ನೆರೆಹಾವಳಿ ನಿಯಂತ್ರಣಕ್ಕೆ ಉನ್ನತ ಮಟ್ಟದ ಸಮಿತಿ


Team Udayavani, Jun 6, 2020, 11:41 AM IST

ನೆರೆಹಾವಳಿ ನಿಯಂತ್ರಣಕ್ಕೆ ಉನ್ನತ ಮಟ್ಟದ ಸಮಿತಿ

ಬೆಳಗಾವಿ: ನೆರೆಹಾವಳಿ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ರಾಜ್ಯಮಟ್ಟದಲ್ಲಿ ಉನ್ನತಮಟ್ಟದ ಸಮಿತಿ ರಚನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಲ ಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಶುಕ್ರವಾರ ನೆರೆಹಾವಳಿ ಮತ್ತು ಮುನ್ನೆಚ್ಚರಿಕೆ ಕ್ರಮಗಳಿಗೆ ಸಂಬಂಧಿಸಿದಂತೆ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನೆರೆಹಾವಳಿ ಎದುರಿಸಲು ಸರಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂದರು.

ಕಳೆದ ಬಾರಿ ಭಾರೀ ಮಳೆ ಹಾಗೂ ನದಿಗಳ ಪ್ರವಾಹದಿಂದ ಸಾಕಷ್ಟು ಪ್ರಮಾಣದಲ್ಲಿ ಹಾನಿ ಸಂಭವಿಸಿತ್ತು. ಸಾವಿರಾರು ಕುಟುಂಬಗಳು ಬೆಳೆ ಹಾಗೂ ಮನೆಗಳನ್ನು ಕಳೆದುಕೊಂಡಿದ್ದವು. ಹಲವಾರು ಗ್ರಾಮಗಳು ಮುಳುಗಡೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಈ ವರ್ಷವೂ ಪ್ರವಾಹ ಎದುರಾದರೆ ಅದನ್ನು ಸಮರ್ಥವಾಗಿ ಎದುರಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ನದಿ ತೀರದ ಗ್ರಾಮಗಳಲ್ಲಿ ಹೆಚ್ಚಿನ ಜಾಗೃತೆ ವಹಿಸಬೇಕು ಎಂದು ಸೂಚನೆ ನೀಡಿದರು.

ಬಳ್ಳಾರಿ ನಾಲಾ ಅತಿಕ್ರಮಣ: ನಗರದಲ್ಲಿ ಹಾದು ಹೋಗಿರುವ ಬಳ್ಳಾರಿ ನಾಲಾ ಕಳೆದ ವರ್ಷ ಬಹಳ ಅವಾಂತರಗಳನ್ನು ಸೃಷ್ಟಿಮಾಡಿದೆ. ಇದರಿಂದ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಕಾರಣ ಕೂಡಲೇ ದೊಡ್ಡ ಪ್ರಮಾಣದ ಹಿಟಾಚಿ ಬಳಸಿಕೊಂಡು ಈ ನಾಲಾದ ಸ್ವತ್ಛತೆ ಮಾಡಬೇಕು. ನಾಲಾದ ಅತಿಕ್ರಮಣಕ್ಕೆ ಸಂಬಂಧಿಸಿದಂತೆ ಸಮೀಕ್ಷೆ ಕಾರ್ಯ ಮುಂದುವರಿಸಬೇಕು ಎಂದು ಮಹಾ ನಗರಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದಕ್ಕೆ ಪೂರಕವಾಗಿ ಮಾತನಾಡಿದ ಶಾಸಕ ಅಭಯ ಪಾಟೀಲ, ನಗರದಲ್ಲಿನ ನಾಲಾಗಳನ್ನು ಅತಿಕ್ರಮಣದಿಂದ ಮುಕ್ತ ಗೊಳಿಸಿದರೆ ಮಳೆಗಾಲದಲ್ಲಿ ಅನಾಹುತ ತಪ್ಪಿಸಬಹುದು. ಆದ್ದರಿಂದ ಯಾವುದೇ ಒತ್ತಡಕ್ಕೆ ಮಣಿಯದೆ ನಿರ್ದಾಕ್ಷಿಣ್ಯವಾಗಿ ನಾಲಾಗಳ ಅತಿಕ್ರಮಣ ತೆರವುಗೊಳಿಸಬೇಕು ಎಂದು ಮನವಿ ಮಾಡಿದರು.

ಪ್ರವಾಹ ಮುಂಜಾಗೃತಾ ಕ್ರಮಗಳ ಬಗ್ಗೆ ವಿವರ ನೀಡಿದ ಜಿಲ್ಲಾಧಿಕಾರಿ ಎಸ್‌.ಬಿ. ಬೊಮ್ಮನಹಳ್ಳಿ, ಕಳೆದ ಬಾರಿಯ ನೆರೆ ಹಾವಳಿಯ ಸ್ಥಿತಿಗತಿಯ ಅಧ್ಯಯನ ನಡೆಸಿ ಈ ಬಾರಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರವಾಹ ನಿರ್ವಹಣೆಗೆ ತಾಲೂಕುಮಟ್ಟದ ಟಾಸ್ಕಫೋರ್ಸ್‌ ಸಭೆಗಳನ್ನು ನಡೆಸಲು ಸೂಚಿಸಲಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಪ್ರಚಾರ ಸಾಮಗ್ರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಬಿಡುಗಡೆ ಮಾಡಿದರು. ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಜಿ ಪಂ ಅಧ್ಯಕ್ಷೆ ಆಶಾ ಐಹೊಳೆ, ಉಪಾಧ್ಯಕ್ಷ ಅರುಣ ಕಟಾಂಬಳೆ, ಪೊಲೀಸ್‌ ಆಯುಕ್ತ ಲೋಕೇಶಕುಮಾರ, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಂದ್ರ ಕೆ. ವಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.