ಮಹಾ’ ಮಳೆಗೆ ಹರಿಪ್ರಿಯಾ ಎಕ್ಸ್ಪ್ರೆಸ್ ರದ್ದು
Team Udayavani, Jul 28, 2019, 5:19 AM IST
ಬೆಳಗಾವಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಲ್ಲಿ ಮಹಾಲಕ್ಷ್ಮೀ ಎಕ್ಸ್ಪ್ರೆಸ್ ರೈಲು ಕೆಟ್ಟು ನಿಂತಿದ್ದರಿಂದ ಶನಿವಾರ ಕೊಲ್ಲಾಪುರದಿಂದ ಹೊರಡುವ ಹಾಗೂ ಶನಿವಾರ ರಾತ್ರಿ ತಿರುಪತಿಯಿಂದ ಹೊರಡುವ ಹರಿಪ್ರಿಯಾ ಎಕ್ಸ್ಪ್ರೆಸ್ನ್ನು ರದ್ದುಗೊಳಿಸಿದ್ದು, ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುವಂತಾಯಿತು. ಶನಿವಾರ ಬೆಳಗ್ಗೆ ಕೊಲ್ಲಾಪುರದಿಂದ ತಿರುಪತಿಗೆ ಹೊರಡಬೇಕಿದ್ದ (17416) ರೈಲು ಬೆಳಗಾವಿಗೆ ಮಧ್ಯಾಹ್ನ 3:50ಕ್ಕೆ ಬರಬೇಕಿತ್ತು. ಶನಿವಾರ ರಾತ್ರಿ ತಿರುಪತಿಯಿಂದ ಬಿಡಬೇಕಿದ್ದ (17415) ರೈಲು ಬೆಳಗಾವಿಗೆ ಭಾನುವಾರ ಬೆಳಗ್ಗೆ 11:45ಕ್ಕೆ ಬರುತ್ತಿತ್ತು. ಆದರೆ ಈ ಎರಡೂ ರೈಲುಗಳನ್ನು ಒಂದು ದಿನದ ಮಟ್ಟಿಗೆ ರೈಲ್ವೆ ಇಲಾಖೆ ರದ್ದುಗೊಳಿಸಿದೆ. ಇದರಿಂದಾಗಿ ಕೊಲ್ಲಾಪುರದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುವಂತಾಯಿತು. ಕೊಲ್ಲಾಪುರದಿಂದ ಮಿರಜ್ ಮಾರ್ಗವಾಗಿ ಕುಡಚಿ, ಉಗಾರ, ರಾಯಬಾಗ, ಘಟಪ್ರಭಾ, ಬೆಳಗಾವಿ, ಖಾನಾಪುರ, ಅಳ್ನಾವರ, ಲೋಂಡಾ, ಧಾರವಾಡ, ಹುಬ್ಬಳ್ಳಿವರೆಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಸಮಸ್ಯೆ ಉಂಟಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ