ಹಗೆದಾಳ ಕೆರೆ ಕಾಮಗಾರಿ ವೀಕ್ಷಣೆ
Team Udayavani, Jun 27, 2020, 4:49 PM IST
ಯಮಕನಮರಡಿ: ಕೋವಿಡ್ ಹಿನ್ನೆಲೆಯಲ್ಲಿ ಬಡವರು ಪರದಾಡುವಂತಾಗಿದ್ದು, ಹುಕ್ಕೇರಿ ತಾಲೂಕಿನ ಬಸ್ಸಾಪೂರ ಗ್ರಾಪಂ ವ್ಯಾಪ್ತಿಗೆ ಬರುವ ಹಗೆದಾಳ ಗ್ರಾಮದ ಗುಡ್ಡ ಪ್ರದೇಶದಲ್ಲಿ ಹೊಸ ಕೆರೆ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ಸಾವಿರಾರು ಜನರಿಗೆ ಉದ್ಯೋಗ ನೀಡಿದ ಅಧಿಕಾರಿಗಳ ಕಾರ್ಯವನ್ನು ಶಾಸಕ ಸತೀಶ ಜಾರಕಿಹೊಳಿ ಶ್ಲಾಘಿಸಿದರು.
ಅವರು ಸಮೀಪದ ಹಗೆದಾಳ ಹೊರವಲಯದಲ್ಲಿ ಕೆರೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ ಮಾಧ್ಯಮದೊಂದಿಗೆ ಮಾತನಾಡಿ, ಕೆರೆ ನಿರ್ಮಾಣಕ್ಕೆ ಬೇಡಿಕೆ ಹಾಗೂ ನಮ್ಮ ಚಿಂತನೆಯೂ ಇತ್ತು. ಈ ಭಾಗದ ಜನರ ಬಹುದಿನಗಳ ಕನಸು ಈಗ ಸಾಕಾರಗೊಂಡಿದೆ. ಕೆರೆ ನಿರ್ಮಾಣದಿಂದ ಅಂತರ್ಜಲ ಮಟ್ಟ ಹೆಚ್ಚಿ ಜನರು, ರೈತರಿಗೆ ಅನುಕೂಲವಾಗಲಿದೆ ಎಂದರು.ಬಸ್ಸಾಪೂರ ಪಿಡಿಒ ಪ್ರತಿಭಾ ಮುತಾಲಿಕದೇಸಾಯಿ ಮಾತನಾಡಿ, ಸ್ಥಳೀಯವಾಗಿ ಯಾರೇ ನರೇಗಾ ಯೋಜನೆಯಡಿ ಕೆಲಸಕ್ಕೆ, ಜಾಬ್ ಕಾರ್ಡ್ಗೆ ಅರ್ಜಿ ಹಾಕಿದರೆ ಅವರಿಗೆ ಕೆಲಸ ನೀಡುತ್ತೇವೆ. ಇಂದು 774 ಜನರು ಕೆರೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು. ಜಿಪಂ ಸದಸ್ಯ ಮಂಜುನಾಥ ಪಾಟೀಲ, ಬಸನಾಯಿಕ ನಾಯಿಕ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್