ಮಹಾರಾಷ್ಟ್ರದಲ್ಲಿ ಸುರಿಯತ್ತಿದೆ ಭಾರಿ ಮಳೆ: ಬೆಳಗಾವಿಯಲ್ಲಿ ಪ್ರವಾಹ ಭೀತಿ
Team Udayavani, Jun 19, 2020, 1:08 PM IST
ಬೆಳಗಾವಿ: ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಹಾಗೂ ನೆರೆಯ ಮಹಾರಾಷ್ಟ್ರದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯಲ್ಲಿ ಹರಿಯುವ ನದಿಗಳಲ್ಲಿ ಒಳಹರಿವಿನ ಪ್ರಮಾಣ ಹೆಚ್ಚುತ್ತಿದ್ದು ಮತ್ತೆ ಪ್ರವಾಹದ ಭೀತಿ ಎದುರಾಗಿದೆ.
ಕಳೆದ ವರ್ಷ ಇದೇ ಅವಧಿಗೆ ಘಟಪ್ರಭಾ ಹಾಗೂ ಮಲಪ್ರಭಾ ನದಿಗಳಲ್ಲಿ ಯಾವುದೇ ಒಳಹರಿವು ಇರಲಿಲ್ಲ. ಆದರೆ ಈ ಬಾರಿ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಇದರಿಂದ ಕೃಷ್ಣಾ ನದಿಗೆ ಅಧಿಕ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹೀಗಾಗಿ ಚಿಕ್ಕೋಡಿ ತಾಲೂಕಿನಲ್ಲಿ ಕೆಳಮಟ್ಟದ ಆರು ಬ್ಯಾರೇಜ್ ಗಳು ನೀರಿನಲ್ಲಿ ಮುಳುಗಿವೆ.
ಮಹಾರಾಷ್ಟ್ರದ ಅಂಬೋಲಿ ಘಟ್ಟ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಇದರಿಂದ ಘಟಪ್ರಭಾ ನದಿಗೆ ಹತ್ತು ಸಾವಿರ ಕ್ಯೂಸೆಕ್ಸ್ ಗೂ ಅಧಿಕ ನೀರು ಹರಿದು ಬರಲಾರಂಭಿಸಿದೆ.
ಇನ್ನು ಖಾನಾಪುರ ತಾಲೂಕಿನ ದಟ್ಟ ಅರಣ್ಯ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಮಲಪ್ರಭಾ ನದಿಗೆ ನಾಲ್ಕು ಸಾವಿರ ಕ್ಯೂಸೆಕ್ಸ್ ಗೂ ಹೆಚ್ಚು ನೀರು ಬರುತ್ತಿದೆ. ಧಾರಾಕಾರ ಮಳೆಯಿಂದ ಗವಾಳಿ, ಶಿರೋಳಿ ಸೇರಿದಂತೆ ಕೆಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಳ್ಳುವ ಆತಂಕ ಉಂಟಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ
HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ
ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ