Belagavi; ಚುನಾವಣಾ ಪ್ರಚಾರ ಆರಂಭಿಸಿದ ಹೆಬ್ಬಾಳಕರ್ ಪುತ್ರ ಮೃಣಾಲ್
Team Udayavani, Mar 24, 2024, 1:28 PM IST
ಬೆಳಗಾವಿ: ಗಣಪತಿಯ ಪೂಜೆ ನಂತರ ಮಹಾತ್ಮರ ಪುತ್ಥಳಿಗಳಿಗೆ ಗೌರವ ಮಾಲಾರ್ಪಣೆ ಮಾಡಿ ಬೃಹತ್ ಬೈಕ್ ಜಾಥಾ ಮೂಲಕ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಭಾನುವಾರ ತಮ್ಮ ಚುನಾವಣಾ ಪ್ರಚಾರಕ್ಕೆ ವಿದ್ಯುಕ್ತ ಚಾಲನೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮತ್ತು ಹಲವಾರು ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಹಿಂಡಲಗಾದ ಗಣಪತಿ ಮಂದಿರಕ್ಕೆ ತೆರಳಿದ ಮೃಣಾಲ್ ಹೆಬ್ಬಾಳಕರ್ ಗಣಪತಿ ಗೆ ಪೂಜೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಅವರು, ನಮ್ಮ ಕುಟುಂಬದ ಸಂಪ್ರದಾಯದಂತೆ ಯಾವುದೇ ಕೆಲಸ ಮಾಡುವ ಮುನ್ನ ಗಣೇಶನಿಗೆ ಪೂಜೆ ಸಲ್ಲಿಸುತ್ತೇವೆ. ಅದೇ ರೀತಿ ಪೂಜೆ ಮಾಡಿ, ಪ್ರಚಾರ ಆರಂಭಿಸಿದ್ದೇವೆ. ನಮ್ಮ ದೃಷ್ಟಿಯಲ್ಲಿ ಪ್ರತಿಯೊಬ್ಬ ಮತದಾರ ಕೂಡ ನಿರ್ಣಾಯಕ. ಕಳೆದ 10 ವರ್ಷದಿಂದ ನಾನು ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇನೆ. ವಿರೋಧ ಪಕ್ಷಗಳ ಬಗ್ಗೆ ಮಾತನಾಡದೆ, ನಮ್ಮ ಕೆಲಸವನ್ನು ಮಾಡುತ್ತಾ ಹೋಗುತ್ತೇವೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ ವಿರೋಧ ಪಕ್ಷದವರು ಏನು ಮಾಡುತ್ತಿದ್ದಾರೆ ಎನ್ನುವ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಮ್ಮ ಕೆಲಸ ನಾವು ಮಾಡುತ್ತೇವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದಕ್ಕೆ ಹೋಗುತ್ತೇವೆ. ಬೇರೆಯವರ ತಂತ್ರ, ಕುತಂತ್ರಗಳ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್