ಆರೋಗ್ಯ ಇಲಾಖೆ ವಸತಿ ಗೃಹಗಳಿಗೇ ಅನಾರೋಗ್ಯ

ಹಿರೇ ಬಾಗೇವಾಡಿ ಸಮುದಾಯ ಆರೋಗ್ಯ ಕೇಂದ್ರ ವಸತಿ ಗೃಹಗಳು; 14ರ ಪೈಕಿ ಮೂರರಲ್ಲಿ ಮಾತ್ರ ಸಿಬ್ಬಂದಿ ವಾಸ

Team Udayavani, Jul 25, 2022, 3:18 PM IST

12

ಹಿರೇಬಾಗೇವಾಡಿ: ಜನರ ಆರೋಗ್ಯ ರಕ್ಷಣೆಗೆ ದಿನರಾತ್ರಿ ಶ್ರಮಿಸುವ ಇಲ್ಲಿನ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ವಸತಿ ಗೃಹಗಳು ಸಂಪೂರ್ಣ ಶಿಥಿಲಗೊಂಡಿದ್ದು, ಅವುಗಳನ್ನು ಕೆಡವಿ ನೂತನ ಕಟ್ಟಡ ನಿರ್ಮಾಣ ಮಾಡಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರ ವ್ಯಾಪ್ತಿಗೆ 45 ಗ್ರಾಮಗಳು ಇದ್ದು, ಈ ಭಾಗದ ಜನರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸುಮಾರು 12 ವರ್ಷಗಳ ಹಿಂದೆ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದೆ.

ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಹಾಗೂ ಸಿಬ್ಬಂದಿಗಾಗಿ 14 ವಸತಿಗೃಹಗಳು ಇದ್ದು, ಅದರಲ್ಲಿ 11 ವಸತಿ ಗೃಹಗಳು ನಿರ್ವಹಣೆಯ ಕೊರತೆಯಿಂದಾಗಿ ಸಂಪೂರ್ಣ ಶಿಥಿಲಾವಸ್ಥೆ ತಲುಪಿವೆ. 3 ಮಾತ್ರ ಉಪಯೋಗವಾಗುತ್ತಿವೆ. ಆದರೆ ಅವು ಸಹ ಶಿಥಿಲಗೊಂಡಿದ್ದು, ಅನಿವಾರ್ಯವಾಗಿ ಕೆಲವು ಸಿಬ್ಬಂದಿ ಈ ಕಟ್ಟಡಗಳಲ್ಲಿ ಆತಂಕದ ನಡುವೆ ವಾಸ ಮಾಡುತ್ತಿದ್ದಾರೆ.

ಈ ಕೇಂದ್ರಕ್ಕೆ ಮಂಜೂರಾದ ಹುದ್ದೆಗಳು 44. ಅಷ್ಟು ಸಿಬ್ಬಂದಿ ಆಸ್ಪತ್ರೆಯಲ್ಲಿ ಇಲ್ಲವಾದರೂ ಸದ್ಯ ಇರುವ ಸಿಬ್ಬಂದಿಗೂ ವಸತಿ ಗೃಹಗಳು ಇಲ್ಲದೆ ಇರುವುದರಿಂದ ಅನಿವಾರ್ಯವಾಗಿ ಸಿಬ್ಬಂದಿ ಬಾಡಿಗೆ ಮನೆ ಮಾಡುವಂತಾಗಿದೆ. ಆಸ್ಪತ್ರೆಯ ಆವರಣದಲ್ಲಿಯೇ ಇರುವ ವಸತಿ ಗೃಹಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರೆ ರೋಗಿಗಳಿಗೂ ಅನುಕೂಲ ಎನ್ನುವುದು ಜನರ ಅಭಿಪ್ರಾಯ.

ಮಳೆಗಾಲ ಬಂತೆಂದರೆ ಸಾಕು, ಇಲ್ಲಿನ ವಸತಿ ಗೃಹದಲ್ಲಿ ಇರುವವರ ಬದುಕು ಮೂರಾಬಟ್ಟೆ ಎಂದೇ ಅರ್ಥ. ಬಿರುಕು ಬಿಟ್ಟಿರುವ ಮೇಲ್ಚಾವಣಿಯಿಂದ ನಿರಂತರವಾಗಿ ಸೋರುವ ನೀರು, ವಸತಿ ಗೃಹದ ಸುತ್ತಮುತ್ತಲು ಕೆಸರಿನ ಹೊಂಡವೇ ಸೃಷ್ಟಿಯಾಗಿರುತ್ತದೆ. ಹಳೆಯ ವಿದ್ಯುತ್‌ ಜೋಡಣೆಯಿಂದಾಗಿ ಶಾಕ್‌ ತಗಲುವ ಭಯ ವಸತಿ ಗೃಹದಲ್ಲಿರುವ ಸಿಬ್ಬಂದಿ ಕುಟುಂಬಗಳಿಗೆ ಕಾಡುತ್ತದೆ.

ಆರೋಗ್ಯ ಇಲಾಖೆಯು ಸಾರ್ವಜನಿಕರು ಹಾಗೂ ಆಸ್ಪತ್ರೆ ಸಿಬ್ಬಂದಿ ಹಿತದೃಷ್ಟಿಯಿಂದ ಹಳೆಯ ಕಟ್ಟಡಗಳನ್ನು ಕೆಡವಿ ಜಿ+2 ಮಾದರಿಯ ಮನೆ ನಿರ್ಮಿಸಿ ಅನುಕೂಲ ಮಾಡಿಕೊಡಬೇಕು ಎನ್ನುವುದು ಈ ಭಾಗದ ಜನರ ಅನಿಸಿಕೆ. ಜನರು ಆಡಳಿತಕ್ಕೆ ಈ ಕುರಿತು ಅನೇಕ ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ಈ ಹಿಂದೆ ಕೂಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಗಬೇಕಾದ ಅನುಕೂಲತೆಗಳ ಬಗ್ಗೆ ಡಿಎಚ್‌ಓ ಅವರೊಂದಿಗೆ ಚರ್ಚಿಸಿ ಮನವಿ ಸಲ್ಲಿಸಲಾಗಿತ್ತು. ಅವರಿಂದ ಸಮಸ್ಯೆ ಪರಿಹಾರದ ಭರವಸೆ ಪಡೆದು ವರ್ಷಗಳೇ ಗತಿಸಿದ್ದರೂ ಸಹ ಅಭಿವೃದ್ಧಿ ಇನ್ನೂ ಮರೀಚಿಕೆಯಾಗಿದೆ. –ಮಂಜುನಾಥ ವಸ್ತ್ರದ, ಪ್ರಧಾನ ಕಾರ್ಯದರ್ಶಿ ಉ.ಕ. ಜನ ಸಂಗ್ರಾಮ ಪರಿಷತ್‌

ಮಾಧ್ಯಮ ಹಾಗೂ ಸಾರ್ವಜನಿಕರ ನಿರೀಕ್ಷೆಯಂತೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆದಷ್ಟು ಬೇಗ ಪರಿಹಾರ ಒದಗಿಸಲಾಗುವುದು. –ಶಿವಾನಂದ ಮಾಸ್ತಿಮರರ್ಡಿ, ತಾಲೂಕು ವೈದ್ಯಾಧಿಕಾರಿ, ಬೆಳಗಾವಿ.

ಆಸ್ಪತ್ರೆಗೆ ಎಲ್ಲ ಮೂಲಭೂತ ಸೌಕರ್ಯಗಳ ಕುರಿತಾಗಿ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ವರದಿ ನೀಡಿ ಶೀಘ್ರ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. –ಡಾ| ನೀತಾ ಚವ್ಹಾಣ, ವೈದ್ಯಾಧಿಕಾರಿ, ಸಮುದಾಯ ಆರೋಗ್ಯ ಕೇಂದ್ರ, ಹಿರೇಬಾಗೇವಾಡಿ.

-ಶಿವಾನಂದ ಮೇಟಿ

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.