ಹುಕ್ಕೇರಿ : ನಿವೃತ್ತ ಪಿಎಸ್ಐ ಪತ್ನಿಯ ಬರ್ಬರ ಹತ್ಯೆ ; ಚಿನ್ನಾಭರಣ ದೋಚಿ ಪರಾರಿ
ಒಂಟಿಯಾಗಿದ್ದುದನ್ನು ಕಂಡೆ ದುಷ್ಕೃತ್ಯ
Team Udayavani, Jun 15, 2022, 5:02 PM IST
ಹುಕ್ಕೇರಿ : ತಾಲೂಕಿನ ಹೊಸೂರು ಗ್ರಾಮದಲ್ಲಿ ಮಂಗಳವಾರ ರಾತ್ರಿ 9. 30ರ ವೇಳೆಗೆ ಕಳ್ಳರು ಮನೆಗೆ ನುಗ್ಗಿ ನಿವೃತ್ತ ಪಿಎಸ್ಐ ಪತ್ನಿ ಬಾಯಿಗೆ ಬಟ್ಟೆ ತುರುಕಿ ಬರ್ಬರವಾಗಿ ಹತ್ಯೆಗೈದು, ಕಪಾಟು ಒಡೆದು ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.
ಮಹಿಳೆಯ ಮೈಮೇಲೆ ಇದ್ದ ಚಿನ್ನಾಭರಣಗಳ ಸಮೇತ ದುಷ್ಕರ್ಮಿಗಳು ಪರಾರಿಯಾಗಿದ್ದು, ಘಟನೆ ಬಳಿಕ ಹೊಸೂರು ಗ್ರಾಮದ ಜನರು ಬೆಚ್ಚಿ ಬಿದ್ದಿದ್ದಾರೆ.
ಹತ್ಯೆಗೀಡಾದ ಮಹಿಳೆ ಮಾಲವ್ವಾ ಭೀಮರಾಯಿ ಅಕ್ಕತಂಗೇಹಾಳ(60)ಎನ್ನಲಾಗಿದೆ. ಆಕೆಯ ಪತಿ ಭೀಮರಾಯಿ ಅಕ್ಕತಂಗೇಹಾಳ ನಿವೃತ್ತ ಪಿಎಸ್ಐ ಆಗಿದ್ದು, ಅವರಿಗೆ ಇಬ್ಬರು ಪತ್ನಿಯರು ಎಂದು ಹೇಳಲಾಗಿದೆ.
ಮಹಿಳೆಯ ಮನೆಯ ಸುತ್ತ ಯಾವುದೇ ಮನೆಯಲ್ಲಿ ಜನರ ವಾಸ ಇರಲಿಲ್ಲ ಅದನ್ನು ಗಮನಿಸಿಯೇ ಕಳ್ಳರು ಮನೆಗೆ ನುಗ್ಗಿ ಈ ಕೃತ್ಯ ಎಸೆಗಿದ್ದಾರೆ. ಮೃತ ಮಾಲವ್ವಾ ಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಇಬ್ಬರೂ ಬಿಇ ವಿದ್ಯಾಭ್ಯಾಸ ಮುಗಿಸಿ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದಾರೆ.
ಘಟನೆ ಗಮನಕ್ಕೆ ಬಂದ ತಕ್ಷಣ ಗೋಕಾಕ್ ಡಿಎಸ್ಪಿ ರಮೇಶಕುಮಾರ ನಾಯಕ, ಯಮಕನಮರಡಿ ಸಿಪಿಐ ರಮೇಶ ಛಾಯಾಗೋಳ, ಪಿಎಸ್ಐ ಬಿ.ವಿ.ನಾಮಗೌಡರ ಸ್ಥಳಕ್ಕೆ ಭೇಟಿ ನೀಡಿ ಶ್ವಾನದಳವನ್ನು ಕರೆಸಿ ಪರಿಶೀಲನೆ ನಡೆಸಿದರು. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಸೂರ ಗ್ರಾಮದಲ್ಲಿ ಸರಣಿ ಕಳ್ಳತನ ನಡೆದರೂ, 2019 ರಲ್ಲಿ ಮಾಜಿ ಸಚಿವ ಶಶಿಕಾಂತ ಅವರ ಮನೆಯಲ್ಲಿ ಕಳ್ಳತನ, ಆರು ತಿಂಗಳ ಹಿಂದೆ ಗ್ರಾಮದ ಶ್ರೀ ಲಕ್ಷ್ಮೀ ದೇವಸ್ಥಾನ, ಇತರ ದೇವಾಲಯಗಳ ಹುಂಡಿ ಕಳ್ಳತನ, ಮೂರು ಮನೆಗಳ ಕಳ್ಳತನ ನಡೆದಿತ್ತು. ಹಲವು ಪ್ರಕರಣಗಳು ಗ್ರಾಮದಲ್ಲಿ ನಡೆದಿದ್ದರೂ ಪೊಲೀಸರು ಕಳ್ಳರನ್ನು ಹಿಡಿಯಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪ ಹೊಸೂರ ಗ್ರಾಮಸ್ಥರದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ
HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ
ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ
Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ
Belagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು