ಹಿರೇಬಾಗೇವಾಡಿ ಶಾಲೆಗಳು ಸಮಸ್ಯೆ ಆಗರ

ಗ್ರಾಮದ ಬಾಲಕರ-ಬಾಲಕಿಯರ ಹಾಗೂ ಆಂಗ್ಲ ಮಾಧ್ಯಮ ಶಾಲೆಗಳಲ್ಲಿವೆ ಅನೇಕ ಕುಂದು ಕೊರತೆ

Team Udayavani, Jul 4, 2022, 4:40 PM IST

21

ಹಿರೇಬಾಗೇವಾಡಿ: ಗ್ರಾಮದ ಸರ್ಕಾರಿ ಶಾಲೆಗಳು ಶಿಕ್ಷಕರ ಕೊರತೆ, ಶಿಥಿಲ ಕೊಠಡಿಗಳು ಮೊದಲಾದ ಸಮಸ್ಯೆಗಳಿಂದ ಬಳಲುತ್ತಿದ್ದು, ದಿಧೀರ್ಘಾವಧಿಯ ಸಮಸ್ಯೆಗಳು ಇನ್ನೂ ಜೀವಂತವಾಗಿರುವುದಕ್ಕೆ ಪಾಲಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶತಮಾನದ ಇತಿಹಾಸವನ್ನು ಹೊಂದಿರುವ ಇಲ್ಲಿನ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯು ಇಂದು ಭರ್ಜರಿ ಸರ್ಜರಿಯ ನಿರೀಕ್ಷೆಯಲ್ಲಿದೆ. ಇಲ್ಲಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಒಂದು ಅಚ್ಚುಕಟ್ಟಾದ ಶೌಚಾಲಯ, ನೀರಿನ ಸೌಕರ್ಯ ಇಲ್ಲ. ಇನ್ನು ಮಳೆಗಾಲ ಬಂತೆಂದರೆ ಸಾಕು, ವಿದ್ಯಾರ್ಥಿಗಳ ಪಾಠಕ್ಕೆ ತೊಂದರೆ ತಪ್ಪಿದ್ದಲ್ಲ. ಕಾರಣ ಇಲ್ಲಿನ 9 ಶಾಲಾ ಕೊಠಡಿಗಳು ಮಳೆಯಲ್ಲಿ ಸೋರುತ್ತವೆ. ಕುಡಿಯುವ ನೀರು ಹಾಗೂ ಅನ್ನದಾಸೋಹ ಕೊಠಡಿಯೂ ಸೇರಿದಂತೆ ಇತರೆ ಮೂಲ ಸೌಕರ್ಯಗಳ ಕೂರತೆ ಇಲ್ಲಿದೆ. ಸರ್ಕಾರದ ಯಾವುದೇ ಯೋಜನೆಗಳು ಬಂದರೂ ಸಹ ಅವು ಈ ಶಾಲೆಗೆ ಲಭ್ಯವಾಗುವುದು ಅಷ್ಟಕ್ಕಷ್ಟೇ ಎಂಬ ಕೊರಗು ಇಲ್ಲಿನ ಪಾಲಕರು ಹಾಗೂ ಎಸ್‌ಡಿಎಂಸಿ ಸದಸ್ಯರದ್ದು.

ವಿದ್ಯಾರ್ಥಿಗಳಿದ್ದಾರೆ, ಶಿಕ್ಷಕರಿಲ್ಲ!: ಕೋವಿಡ್‌ ನಂತರದ ಬೆಳಗಣಿಗೆಯಲ್ಲಿ ಪಾಲಕರು ಮತ್ತೆ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಅಲ್ಲದೆ ಆಂಗ್ಲ ಮಾಧ್ಯಮ ಶಾಲೆಯು ಪ್ರಾರಂಭವಾಗಿದ್ದು, ವರ್ಷದಿಂದ ವರ್ಷಕ್ಕೆ ನಿಧಾನವಾಗಿ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಮಕ್ಕಳ ಅನುಪಾತಕ್ಕೆ ತಕ್ಕಂತೆ ಶಿಕ್ಷಕರೇ ಇಲ್ಲ. ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ 172 ವಿದ್ಯಾರ್ಥಿಗಳಿದ್ದು, ಪ್ರಧಾನ ಗುರು ಶಿಕ್ಷಕರು ಸೇರಿದಂತೆ ಕೇವಲ 4 ಶಿಕ್ಷಕರಿದ್ದಾರೆ. ಅದರಲ್ಲೂ ವಿಜ್ಞಾನ, ಗಣಿತ ವಿಷಯ ಶಿಕ್ಷಕರೇ ಇಲ್ಲ. ಶಾಲೆಗೆ ಮಕ್ಕಳನ್ನು ಸೇರಿಸುವ ಪಾಲಕರು ನಂತರ ಶಿಕ್ಷಕರು ಇಲ್ಲದ ಕಾರಣಕ್ಕೆ 15 ಮಕ್ಕಳ ಟಿಸಿ ತೆಗೆದುಕೊಂಡು ಖಾಸಗಿ ಶಾಲೆಗೆ ದಾಖಲಿಸಿದ್ದಾರೆ.

ಗ್ರಾಮದ ಸರ್ಕಾರಿ ಹೆಣ್ಣು ಮಕ್ಕಳ ಶಾಲೆಯಲ್ಲಿ 107 ವಿದ್ಯಾರ್ಥಿನಿಯರಿದ್ದು, ಇಲ್ಲಿಯೂ ಅತಿಥಿ ಶಿಕ್ಷಕರು ಸೇರಿದಂತೆ ಮಾತ್ರ ನಾಲ್ವರು ಶಿಕ್ಷಕರಿದ್ದಾರೆ. ಸರ್ಕಾರ ಶಾಲಾ ಮಕ್ಕಳು, ಶಾಲೆ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ರೂಪಿಸುತ್ತಿದೆ. ಆದರೆ ಮುಖ್ಯವಾಗಿ ಶಿಕ್ಷಕರೇ ಇಲ್ಲವೆಂದರೆ ಹೇಗೆ? ಶಿಕ್ಷಕರೇ ಇಲ್ಲದ ಶಾಲೆ ಇದ್ದರೆಷ್ಟು ಬಿಟ್ಟರೆಷ್ಟು ಎಂಬ ಹತಾಶ ಭಾವನೆ ಸಾರ್ವಜನಿಕರಲ್ಲಿ ಮೂಡುತ್ತಿದೆ. ವಿಷಯ ಪರಿಣಿತ ಶಿಕ್ಷಕರಿಲ್ಲದೆ ಎಷ್ಟೋ ವರ್ಷಗಳಾಗಿವೆ. ಇದರಿಂದಾಗಿ ವಿಜ್ಞಾನ, ಗಣಿತ ಹಾಗೂ ಆಂಗ್ಲ ವಿಷಯಗಳ ಪರಿಣಾಮಕಾರಿ ಬೋಧನೆಯಿಂದ ಇಲ್ಲಿನ ವಿದ್ಯಾರ್ಥಿಗಳು ನಿತ್ಯ ವಂಚಿತರಾಗುತ್ತಿದ್ದಾರೆ. ಈ ಮೊದಲಿದ್ದ ವಿಷಯ ಪರಿಣಿತ ಶಿಕ್ಷಕ ಹುದ್ದೆ ಎಂದೊ ವಿಲೀನವಾಗಿದ್ದು, ಅತಿಥಿ ಶಿಕ್ಷಕರೂ ಇಲ್ಲದೆ ವಿದ್ಯಾರ್ಥಿಗಳು ತ್ರಿಶಂಕು ಸ್ಥಿತಿಯಲ್ಲಿದ್ದಾರೆ.

ಮೈದಾನವಿದೆ, ಆದರೆ ಆಟವೇ ಇಲ್ಲ!: ಶತಮಾನದ ಶಾಲೆ‌ಗೆ ವಿಶಾಲವಾದ ಆಟದ ಮೈದಾನವಿದೆ. ಆದರೆ ಇಲ್ಲಿ ಮಕ್ಕಳ ಆಟವೇ ನಿಂತು ಹೋಗಿದೆ. ಈ ಹಿಂದೆ ಮಕ್ಕಳ ಕೊರತೆ ಎಂಬ ಕಾರಣದಿಂದಾಗಿ ಇಲ್ಲಿದ್ದ ದೈಹಿಕ ಶಿಕ್ಷಕರ ಹುದ್ದೆ ರದ್ದಾಗಿದೆ. ಇದು ಮಕ್ಕಳ ಬಾಹ್ಯ ಹಾಗೂ ದೈಹಿಕ ಚಟುವಟಿಕೆಗಳ ನಿಲ್ಲುವಿಕೆಗೆ ಮುಖ್ಯ ಕಾರಣವಾಗಿದೆ. ಆದ್ದರಿಂದ ಸದ್ಯದ ಪರಿಸ್ಥಿತಿಯಲ್ಲಿ ಸರ್ಕಾರಿ ಗಂಡು ಹಾಗೂ ಹೆಣ್ಣು ಮಕ್ಕಳ ಶಾಲೆಗಳನ್ನು ವಿಲೀನಗೊಳಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಸೌಲಭ್ಯಗಳನ್ನು ನೀಡಬಹುದು ಎಂಬುದು ಪಾಲಕರ ಹಾಗೂ ಶಿಕ್ಷಣ ಪ್ರೇಮಿಗಳ ಆಗ್ರಹವಾಗಿದೆ.

ಶಿಕ್ಷಣ ಮಂತ್ರಿಗಳೇ ಮಕ್ಕಳ ಸಂಖ್ಯೆ ಕಡಿಮೆ ಇರುವ ಶಾಲೆಗಳನ್ನು ವಿಲೀನಗೊಳಿಸಿ ಎಂದು ಹೇಳಿದ್ದಾರೆ. ಹಾಗಾಗಿ ಮಕ್ಕಳ ದಾಖಲಾತಿಯ ತಾಂತ್ರಿಕ ಸಮಸ್ಯೆಗಳಿಗೆ ಮುಕ್ತಿ ನೀಡಲು ಗಂಡು ಹಾಗು ಹೆಣ್ಣು ಮಕ್ಕಳ ಶಾಲೆಗಳನ್ನು ವಿಲೀನಗೊಳಿಸಿ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ವ್ಯವಸ್ಥೆಗೆ ಅನುಕೂಲ ಮಾಡಿಕೊಡಬೇಕು.  –ಬಸವಣ್ಣಿಪ್ಪ ಗಾಣಗಿ, ರೈತ ಮುಖಂಡರು ಹಾಗೂ ಶಿಕ್ಷಣ ಪ್ರೇಮಿಗಳು

ಶಿಕ್ಷಕರೂ ಸೇರಿದಂತೆ ಇತರೇ ಎಲ್ಲಾ ಸಮಸ್ಯೆಗಳನ್ನು ನಿವಾರಿಸುವಲ್ಲಿ ಅತಿ ಶೀಘ್ರವೇ ಪಾಲಕರ ಹಾಗೂ ಸರ್ಕಾರಿ ಶಾಲಾ ಶಿಕ್ಷಣ ಪ್ರೇಮಿಗಳ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು.  –ಎಂ.ಎಸ್‌.ಮೇದಾರ,ಕ್ಷೇತ್ರ ಸಮನ್ವಯ ಅಧಿಕಾರಿ ಬೆಳಗಾವಿ ಗ್ರಾಮಾಂತರ ವಲಯ

-ಶಿವಾನಂದ ಮೇಟಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.