ಕೋವಿಡ್ ತಡೆಗೆ ಬಿಟ್ಟಿದ್ದ ದೈವದ ಕುದುರೆಯೇ ಸಾವು!
ಕಂಗಾಲಾದ ಮರಡಿಮಠ ಗ್ರಾಮಸ್ಥರು ! ಅಂತ್ಯಕ್ರಿಯೆಯಲ್ಲಿ ಸಾವಿರಾರು ಜನ ಭಾಗಿ! ಕೊರೊನಾ ಭೀತಿಯಲ್ಲಿ ಸೀಲ್ಡೌನ್
Team Udayavani, May 24, 2021, 6:55 PM IST
ಗೋಕಾಕ: ತಾಲೂಕಿನ ಇತಿಹಾಸ ಪ್ರಸಿದ್ಧ ಸುಕ್ಷೇತ್ರ ಮರಡಿಮಠ(ಕೊಣ್ಣೂರ)ದಲ್ಲಿ ದೈವದ ಕುದುರೆಯನ್ನು ಸಾಂಕ್ರಾಮಿಕ ರೋಗದಿಂದ ಪಾರಾಗಲು ಗ್ರಾಮದಲ್ಲಿ ತಿರುಗಾಡಿಸುವ ಪ್ರತೀತಿ ಇದ್ದು, ಕೋವಿಡ್ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ತಿರುಗಾಡಿದ ಕುದುರೆ ನಾಲ್ಕೇ ದಿನದಲ್ಲಿ ರವಿವಾರ ಸಾವಿಗೀಡಾಗಿ ಅಚ್ಚರಿ ಮೂಡಿಸಿದೆ.
ಇಲ್ಲಿಯ ಭಕ್ತರ ಬೇಡಿಕೆಯಂತೆ ಮರಡಿಮಠದ ಶ್ರೀ ಪವಾಡೇಶ್ವರ ಸ್ವಾಮೀಜಿ ಮಾರ್ಗದರ್ಶನದದಲ್ಲಿ ಗ್ರಾಮದ ಜನತೆ ಕಾಡಸಿದ್ಧೇಶ್ವರ ಸ್ವಾಮಿ ಅವರ ಶೌರ್ಯ ನಾಮದ ಕುದುರೆಯನ್ನು ಬುಧವಾರ ಮಧ್ಯರಾತ್ರಿ 12 ಗಂಟೆಯಿಂದ ಗುರುವಾರ ಬೆಳಗ್ಗೆ 4 ಗಂಟೆಯವರೆಗೆ ಗ್ರಾಮದಲ್ಲಿ ಸಂಚರಿಸಲು ಬಿಡಲಾಗಿತ್ತು. ಆದರೆ ಕುದುರೆ ಗ್ರಾಮದಲ್ಲಿ ಸಂಚರಿಸಿದ ಕೆಲವೇ ದಿನಗಳಲ್ಲಿ ಮೃತಪಟ್ಟಿದೆ. ಇದು ಅಚ್ಚರಿ ಅಲ್ಲದೇ ಗ್ರಾಮಸ್ಥರು ಚಿಂತೆಗೂ ಕಾರಣವಾಗಿದೆ.
ಕುದುರೆ ಸಾವಿನ ಸುದ್ದಿ ತಿಳಿದ ಭಕ್ತರಿಗೆ ದೊಡ್ಡ ಆಘಾತವಾಗಿದ್ದು, ಗ್ರಾಮದ ಸುತ್ತಲಿನ ಸಾವಿರಾರು ಮಂದಿ ಕುದುರೆಯ ಕಳೆಬರ ನೋಡಲು ಆಗಮಿಸಿದ್ದರು. ಅಂತ್ಯಸಂಸ್ಕಾರಕ್ಕೆ ಸಾವಿರಾರು ಜನ ಜಮಾಯಿಸಿ ಕೋವಿಡ್ ಸಮಯದಲ್ಲೂ ದೈವ ಕುದುರೆಯ ದರ್ಶನ ಪಡೆದರು. ಕುದುರೆಯು ನಮ್ಮ ಊರಿಗೆ ಬಂದ ಕಂಟಕವನ್ನು ತನ್ನ ಮೈಮೇಲೆ ಹಾಕಿಕೊಂಡು ಇಹಲೋಕವನ್ನು ತ್ಯಜಿಸಿದೆ ಎಂದು ಭಕ್ತರು ಕಣ್ಣೀರು ಸುರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ