ಹೆಲ್ಮೆಟ್ ಕಡ್ಡಾಯ ಜಾಗೃತಿ ಜಾಥಾ
Team Udayavani, Jan 15, 2020, 2:45 PM IST
ಸವದತ್ತಿ: ಪೋಲಿಸ್ ಇಲಾಖೆ ಸಾರ್ವಜನಿಕರ ಸೇವೆಗೆಂದೇ ಇರುವ ಇಲಾಖೆಯಾಗಿದ್ದು, ಕಟ್ಟುನಿಟ್ಟಿನ ಕ್ರಮಗಳಿಂದ ಒಂದು ಜೀವ ಉಳಿದರೆ ಆ ನಿಯಮಗಳನ್ನು ಜಾರಿಗೆ ತಂದಿದ್ದು, ಸಾರ್ಥಕವೆನಿಸುತ್ತದೆಂದು ಪಿಎಸ್ಐ ಐ.ಕೆ. ನಾಗನಗೌಡ ಹೇಳಿದರು. ಸ್ಥಳಿಯ ಪೋಲಿಸ್ ಇಲಾಖೆಯವರು ಮಂಗಳವಾರ ಹಮ್ಮಿಕೊಂಡಿದ್ದ ಹೆಲ್ಮೆಟ್ ಕಡ್ಡಾಯ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿರು.
ಕೆಲವರು ಅವಸರಕ್ಕೋ ಅಥವಾ ಅಹಂಭಾವಕ್ಕೋ ರಸ್ತೆಗಳಲ್ಲಿ ಸುರಕ್ಷತೆಯಿಲ್ಲದೇ ಇಳಿದು ಬಿಡುತ್ತಾರೆ. ಇಂತಹ ಸ್ಥಿತಿಯಿಂದ ಹೊರಬಂದು ರಸ್ತೆ ನಿಯಮಗಳ ಪಾಲನೆಯಾಗಬೇಕು. ಇದರಿಂದ ಅಪಘಾತ ಸಂಖ್ಯೆ ತಗ್ಗುತ್ತವೆ ಎಂದರು.
ಹೆಲ್ಮೆಟ್ ಇಲ್ಲದೇ ವಾಹನ ಚಾಲನೆ ಮಾಡಿ ಅಪಘಾತವಾದರೆ ತಲೆಗೆ ಪೆಟ್ಟು ಬಿದ್ದು ಅನಾಹುತ ಸಂಭವಿರುತ್ತದೆ. ಇದನ್ನು ತಡೆಯಲು ಪ್ರತಿಯೊಬ್ಬರು ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು. ಇಲ್ಲದಿದ್ದರೆ ದಂಡ ಹಾಕಬೇಕಾಗುತ್ತದೆ ಎಂದರು. ಪೊಲೀಸ್ ಸಿಬ್ಬಂದಿಯಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ಮೂಲಕ ಸಾರ್ವಜನಿಕರಲ್ಲಿ ಹೆಲ್ಮೆಟ್ದಿಂದ ಆಗುವ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸಿ ಹೆಲ್ಮೆಟ್ ಕಡ್ಡಾಯ ಎಂಬ ಜಾಗೃತಿ ಜಾಥಾ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್