ಸಮಸ್ಯೆಗೆ ಸ್ಪಂದಿಸಲು ಹೆಸ್ಕಾಂ ಸಿದ್ಧ: ಶೇಖರ
•ಗ್ರಾಹಕರ ಕುಂದು-ಕೊರತೆ, ಸಂವಾದ ಸಭೆ•ಅಪಾಯದ ವಿದ್ಯುತ್ ಕಂಬ ತೆರವಿಗೆ ಮನವಿ
Team Udayavani, Jul 21, 2019, 11:05 AM IST
ಅಥಣಿ: ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಕುಂದು-ಕೊರತೆ ಸಭೆ ನಡೆಯಿತು.
ಅಥಣಿ: ಗ್ರಾಹಕ ಮತ್ತು ರೈತರ ಕುಂದು-ಕೊರತೆಗಳನ್ನು ಸರಿ ಪಡಿಸುವುದು ಹೆಸ್ಕಾಂನ ಕರ್ತವ್ಯವಾಗಿದ್ದು, ಎಲ್ಲ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಸಿದ್ಧ ಎಂದು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯ ಕಾರ್ಯನಿರ್ವಾಹಕ ಇಂಜಿನಿಯರ್ ಶೇಖರ ಬಹುರೂಪಿ ಹೇಳಿದರು.
ಹುಬ್ಬಳ್ಳಿ ವಿದ್ಯತ್ ಸರಬರಾಜು ಕಂಪನಿಯ ಕಾರ್ಯ ಮತ್ತು ಪಾಲನಾ ಅಥಣಿ ವಿಭಾಗದಲ್ಲಿ ಗ್ರಾಹಕರ ಕುಂದು-ಕೊರತೆ ಮತ್ತು ಸಂವಾದ ಸಭೆಯಲ್ಲಿ ಅವರು ಮಾತನಾಡಿದರು.
ಹೆಸ್ಕಾಂ ನಿಗಮದಿಂದ ವಿದ್ಯುತಿನ ಕುರಿತು ಮತ್ತು ಇದಕ್ಕೆ ಸಂಬಂಧಿಸಿದಂತೆ ಇನ್ನಿತರ ಯಾವುದೇ ಕೆಲಸಗಳಿಗೆ ನಿಗಮ ಮತ್ತು ಅಧಿಕಾರಿಗಳು ಗ್ರಾಹಕರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಮಾಡುತ್ತಾ ಬಂದಿದ್ದಾರೆ. ಮುಂದೆಯೂ ಮಾಡುತ್ತಾರೆ. ನಿಗಮದವರಿಗೆ ಸಾರ್ವಜನಿಕರ ಮತ್ತು ರೈತರ ಸಹಕಾರ ಅಗತ್ಯವಾಗಿದೆ ಎಂದರು.
ಗ್ರಾಹಕರು ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ನಮ್ಮ ಬಳಿ ತೆಗೆದುಕೊಂಡು ಬಂದರೆ ಅಂಥವರ ಸಮಸ್ಯೆಗೆ ತಕ್ಷಣವೇ ಸ್ಪಂದಿಸುವುದರ ಜತೆಗೆ ಸಮಸ್ಯೆಯನ್ನು ಇತ್ಯರ್ಥಪಡಿಸಿಕೊಳ್ಳ ಬಹುದಾಗಿದೆ ಎಂದು ತಿಳಿಸಿದರು.
ವಿದ್ಯುತ್ ಕಂಬಗಳಿಗೆ ಅಳವಡಿಸಿದ ಹಳೆ ವಾಯರ್ಗಳನ್ನು ಬದಲಾವಣೆ ಮಾಡಬೇಕು. ಮಾರ್ಗದಾಳಗಳು ಸ್ಥಾನಿಕ ಸ್ಥಳದಲ್ಲಿ ಇರುವಂತಾಗಬೇಕು. ಅಪಾಯ ಹಾಗೂ ಮುರಿಯುವ ಸ್ಥಿತಿಯಲ್ಲಿರುವ ವಿದ್ಯುತ್ ಕಂಬಗಳನ್ನು ತಕ್ಷಣ ಬದಲಾವಣೆ ಮಾಡಬೇಕು. ಪಟ್ಟಣದಲ್ಲಿರುವ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವಂತೆ ಸಭೆಯಲ್ಲಿದ್ದ ರೈತ ಮುಖಂಡರು ಒತ್ತಾಯಿಸಿದರು.
ಈ ವೇಳೆ ಅಧಿಕಾರಿಗಳಾದ ಎಸ್.ಎ. ಪಾರ್ಥನಹಳ್ಳಿ, ಎನ್.ಬಿ. ನೇಮನ್ನವರ, ವಿ.ಎ. ಘನಿ, ಟಕ್ಕನ್ನರ, ಮಲಕ್ಕಪ್ಪ, ಪಾರೀಶ ಶಿವಣ್ಣವರ, ಎಂ.ಸಿ. ತಾಂಬೂಳಿ, ರಾಜು ಜಂಬಗಿ ಸೇರಿದಂತೆ ಅನೇಕ ರೈತರು ಮತ್ತು ಗ್ರಾಹಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ
MUST WATCH
ಹೊಸ ಸೇರ್ಪಡೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…