ಹೈದರಾಬಾದ್ ಪಾಲಿಕೆ ಫಲಿತಾಂಶ ಬಿಜೆಪಿಯ ವಿಶ್ವಾಸವನ್ನು ಹೆಚ್ಚಿಸಿದೆ: ಸಿ.ಟಿ ರವಿ
Team Udayavani, Dec 4, 2020, 8:19 PM IST
ಬೆಳಗಾವಿ: ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶದ ಮೂಲಕ ಬಿಜೆಪಿಯ ವಿಶ್ವಾಸ ಹೆಚ್ಚಿದೆ. ಇದರೊಂದಿಗೆ ಭಾಗ್ಯ ನಗರವಾಗುವತ್ತ ದಿಟ್ಡ ಹೆಜ್ಜೆ ಇಟ್ಟಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಸಿ.ಟಿ ರವಿ ಹೇಳಿದರು.
ಬೆಳಗಾವಿಯಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಹೈದರಾಬಾದ್ ಪಾಲಿಕೆಯಲ್ಲಿ ಬಿಜೆಪಿ ಸ್ಥಾನ 10 ಪಟ್ಟು ಹೆಚ್ಚಾಗಿದೆ. ಈ ಫಲಿತಾಂಶ ಮುಂದೆ ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸುಳಿವು ನೀಡಿದೆ ಎಂದರು.
ಹೈದರಾಬಾದ್ ಪಾಲಿಕೆಯ ಚುನಾವಣೆಯಲ್ಲಿ ಕಠಿಣ ಶ್ರಮಪಟ್ಟ ಕಾರ್ಯಕರ್ತರು ಯಶಸ್ವಿ ಸೀಮೋಲ್ಲಂಘನೆ ಮಾಡಿದ್ದಾರೆ. ಇದರೊಂದಿಗೆ ದಕ್ಷಿಣ ಭಾರತದಲ್ಲಿ ಬಿಜೆಪಿ ಸಾಧನೆ ಮತ್ತಷ್ಟು ವಿಸ್ತಾರಗೊಳ್ಳುವ ಅವಕಾಶ ಹೆಚ್ಚಿದೆ ಎಂದು ಸಿ ಟಿ ರವಿ ಹೇಳಿದರು.
ರಾಜ್ಯದ ಬಿಜೆಪಿಯಲ್ಲಿ ಮೂಲ ಹಾಗೂ ವಲಸಿಗರು ಕಿತ್ತಾಟ ಆರಂಭವಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಅವರು ಅದನ್ನು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇವೆ ಎಂದರು.
ಇದನ್ನೂ ಓದಿ: ಸಂಪುಟ ವಿಸ್ತರಣೆ ಪಕ್ಷದ ಆಂತರಿಕ ವಿಚಾರ,ಇದನ್ನು ಬಹಿರಂಗವಾಗಿ ಹೇಳಲಾಗುವುದಿಲ್ಲ: ಅರುಣ್ ಸಿಂಗ್
ಇದನ್ನೂ ಓದಿ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆಯನ್ನು ಡಿ.9ಕ್ಕೆ ಮುಂದೂಡಿದ ನ್ಯಾಯಾಲಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು