ವಿದ್ಯಾರ್ಥಿ ಬದುಕಿನ ತಪಸ್ಸನ್ನು ಗೆಲ್ಲಿ: ಪಾಟೀಲ


Team Udayavani, Mar 14, 2019, 10:13 AM IST

15-march-15.jpg

ಹಾರೂಗೇರಿ: ವಿದ್ಯಾರ್ಥಿ ಬದುಕು ಒಂದು ತಪಸ್ಸು. ಏಕಾಗ್ರತೆಯಿಂದ ಅಧ್ಯಯನ ಮಾಡಿ ಆ ತಪಸ್ಸನ್ನು ಗೆಲ್ಲುವುದೇ ವಿದ್ಯಾರ್ಥಿಯ ಸಾಧನೆಯಾಗಬೇಕೆಂದು ಪ್ರಗತಿಪರ ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ಈರನಗೌಡ ಪಾಟೀಲ ಹೇಳಿದರು.

ಸ್ಥಳೀಯ ಶ್ರೀ ಸಿದ್ಧೇಶ್ವರ ಗ್ರಾಮೀಣಾಭಿವೃದ್ಧಿ ಮತ್ತು ಶಿಕ್ಷಣ ಸಂಸ್ಥೆಯ ದಿ ಎಕ್ಸಲೆಂಟ್‌ ಶಾಲೆಯಲ್ಲಿ ಮಂಗಳವಾರ ಸಂಜೆ ನಡೆದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಸಹಾಯಧನ ವಿತರಣಾ ಸಮಾರಂಭದಲ್ಲಿ ಮುಖ್ಯಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗಕ್ಕೆ ಸ್ಪರ್ಧಿಸಲು ವಿದ್ಯಾರ್ಥಿಗಳು ಸನ್ನದ್ಧರಾಗಿರಬೇಕು ಎಂದರು.

ಸಾನ್ನಿಧ್ಯ ವಹಿಸಿದ್ದ ಶ್ರೀ ಪ್ರದೀಪಘಂಟಿ ಮಹಾರಾಜರು ಆಶೀರ್ವಚನ ನೀಡಿ, ವಿದ್ಯಾರ್ಥಿಗಳಲ್ಲಿ ಗೆಲ್ಲುವ ಹಂಬಲವಿರಬೇಕು. ಕಠಿಣ ಪರಿಶ್ರಮ, ಸತತ ಅಧ್ಯಯನ ಮತ್ತು ಚಿತ್ತಶುದ್ಧಿಯಿಂದ ಅಸಾಧ್ಯವಾದುದನ್ನು ಸಾಧಿಸಲು ಸಾಧ್ಯ ಎಂದರು. ಅಬಕಾರಿ ಎಸ್‌ಐ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ರ್‍ಯಾಂಕ್‌ ಪಡೆದ ದತ್ತಗುರು ಅಥಣಿ ಮತ್ತು ಖೇಲೋ ಇಂಡಿಯಾ ಯುಥ್‌ ಗೇಮ್‌ನಲ್ಲಿ ಚಿನ್ನದ ಪದಕ ಪಡೆದ ದಾನೇಶ್ವರಿ ಠಕ್ಕಣ್ಣವರ ಅವರನ್ನು ಸಂಸ್ಥೆ ವತಿಯಿಂದ ಸತ್ಕರಿಸಿ, ಗೌರವಿಸಲಾಯಿತು. ಈ ವೇಳೆ ಎಕ್ಸಲೆಂಟ್‌ ಟ್ಯಾಲೆಂಟ್‌ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ 40 ವಿದ್ಯಾರ್ಥಿಗಳಿಗೆ ಸಹಾಯಧನ ಮತ್ತು ಪ್ರಶಸ್ತಿ ನೀಡಿ ಸತ್ಕರಿಸಲಾಯಿತು.

ಸಂಸ್ಥೆ ಅಧ್ಯಕ್ಷ ಬಿ.ಜಿ. ಕಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಗೋಪಾಲ ಪೂಜೇರಿ ಸಮಾರಂಭ ಉದ್ಘಾಟಿಸಿದರು. ಪ್ರಾಚಾರ್ಯ ಮದುಸೂಧನ ಬೀಳಗಿ, ಟಿ.ಎಸ್‌.ವಂಟಗೂಡಿ, ಮುಖ್ಯಾಧ್ಯಾಪಕಿ ಕವಿತಾ ಕಶೆಟ್ಟಿ, ಭುಜಬಲಿ ಹರವಿ, ಉದಯ ಆಲಗೂರ ಸೇರಿದಮತೆ ಇತರರು ಇದ್ದರು. ಸಂಸ್ಥೆ ಕಾರ್ಯದರ್ಶಿ ಎಲ್‌.ಬಿ.ಕಶೆಟ್ಟಿ ಸ್ವಾಗತಿಸಿದರು. ಅಮಿತ್‌ ಸನದಿ ವಂದಿಸಿದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.