ಭ್ರಷ್ಟರನ್ನು ಮಟ್ಟ ಹಾಕುವವರೆಗೂ ವಿಶ್ರಮಿಸುವುದಿಲ್ಲ: ಆರಗ ಜ್ಞಾನೇಂದ್ರ ಗುಡುಗು


Team Udayavani, Jul 7, 2022, 3:40 PM IST

ಭ್ರಷ್ಟರನ್ನು ಮಟ್ಟ ಹಾಕುವವರೆಗೂ ವಿಶ್ರಮಿಸುವುದಿಲ್ಲ: ಆರಗ ಜ್ಞಾನೇಂದ್ರ ಗುಡುಗು

ಬೆಳಗಾವಿ: ಪಿಎಸ್ ಐ ಅಕ್ರಮ ಪರೀಕ್ಷಾ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳನ್ನು ಕಾನೂನಿನ ಕಕ್ಷೆಗೆ ತಂದು, ಭ್ರಷ್ಟರನ್ನು ಮಟ್ಟ ಹಾಕುವವರೆಗೂ ವಿಶ್ರಮಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಗುಡುಗಿದರು.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ ನಿಪ್ಪಾಣಿ ಶಹರ ಮತ್ತು ಗ್ರಾಮೀಣ ಪೊಲೀಸ್ ಠಾಣೆಗಳನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಸಚಿವರು, ಪಿಎಸ್ ಐ ಹಗರಣದ ತನಿಖೆ ಯಾವುದೇ ಹಸ್ತಕ್ಷೇಪ ಇಲ್ಲದೆ, ಅತ್ಯಂತ ಪಾರದರ್ಶಕವಾಗಿ ನಡೆಯುತ್ತಿದೆ ಎಂದರು.

ತನಿಖೆಯು ಅತ್ಯಂತ ನಿಷ್ಪಕ್ಷಪಾತ ವಾಗಿ ನಡೆಯುತ್ತಿದ್ದು, ಕಾಂಗ್ರೆಸ್ ನಾಯಕರು, ಹತಾಶರಾಗಿ ನ್ಯಾಯಾಂಗ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಕಾಂಗ್ರೆಸ್ ಸರಕಾರದ ಅವಧಿಯಲ್ಲಿ, ಸಿಐಡಿ ತನಿಖೆಗೆ ವಹಿಸಲಾದ ಹಲವಾರು ದೂರುಗಳ ಬಗ್ಗೆ  ಎಫ್ ಐಆರ್ ದಾಖಲಾಗಿಲ್ಲ, ಎಫ್ಐಆರ್ ಆದ ಪ್ರಕರಣಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗಿಲ್ಲ, ಆದರೆ ಈಗ ಪಿಎಸ್ ಐ ನೇಮಕ ಪ್ರಕರಣದಲ್ಲಿ ಪ್ರಾಮಾಣಿಕವಾಗಿ ತನಿಖೆ ಆಗುತ್ತಿರುವ ವಿಷಯದಲ್ಲಿ ನಮ್ಮ ಸರಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದರು.

ಬಿಜೆಪಿ ವಿರೋಧ ಪಕ್ಷವಾಗಿ ಕಡ್ಲೆಪುರಿ ತಿನ್ನುತ್ತಿದ್ದರಾ ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ಖಾರವಾಗಿ ಉತ್ತರಿಸಿದ ಸಚಿವರು ನಾವು ಕೇಳಿದ್ದೆವು, ಆದರೆ ಅವರು ಸ್ಪಂದಿಸಿರಲಿಲ್ಲ. ಹಾಗಾದರೆ ನಾವು ಪ್ರಶ್ನೆ ಮಾಡದೇ ಇರುವುದನ್ನು, ಅವರು ಕೇಸುಗಳನ್ನು ಮುಚ್ಚಿ ಹಾಕುವುದಕ್ಕೆ ಸಿಕ್ಕಿದ ಪರವಾನಿಗೆ ಎಂದು ತಿಳಿದಿದ್ದರೇ ಎಂದು ತಿರುಗೇಟು ನೀಡಿದರು.

ನನ್ನ ಹಾಗೂ ಮುಖ್ಯಮಂತ್ರಿಯವರ, ರಾಜೀನಾಮೆಗೆ ಒತ್ತಾಯಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಯಾವ ನೈತಿಕತೆ ಇದೆ ಎಂದು ಸಚಿವರು ಪ್ರಶ್ನಿಸಿದರು.

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkodi; ಕಾರ್ಯಕರ್ತರ ಅಭಿಪ್ರಾಯ ಪಡೆದ ಸತೀಶ ಪುತ್ರಿ ಪ್ರಿಯಾಂಕಾ

Chikkodi; ಕಾರ್ಯಕರ್ತರ ಅಭಿಪ್ರಾಯ ಪಡೆದ ಸತೀಶ ಪುತ್ರಿ ಪ್ರಿಯಾಂಕಾ

ಎಲ್ಲ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಹೇಳಲ್ಲ, ಆದರೆ… ಸತೀಶ ಜಾರಕಿಹೋಳಿ ಹೇಳಿದ್ದೇನು?

ಎಲ್ಲ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಹೇಳಲ್ಲ, ಆದರೆ… ಸತೀಶ ಜಾರಕಿಹೋಳಿ ಹೇಳಿದ್ದೇನು?

Chikkodi ಎಲ್ಲರ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಘೋಷಣೆ: ಸತೀಶ ಜಾರಕಿಹೊಳಿ 

Chikkodi ಮುಖಂಡರ ಅಭಿಪ್ರಾಯ ಪಡೆದು ಅಭ್ಯರ್ಥಿ ಫೈನಲ್‌: ಸಚಿವ ಸತೀಶ ಜಾರಕಿಹೊಳಿ 

ರಾಜ್ಯದ ಬಿಜೆಪಿ ಸಂಸದರು ಶೋಕೇಸ್‌ ಪೀಸ್‌ಗಳು: ಲಕ್ಷ್ಮಣ ಸವದಿ

ರಾಜ್ಯದ ಬಿಜೆಪಿ ಸಂಸದರು ಶೋಕೇಸ್‌ ಪೀಸ್‌ಗಳು: ಲಕ್ಷ್ಮಣ ಸವದಿ

Belagavi ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಲಕ್ಷ್ಮಣರಾವ್ ಚಿಂಗಳೆ ನೇಮಕ

Belagavi ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಲಕ್ಷ್ಮಣರಾವ್ ಚಿಂಗಳೆ ನೇಮಕ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.