ಗ್ರಾಮೀಣ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ: ಜೊಲ್ಲೆ
Team Udayavani, Jan 16, 2021, 6:04 PM IST
ಚಿಕ್ಕೋಡಿ: ಗಳತಗಾ ಹಾಗೂ ಬೋರಗಾಂವ ಗ್ರಾಮದಲ್ಲಿ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯಗಳಲ್ಲಿ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಪರಿಗಣಿಸಿ ಬೋರಗಾಂವ ಹಾಗೂ ಗಳಗತಾ ಕಾಲೇಜಿಗೆ ಹೆಚ್ಚುವರಿ ತರಬೇತಿ ಕೊಠಡಿಗಳು ಹಾಗೂ ಶೌಚಾಲಯ ನಿರ್ಮಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಅನುದಾನ ಮಂಜೂರಾಗಿದೆ. ಗಳಗತಾ ಕಾಲೇಜಿಗೆ 1ಕೋಟಿ ರೂ. ಬಿಡುಗಡೆಯಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಶುಕ್ರವಾರ ಗಳಗತಾ ಗ್ರಾಮದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಹೆಚ್ಚುವರಿ ತರಬೇತಿ ಕೊಠಡಿಗಳ ನಿರ್ಮಾಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮೀಣ ರೈತರ ಮಕ್ಕಳಿಗೆ ಶಿಕ್ಷಣದ ಲಾಭ ಸಿಗಲೆಂದು ಪ್ರಯತ್ನಿಸಲಾಗುತ್ತಿದೆ. ಗಳಗತಾ ಗ್ರಾಮದ ಕಾಲೇಜಿನಲ್ಲಿ ಗಳಗತಾ, ಬೇಡಕಿಹಾಳ, ನೇಜ, ಭಿಮಾಪುವಾಡಿ ಸೇರಿದಂತೆ ಬೇರೆ ಬೇರೆ ಭಾಗಗಳಿಂದ 300 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರುತ್ತಾರೆ. ತರಬೇತಿ ಕೋಠಡಿಗಳ ತೊಂದರೆ ಇತ್ತು. ಸರಿಯಾಗಿ ಶೌಚಾಲಯಗಳು ಇರಲಿಲ್ಲ. ಸಮಸ್ಯೆಗೆ ಸ್ಪಂದಿ ಸಿ 4 ಕ್ಲಾಸ ರೂಂ, 2 ಶೌಚಾಲಗಳನ್ನು ನಿರ್ಮಿಸಲು 1 ಕೋಟಿ ಅನುದಾನ ಮಂಜೂರಾಗಿದೆ. ಈ ಹಿಂದೆ ಕೂಡ 2 ಕೊಠಡಿ ನಿರ್ಮಿಸಲು 55 ಲಕ್ಷ ಅನುದಾನ ಮಂಜೂರು ಮಾಡಲಾಗಿತ್ತು. ಈ ಕಾಮಗಾರಿ ಮುಕ್ತಾಯಗೊಂಡಿದ್ದು, ಹೊಸ ಕಾಮಗಾರಿ ಪ್ರಾರಂಭವಾಗಿದೆ ಎಂದರು.
ನಿಪ್ಪಾಣಿ ತಾಲೂಕಿನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಶೀಘ್ರವೇ ಭರಿಸಲಾಗುವದು. ಶಿಕ್ಷಣದ ಗುಣಮಟ್ಟ ಹೆಚ್ಚಳಕ್ಕೆ ಶಿಕ್ಷಕರ ಸಮಸ್ಯೆಗಳಿಗೆ ಕೂಡ ಸ್ಪಂದಿ ಸಲಾಗುತ್ತಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಇದನ್ನೂ ಓದಿ:ಕೋವ್ಯಾಕ್ಸಿನ್ ನಿಂದ ಅಡ್ಡಪರಿಣಾಮ ಸಂಭವಿಸಿದರೆ ಪರಿಹಾರ ಕೊಡುತ್ತೇವೆ; ಭಾರತ್ ಬಯೋಟೆಕ್
ಇಲಾಖೆ ಉಪನಿರ್ದೇಶಕ ಎಂ.ಎಂ. ಕಾಂಬಳೆ,ಲೋಕೋಪಯೋಗಿ ಇಲಾಖೆ ಅಭಿಯಂತ ಬಿ.ಬಿ.ಬೇಡಕಿಹಾಳೆ, ಶಿವಾನಂದ ಖೋತ, ಲಕ್ಷ್ಮಣ ಶಿಪ್ಪುರೆ, ಭರತ ನಸಲಾಪುರೆ, ಬಾಬಾಸಾಬ ಜಾಧವ, ಮಿಥುನ ಪಾಟೀಲ, ರಾಹುಲ ವಕಪೋತೆ, ಶಿವಾನಂದ ಗಿಂಡೆ, ವಿಜಯ ಸಂಗಪ್ಪಗೋಳ, ರಾವಸಾಬ ಪಾಟೀಲ, ಅಲಗೋಂಡಾ ಪಾಟೀಲ, ರಾಜು ವಿಭೂತೆ, ಅನ್ನಪೂರ್ಣ ಐಹೊಳೆ, ಇರಗೊಂಡಾ ಪಾಟೀಲ, ಪ್ರಮಿಳಾ ಪಾಟೀಲ, ಅಮರನಾಥ ಸದಲಗೆ ಸೇರಿದಂತೆ ಶಿಕ್ಷಕರು, ಪಾಲಕರು, ವಿದ್ಯಾರ್ಥಿಗಳು ಹಾಜರಿದ್ದರು. ಆರ.ಜಿ. ಸಾವೋಜಿ ಸ್ವಾಗತಿಸಿದರು. ಪ್ರಾಂಶುಪಾಲ ಎಂ.ಬಿ.ಜಾಧವ ವಂದಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ