ವಿವಿಧೆಡೆ ಮಳೆರಾಯನ ಅಬ್ಬರ
•ತಗ್ಗು ಪ್ರದೇಶಗಳಲ್ಲಿ ನುಗ್ಗಿದ ಮಳೆ ನೀರು•ಸಂತಸಗೊಂಡ ರೈತರು, ಬಿತ್ತನೆ ಚುರುಕು
Team Udayavani, Jun 24, 2019, 9:32 AM IST
ಬೆಳಗಾವಿ: ಮಳೆ ನೀರಿನಿಂದ ನಗರದ ಬಸ್ ನಿಲ್ದಾಣದಲ್ಲಿ ರಾಡಿಯಿಂದಾಗಿ ಪ್ರಯಾಣಿಕರು ತೊಂದರೆ ಎದುರಿಸಿದರು.
ಬೆಳಗಾವಿ: ನಗರದಲ್ಲಿ ಎರಡು ದಿನದಿಂದ ತುಂತುರು ಮಳೆ ಸುರಿಯುತ್ತಿದ್ದು, ಕೆಲವೊಂದು ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಜನರು ತೊಂದರೆ ಅನುಭವಿಸುವಂತಾಗಿದೆ.
ಶನಿವಾರ ಹಾಗೂ ರವಿವಾರ ಸುರಿದ ಮಳೆಯಿಂದಾಗಿ ಸಾರ್ವಜನಿಕರು ಪರದಾಡುವಂತಾಗಿದೆ. ರವಿವಾರ ಮಧ್ಯಾಹ್ನ ಸುಮಾರು ಒಂದು ತಾಸು ಮಳೆ ಸುರಿಯಿತು. ನಗರದ ಸೇರಿದಂತೆ ತಾಲೂಕಿನ ಬಹುತೇಕ ಹಳ್ಳಿಗಳಲ್ಲಿ ತುಂತುರು ಮಳೆ ಆಗಿದೆ.
ಎರಡು ದಿನ ಮಳೆ ಸುರಿದಿದ್ದರಿಂದ ರೈತರು ಸಂತಸಗೊಂಡಿದ್ದು, ಇನ್ನು ಮುಂದೆ ಬಿತ್ತನೆ ಕಾರ್ಯದಲ್ಲಿ ತೊಡಗಲಿದ್ದಾರೆ. ಈಗಾಗಲೇ ಬಹುತೇಕ ಕಡೆಗೆ ಬಿತ್ತನೆ ಕಾರ್ಯ ಚುರುಕು ಪಡೆದುಕೊಂಡಿದೆ.
ನಗರದ ತಗ್ಗು ಪ್ರದೇಶಗಳಲ್ಲಿ, ಬಡಾವಣೆ ಹಾಗೂ ಗಲ್ಲಿಗಳಲ್ಲಿ ನೀರು ನುಗ್ಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ಪ್ರತಿ ವರ್ಷದಂತೆ ಈ ಸಲವೂ ಗಾಂಧಿ ನಗರದ ಸೇತುವೆ ಕೆಳಗೆ ನೀರು ನಿಂತಿದ್ದರಿಂದ ವಾಹನ ಸವಾರರಿಗೆ ಅಡಚಣೆ ಉಂಟಾಯಿತು. ಸುಮಾರು ಒಂದೂವರೆ ಅಡಿವರೆಗೂ ಹೆಚ್ಚು ನೀರು ಸೇತುವೆ ಕೆಳಗೆ ನಿಂತಿತ್ತು.
ನಗರ ಬಸ್ ನಿಲ್ದಾಣ ಕಾಮಗಾರಿ ನಡೆದಿದ್ದರಿಂದ ಬೇರೆ-ಬೇರೆ ಕಡೆಗೆ ಬಸ್ಗಳು ನಿಲ್ಲುತ್ತಿವೆ. ಈ ಬಸ್ ನಿಲ್ದಾಣ ಸುತ್ತಲೂ ಕೆಂಪು ಮಣ್ಣು ಇದ್ದಿದ್ದರಿಂದ ಮಳೆಯಿಂದಾಗಿ ಸಂಪೂರ್ಣ ರಾಡಿಯಾಗಿತ್ತು. ಪ್ರಮಾಣಿಕರು ಬಸ್ ನಿಲ್ದಾಣದೊಳಗೆ ಹೋಗಲು ಪ್ರಯಾಸ ಪಡುವಂತಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್