಗ್ರಹ ಕೂಡ ನಮ್ಮ ಬಳಿ ಇದೆ. ಈಗ ದಿಢೀರ್‌ ಆದೇಶ ಹೊರಡಿಸಿದರೆ ಏನು ಮಾಡುವುದು. ಈ ವರ್ಷ ಮಳೆ ಹಾಗೂ ಪ್ರವಾಹದಿಂದಾಗಿ ಮಾರುಕಟ್ಟೆ ಅಷ್ಟೊಂದು ಜೋರು ಪಡೆದಿಲ್ಲ. ಮುಂದಿನ ಗಣಪತಿ ಹಬ್ಬದಿಂದಲೇ ಈ ಆದೇಶ ಜಾರಿ ಆಗಬಹುದು ಎನ್ನುತ್ತಾರೆ ಪಟಾಕಿ ವ್ಯಾಪಾರಸ್ಥರು.

ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್‌ ಸಂಶೋಧನಾ ಕೇಂದ್ರದವರು ಹಸಿರು ಪಟಾಕಿಯನ್ನು ರೂಪಿಸಿದ್ದಾರೆ. ಪಟಾಕಿ ಸಿಡಿ ಮದ್ದುಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸಿ ಬೇರಿಯಮ್‌ ಸಲ್ಫೆಟ್‌ ಬಳಕೆ ಮಾಡಿ ಪಟಾಕಿಗಳನ್ನು ತಯಾರಿಸಿದ್ದಾರೆ. ಈಗಾಗಲೇ ದೇಶಾದ್ಯಂತ ಇವು ಕೆಲ ಮಾರುಕಟ್ಟೆಗಳಲ್ಲಿ ಲಭ್ಯ ಇವೆ. ಕರ್ನಾಟಕದಲ್ಲಿ ಈ ಬಗ್ಗೆ ಹೆಚ್ಚು ಜಾಗೃತಿ ಇಲ್ಲದ್ದಕ್ಕೆ ಸಂಗ್ರಹ ಇಲ್ಲದಂತಾಗಿದೆ.

ಅರಿವು ಕಾರ್ಯ: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಶಾಲಾ-ಕಾಲೇಜುಗಳಲ್ಲಿ ಅರಿವು ಮೂಡಿಸಲಾಗುತ್ತಿದೆ. ಪರಿಸರ ಮಾಲಿನ್ಯ ಆಗದಂತೆ ತಡೆಯಲು ಹಸಿರು ಪಟಾಕಿಗಳ ಬಳಕೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಈ ಜಾಗೃತಿ ಕಾರ್ಯಕ್ರಗಳು ನಡೆದರೆ ಸಂಪೂರ್ಣವಾಗಿ ಹಸಿರು ಪಟಾಕಿಗಳೇ ಮಾರುಕಟ್ಟೆಯಲ್ಲಿ ಲಭ್ಯ ಆಗುವುದರ ಜತೆಗೆ ಜನರೂ ಇವುಗಳನ್ನೇ ಖರೀದಿಸಿ ಪರಿಸರ ಸಂರಕ್ಷಣೆಗೆ ಕೈ ಜೋಡಿಸುವುದರಲ್ಲಿ ಸಂದೇಹವಿಲ್ಲ. ನಗರದ ಕಾಲೇಜು ರಸ್ತೆಯ ಸನ್ಮಾನ ಹೊಟೇಲ್‌ ಹಿಂಬದಿ, ಮಹಾದ್ವಾರ ರೋಡ್‌ನ‌ ಮೈದಾನ, ಟಿಳಕವಾಡಿ, ಶಹಾಪುರ ಭಾಗದಲ್ಲಿ ಪಟಾಕಿ ಮಾರಾಟಗಳ ಅಂಗಡಿಗಳು ಇವೆ. ಆಸ್ಪತ್ರೆಗಳಲ್ಲಿದೆ ವ್ಯವಸ್ಥೆ: ಪಟಾಕಿ ಸೇರಿದಂತೆ ಇನ್ನಿತರ ದುರಂತ ಸಂಭವಿಸಿದರೆ ಜಿಲ್ಲಾಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಆರೋಗ್ಯ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ವಿಶೇಷವಾಗಿ ಇದಕ್ಕಾಗಿಯೇ ಯಾವುದೇ ವ್ಯವಸ್ಥೆ ಇಲ್ಲದಿದ್ದರೂ ತುರ್ತು ಪರಿಸ್ಥಿತಿಯಲ್ಲಿ ಅಗತ್ಯ ಇರುವ ವ್ಯವಸ್ಥೆ ಮಾಡಲಾಗಿದೆ. ಪಟಾಕಿಯಿಂದ ಸುಟ್ಟು ಗಾಯಗಳಾಗಿದ್ದರೆ, ಗಂಭೀರ ಗಾಯಕ್ಕೂ ವ್ಯವಸ್ಥೆ ಇದೆ ಎನ್ನುತ್ತಾರೆ ಆರೋಗ್ಯ ಇಲಾಖೆ ಅಧಿಕಾರಿಗಳು. ಪ್ರವಾಹದಿಂದ ಗಡಿ ಜಿಲ್ಲೆ ಬೆಳಗಾವಿ ನಲುಗಿದೆ. ಮಾರುಕಟ್ಟೆಯಲ್ಲಿ ಕಳೆದ ಸಲದ ದೀಪಾವಳಿಯಂತೆ ಜನಜಂಗುಳಿ ಇಲ್ಲ. ರೈತರು, ಬಡವರು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಹದ ಹೊಡೆತದಿಂದ ಇನ್ನೂ ಮೇಲೆ ಎದ್ದಿಲ್ಲ. ಪಟಾಕಿ ಮಾರುಕಟ್ಟೆಯಂತೂ ಸಂಪೂರ್ಣವಾಗಿಕೆಳಗೆ ಬಿದ್ದಿದ್ದು, ಇನ್ನು ಬೇರೆ ವ್ಯಾಪಾರವೂ ಅಷ್ಟಕ್ಕಷ್ಟೇ ಆಗಿದೆ. ಬಟ್ಟೆ ವ್ಯಾಪಾರ ಬಿಟ್ಟರೆ ಇನ್ನುಳಿದಕ್ಕೆ ಗ್ರಹಣ ಹಿಡಿದಂತಾಗಿದೆ.

 

-ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.