ಸಮಸ್ಯೆಗೆ ಸ್ಪಂದಿಸಲು ಹೆಸ್ಕಾಂ ಸಿದ್ಧ: ಶೇಖರ

•ಗ್ರಾಹಕರ ಕುಂದು-ಕೊರತೆ, ಸಂವಾದ ಸಭೆ•ಅಪಾಯದ ವಿದ್ಯುತ್‌ ಕಂಬ ತೆರವಿಗೆ ಮನವಿ

Team Udayavani, Jul 21, 2019, 11:05 AM IST

bg-tdy-1

ಅಥಣಿ: ಹುಬ್ಬಳ್ಳಿ ವಿದ್ಯುತ್‌ ಸರಬರಾಜು ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್‌ ಕಚೇರಿಯಲ್ಲಿ ವಿದ್ಯುತ್‌ ಗ್ರಾಹಕರ ಕುಂದು-ಕೊರತೆ ಸಭೆ ನಡೆಯಿತು.

ಅಥಣಿ: ಗ್ರಾಹಕ ಮತ್ತು ರೈತರ ಕುಂದು-ಕೊರತೆಗಳನ್ನು ಸರಿ ಪಡಿಸುವುದು ಹೆಸ್ಕಾಂನ ಕರ್ತವ್ಯವಾಗಿದ್ದು, ಎಲ್ಲ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಸಿದ್ಧ ಎಂದು ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿಯ ಕಾರ್ಯನಿರ್ವಾಹಕ ಇಂಜಿನಿಯರ್‌ ಶೇಖರ ಬಹುರೂಪಿ ಹೇಳಿದರು.

ಹುಬ್ಬಳ್ಳಿ ವಿದ್ಯತ್‌ ಸರಬರಾಜು ಕಂಪನಿಯ ಕಾರ್ಯ ಮತ್ತು ಪಾಲನಾ ಅಥಣಿ ವಿಭಾಗದಲ್ಲಿ ಗ್ರಾಹಕರ ಕುಂದು-ಕೊರತೆ ಮತ್ತು ಸಂವಾದ ಸಭೆಯಲ್ಲಿ ಅವರು ಮಾತನಾಡಿದರು.

ಹೆಸ್ಕಾಂ ನಿಗಮದಿಂದ ವಿದ್ಯುತಿನ ಕುರಿತು ಮತ್ತು ಇದಕ್ಕೆ ಸಂಬಂಧಿಸಿದಂತೆ ಇನ್ನಿತರ ಯಾವುದೇ ಕೆಲಸಗಳಿಗೆ ನಿಗಮ ಮತ್ತು ಅಧಿಕಾರಿಗಳು ಗ್ರಾಹಕರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಮಾಡುತ್ತಾ ಬಂದಿದ್ದಾರೆ. ಮುಂದೆಯೂ ಮಾಡುತ್ತಾರೆ. ನಿಗಮದವರಿಗೆ ಸಾರ್ವಜನಿಕರ ಮತ್ತು ರೈತರ ಸಹಕಾರ ಅಗತ್ಯವಾಗಿದೆ ಎಂದರು.

ಗ್ರಾಹಕರು ವಿದ್ಯುತ್‌ ಸಂಬಂಧಿತ ಸಮಸ್ಯೆಗಳನ್ನು ನಮ್ಮ ಬಳಿ ತೆಗೆದುಕೊಂಡು ಬಂದರೆ ಅಂಥವರ ಸಮಸ್ಯೆಗೆ ತಕ್ಷಣವೇ ಸ್ಪಂದಿಸುವುದರ ಜತೆಗೆ ಸಮಸ್ಯೆಯನ್ನು ಇತ್ಯರ್ಥಪಡಿಸಿಕೊಳ್ಳ ಬಹುದಾಗಿದೆ ಎಂದು ತಿಳಿಸಿದರು.

ವಿದ್ಯುತ್‌ ಕಂಬಗಳಿಗೆ ಅಳವಡಿಸಿದ ಹಳೆ ವಾಯರ್‌ಗಳನ್ನು ಬದಲಾವಣೆ ಮಾಡಬೇಕು. ಮಾರ್ಗದಾಳಗಳು ಸ್ಥಾನಿಕ ಸ್ಥಳದಲ್ಲಿ ಇರುವಂತಾಗಬೇಕು. ಅಪಾಯ ಹಾಗೂ ಮುರಿಯುವ ಸ್ಥಿತಿಯಲ್ಲಿರುವ ವಿದ್ಯುತ್‌ ಕಂಬಗಳನ್ನು ತಕ್ಷಣ ಬದಲಾವಣೆ ಮಾಡಬೇಕು. ಪಟ್ಟಣದಲ್ಲಿರುವ ವಿದ್ಯುತ್‌ ಸಮಸ್ಯೆಗಳನ್ನು ಪರಿಹರಿಸುವಂತೆ ಸಭೆಯಲ್ಲಿದ್ದ ರೈತ ಮುಖಂಡರು ಒತ್ತಾಯಿಸಿದರು.

ಈ ವೇಳೆ ಅಧಿಕಾರಿಗಳಾದ ಎಸ್‌.ಎ. ಪಾರ್ಥನಹಳ್ಳಿ, ಎನ್‌.ಬಿ. ನೇಮನ್ನವರ, ವಿ.ಎ. ಘನಿ, ಟಕ್ಕನ್ನರ, ಮಲಕ್ಕಪ್ಪ, ಪಾರೀಶ ಶಿವಣ್ಣವರ, ಎಂ.ಸಿ. ತಾಂಬೂಳಿ, ರಾಜು ಜಂಬಗಿ ಸೇರಿದಂತೆ ಅನೇಕ ರೈತರು ಮತ್ತು ಗ್ರಾಹಕರು ಇದ್ದರು.

ನಾಳೆ ಹೆಸ್ಕಾಂ ಗ್ರಾಹಕರ ಸಭೆ:

 ಹೆಸ್ಕಾಂ ಗ್ರಾಮೀಣ ಉಪ ವಿಭಾಗ-2ರ ಬಾಳೇಕುಂದ್ರಿ ಶಾಖೆ ವ್ಯಾಪ್ತಿಗೆ ಬರುವ ಗ್ರಾಮಗಳ ಗ್ರಾಹಕರ ಸಭೆಯನ್ನು ಜು.22ರಂದು ಬೆಳಿಗ್ಗೆ 10ಗಂಟೆಗೆೆ ಪಂತ ಬಾಳೇಕುಂದ್ರಿಯ ಪಂತ ನಗರದ ಶಿವಾಲಯ ಮಂದಿರದಲ್ಲಿ ಆಯೋಜಿಸಲಾಗಿದೆ. ಮೊದಗಾ, ಪಂತ ಬಾಳೇಕುಂದ್ರಿ, ಹೋಣ್ಣಿಹಾಳ, ಸುಳೆಭಾವಿ, ಮಾರಿಹಾಳ ಕರಡಿಗುದ್ದಿ, ಸಾಂಬ್ರಾ, ತಾರಿಹಾಳ, ಚಂದನ ಹೊಸುರ, ಮಾವಿನಕಟ್ಟಿ, ಯದ್ದಲಭಾವಿಹಟ್ಟಿ, ಬಾಳೇಕುಂದ್ರಿ ಕೆಎಚ್ ಹಾಗೂ ಹಲಗಾ, ಬಸ್ತವಾಡ, ಕೊಂಡಸಕೊಪ್ಪ, ಶಗನಮಟ್ಟಿ, ಮಾಸ್ತಮರ್ಡಿ, ಬಸರಿಕಟ್ಟಿ, ಶಿಂಡೊಳ್ಳಿ, ಮುತಗಾ, ನಿಲಜಿ ಗ್ರಾಮದ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ಅದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.