ಬೆಳಗಾವಿಯಲ್ಲಿ ಮುಂದುವರೆದ ಮಳೆಯ ಅಬ್ಬರ
Team Udayavani, Aug 7, 2019, 10:39 AM IST
ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಇನ್ನೂ ಮುಂದುವರೆದಿರುವಂತೆ ಇತ್ತ ಬೆಳಗಾವಿ ಜಿಲ್ಲೆಯಲ್ಲೂ ಧಾರಾಕಾರ ಮಳೆಯಾಗುತ್ತಿದೆ. ಭಾರೀ ಮಳೆಗೆ ಮಹಾರಾಷ್ಟ್ರದ ಜಲಾಶಯಗಳು ಭರ್ತಿಯಾಗುತ್ತಿರುವುದರಿಂದ ಭಾರೀ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ಇದರಿಂದಾಗಿ ಕೃಷ್ಣಾ ಹಾಗೂ ವೇದಗಂಗಾ ನದಿ ತೀರಗಳ ಚಿಕ್ಕೋಡಿ, ಅಥಣಿ, ರಾಯಬಾಗ, ಕಾಗವಾಡ, ನಿಪ್ಪಾಣಿ ತಾಲೂಕುಗಳಲ್ಲಿ 40ಕ್ಕೂ ಹೆಚ್ಚು ಹಳ್ಳಿಗಳು ತೀವ್ರ ತೊಂದರೆಗೆ ಸಿಲುಕಿವೆ.
ಜಿಲ್ಲೆಯಲ್ಲಿ ಪ್ರವಾಹದಿಂದಾಗಿ 80 ಸಾವಿರ ಹೆಕ್ಟೇರ್ ಪ್ರದೇಶಗಳಲ್ಲಿ ಹೆಚ್ಚು ಬೆಳೆ ಹಾನಿಯಾಗಿದೆ. ಇನ್ನು ಮಹಾರಾಷ್ಟ್ರದ ಅಂಬೋಲಿ ಘಟ್ಟ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಇದರಿಂದ ಜಿಲ್ಲೆಯ ಹಿಡಕಲ್ ಜಲಾಶಯ ಭರ್ತಿಯಾಗಿದೆ. ಜಲಾಶಯಕ್ಕೆ ಈಗ 90ಸಾವಿರ ಕ್ಯೂಸೆಕ್ಸ್ ನೀರು ಬರುತ್ತಿದ್ದು ಜಲಾಶಯದಿಂದ 70ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ.
ಅದೇ ರೀತಿ ಖಾನಾಪುರ ತಾಲೂಕಿನಲ್ಲಿ ಸಹ ಭಾರೀ ಮಳೆಯಾಗುತ್ತಿದ್ದು ಮಲಪ್ರಭಾ ಜಲಾಶಯ ಬಹುತೇಕ ಭರ್ತಿಯಾಗಿದೆ. ಜಲಾಶಯಕ್ಕೆ ಈಗ 70ಸಾವಿರ ಕ್ಯೂಸೆಕ್ಸ್ ನೀರು ಬರುತ್ತಿದ್ದು 60ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ. ಬೆಳಗಾವಿ ನಗರದಲ್ಲಿ ನಿರಂತರವಾಗಿ ದಾರಾಕಾರ ಮಳೆಯಾಗುತ್ತಿದ್ದು ದಕ್ಷಿಣ ಕ್ಷೇತ್ರದಲ್ಲಿ ಬಹುತೇಕ ಪ್ರದೇಶಗಳು ಜಲಾವೃತಗೊಂಡಿವೆ.
ಮರಾಠಾ ಕಾಲನಿ. ಕಪಿಲೇಶ್ವರ ಕಾಲನಿ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ರಸ್ತೆಗಳ ಮೇಲೆ ನಾಲ್ಕು ಅಡಿಗಳಷ್ಟು ನೀರು ನಿಂತಿದ್ದು ಸಾರ್ವಜನಿಕರು ಬಹಳ ತೊಂದರೆ ಅನುಭವಿಸುತ್ತಿದ್ದಾರೆ. ಇದರ ಮಧ್ಯೆ ಶಾಸಕ ಅಭಯ ಪಾಟೀಲ ಹಾಗೂ ಅವರ ತಂಡ ಪರಿಹಾರ ಹಾಗೂ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ