ಸಕ್ಕರೆ ಧಣಿಗಳ ನಡುವೆ ಉಕ್ಕೇರಿದ ಚುನಾವಣಾ ಕದನ


Team Udayavani, Apr 26, 2018, 6:25 AM IST

hukkeri-assembly-constituen.jpg

ಬೆಳಗಾವಿ: ಅಭಿವೃದ್ಧಿ ವಿಷಯದಲ್ಲಿ ಉತ್ತರ ಕರ್ನಾಟಕ ನಿರ್ಲಕ್ಷ್ಯಕ್ಕೊಳಗಾಗಿದ್ದು ಅದಕ್ಕಾಗಿ ಪ್ರತ್ಯೇಕ ರಾಜ್ಯ ಆಗಬೇಕು ಎಂದು ಆಗಾಗ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗುವ ಉಮೇಶ ಕತ್ತಿ ಹಾಗೂ ಜನತಾ ಪರಿವಾರದಲ್ಲಿ ಸಚಿವರಾಗಿ ಕೆಲಸ ಮಾಡಿದ ಅನುಭವಿ ರಾಜಕಾರಣಿ ಎ.ಬಿ. ಪಾಟೀಲ ಹುಕ್ಕೇರಿ ಕ್ಷೇತ್ರದ ಸ್ಟಾರ್‌ ಅಭ್ಯರ್ಥಿಗಳು. ಇಬ್ಬರೂ ಮೂಲತಃ ಜನತಾಪರಿವಾರದವರು. ರಾಜಕೀಯ ಭವಿಷ್ಯ ಕಂಡುಕೊಂಡಿದ್ದು ಇದೇ ಪರಿವಾರದಿಂದ. ನಂತರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಕತ್ತಿ ಬಿಜೆಪಿ ಶಾಸಕರಾದರೆ ಎ.ಬಿ. ಪಾಟೀಲ ಎರಡು ಬಾರಿ ಜನತಾದಳ ಹಾಗೂ ಒಂದು ಸಲ ಕಾಂಗ್ರೆಸ್‌ದಿಂದ ಶಾಸಕರಾದವರು. ಸಕ್ಕರೆ ಕಾರ್ಖಾನೆಯ ರಾಜಕಾರಣದಿಂದ ಇಬ್ಬರೂ ರಾಜಕೀಯದಲ್ಲಿ ನೆಲೆ ಕಂಡುಕೊಂಡಿರುವುದು ಇಲ್ಲಿನ ವಿಶೇಷ.

ಉಮೇಶ ಕತ್ತಿ ಈ ಕ್ಷೇತ್ರದ ಸರದಾರ. 2004 ರ ಚುನಾವಣೆ ಒಂದು ಹೊರತುಪಡಿಸಿದರೆ 1985 ರಿಂದ 2008 ರವರೆಗೆ ಎಲ್ಲ ಚುನಾವಣೆಗಳಲ್ಲಿ ಕತ್ತಿಯದ್ದೇ ಜಯಗಳಿಸಿದ್ದಾರೆ.

ಟರ್ನಿಂಗ್‌ ಪಾಯಿಂಟ್‌
ಇಲ್ಲಿ ಸತತ ಗೆದ್ದು ದಾಖಲೆ ಬರೆದಿರುವ ಕತ್ತಿಗೆ ಅವರ ಹಳೆಯ ಎದುರಾಳಿ ಎ.ಬಿ. ಪಾಟೀಲ ಮತ್ತೆ ಕಾಂಗ್ರೆಸ್‌ನಿಂದ 
ಮುಖಾಮುಖೀಯಾಗಿದ್ದಾರೆ. ಕತ್ತಿ ಅಭಿವೃದಿಟಛಿ ಕೆಲಸ ಮಾಡಿದ್ದರೂ ಕ್ಷೇತ್ರದ ಒಂದು ಭಾಗದ ಜನ ಬದಲಾವಣೆ ಕಡೆ ಮುಖ ಮಾಡಿದ್ದಾರೆ. ಇದು ಮತ್ತೆ ಕಾಂಗ್ರೆಸ್‌ದಿಂದ ಅಖಾಡಾಕ್ಕೆ ಇಳಿದಿರುವ ಎ.ಬಿ.ಪಾಟೀಲಗೆ ಟರ್ನಿಂಗ್‌ ಪಾಯಿಂಟ್‌ ಆಗಬಹುದು.

ಸ್ಪರ್ಧಿಗಳು:
– ಉಮೇಶ ಕತ್ತಿ: ಹುಕ್ಕೇರಿ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ. ಈ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರ ಎಂಬ ಖ್ಯಾತಿ ಇವರದ್ದು. 2004 ಮತ್ತು 2008 ರಲ್ಲಿ ಜೆಡಿಎಸ್‌ದಿಂದ ಗೆದ್ದು ಬಂದಿದ್ದ ನಂತರ ಬಿಜೆಪಿ ಸೇರಿ 2008ರಲ್ಲಿ ನಡೆದ ಉಪಚುನಾವಣೆಯಲ್ಲಿ ಗೆದ್ದರು.

ಎ.ಬಿ.ಪಾಟೀಲ: ಕ್ಷೇತ್ರ ಪುನರ್‌ ವಿಂಗಡಣೆಗೆ ಮೊದಲು ಸಂಕೇಶ್ವರ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದ ಪಾಟೀಲ 1994ರಲ್ಲಿ ಜನತಾದಳದ ಮೂಲಕ ಮೊದಲ ಬಾರಿಗೆ ಶಾಸಕರಾದರು. 1999ರಲ್ಲಿ ಸಂಯುಕ್ತ ಜನತಾದಳದಿಂದ, 2004 ರಲ್ಲಿ ಕಾಂಗ್ರೆಸ್‌ ಪಕ್ಷ ಸೇರಿ 3ನೇ ಬಾರಿಗೆ ಶಾಸಕರಾದರು.

ಎಂ.ಬಿ.ಪಾಟೀಲ: ಜೆಡಿಎಸ್‌ ಅಭ್ಯರ್ಥಿ.

ನಿರ್ಣಾಯಕರು: ಈ ಕ್ಷೇತ್ರದ ವ್ಯಾಪ್ತಿಯಲ್ಲಿ ಹುಕ್ಕೇರಿ ಮತ್ತು ಸಂಕೇಶ್ವರ ಹೋಬಳಿ ಬರುತ್ತವೆ. ಲಿಂಗಾಯತ ಮತದಾರರ ಜೊತೆಗೆ ಮುಸ್ಲಿಂ ಸಮಾಜದ ಜನ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಅಭ್ಯರ್ಥಿಗಳ ಗೆಲುವಿನಲ್ಲಿ ಇವರೇ ನಿರ್ಣಾಯಕರು.

ಐದು ವರ್ಷಗಳಲ್ಲಿ ಸಾಧ್ಯವಾದಷ್ಟು ಪ್ರಮುಖ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಮಹಾರಾಷ್ಟ್ರದಿಂದ ಹಿರಣ್ಯಕೇಶಿಗೆ
ನದಿಗೆ ನೀರು ಬಿಡುಗಡೆ ಸಂಬಂಧ ಪ್ರಯತ್ನ ಮಾಡಿದ್ದೇನೆ. ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಸಮಾಧಾನ ಇದೆ. ಗೆಲುವಿಗೆ ಯಾವುದೇ ಸಮಸ್ಯೆ ಇಲ್ಲ.

– ಉಮೇಶ ಕತ್ತಿ

ಜನರಿಗೇ ಅವರು ಬೇಡವಾಗಿದ್ದಾರೆ.ಹೊಸ ನೀರಾವರಿ ಯೋಜನೆಗಳೇ ಇಲ್ಲ.ನಾವು ಪ್ರಯತ್ನ ಮಾಡಿ ತಂದ ಯೋಜನೆಗಳಿಗೆ ತಮ್ಮ ಹೆಸರು ಹೇಳಿಕೊಳ್ಳುತ್ತಿದ್ದಾರೆ. ಜಯಗಳಿಸುವ ವಿಶ್ವಾಸ ಇದೆ. ಈಗಿನ ನಾಯಕರ ಬಗೆಗಿನ ಬೇಸರ ನಮಗೆ ಟರ್ನಿಂಗ್‌ ಪಾಯಿಂಟ್‌ ಆಗಲಿದೆ. 
– ಎ.ಬಿ. ಪಾಟೀಲ

ಕ್ಷೇತ್ರದಲ್ಲಿ ಬದಲಾವಣೆಗೆ ಅವಕಾಶ ಕೊಟ್ಟಿದ್ದೇವೆ. ವಾತಾವರಣ ಬದಲಾಗುತ್ತಿದೆ. ಜನರೂ ಸಹ ಒಂದೇ ಮುಖ ನೋಡಿ
ಬೇಸತ್ತಿದ್ದಾರೆ. ಕ್ಷೇತ್ರದಲ್ಲಿ ಅಭಿವೃದಿಟಛಿ ಕಾಣುತ್ತಿಲ್ಲ. ಅಭಿವೃದ್ಧಿಯ ಹೆಸರಿನಲ್ಲಿ ಹಣ ಪೋಲಾಗುತ್ತಿದೆ. ಅವಕಾಶ ನೀಡಿದರೆ ಒಳ್ಳೆಯ ಕೆಲಸ ಮಾಡಬಹುದು. 

– ಎಂ.ಬಿ. ಪಾಟೀಲ

– ಕೇಶವ ಆದಿ

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.