5 ಬಾರಿ ಕಾಂಗ್ರೆಸ್ ನಿಂದ ಗೆದ್ದಿದ್ದೇನೆ,ಈ ಬಾರಿ ನಾನು ಕಮಲ ಪಕ್ಷದ ಸಾಹುಕಾರ್; ರಮೇಶ್
Team Udayavani, Nov 22, 2019, 10:58 AM IST
ಬೆಳಗಾವಿ: ಐದು ಬಾರಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದೇನೆ. ಈ ಬಾರಿ ನಾನು ಕಮಲ ಪಕ್ಷದ ಸಾಹುಕಾರ್. ಬಿಜೆಪಿಗೆ ಮತ ಹಾಕುವ ಮೂಲಕ ಪ್ರಚಂಡ ಬಹುಮತದಿಂದ ನನ್ನ ಗೆಲ್ಲಿಸಬೇಕು ಎಂದು ಗೋಕಾಕ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಮನವಿ ಮಾಡಿಕೊಂಡಿದ್ದಾರೆ.
ಶುಕ್ರವಾರ ಗೋಕಾಕ್ ನ ಖನಗಾಂವ ಗ್ರಾಮದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದ ವೇಳೆ ಮಾತನಾಡಿದ ಅವರು, ನಾನು ಕಮಲ ಪಕ್ಷದ ಸಾಹುಕಾರ್. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಒಬ್ಬ ಸಾಹುಕಾರ್ ಇದ್ದಾನೆ ಹುಷಾರ್ ಎಂದು ಸಹೋದರ ಲಖನ್ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಅನರ್ಹರು, ನೈತಿಕತೆ ಇಲ್ಲ ಎಂದು ನನ್ನ ಬಗ್ಗೆ ಸ್ವಯಂಘೋಷಿತ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ. ಈ ಬಾರಿ ಕಮಲ ಪಕ್ಷದ ಚಿಹ್ನೆಗೆ ವೋಟ್ ಹಾಕಿ ನನ್ನ ಗೆಲ್ಲಿಸಿ ಎಂದು ಈ ಸಂದರ್ಭದಲ್ಲಿ ಹೇಳಿದರು.
ನನ್ನ ವಿರೋಧಿಗಳು ಹೋರಾಟಗಾರರಲ್ಲ, ಕುತಂತ್ರಿಗಳು. ಮಾನಸಿಕ ಹಿಂಸೆ ನೀಡಿ ಹಿನ್ನಡೆ ಅನುಭವಿಸುವ ಸಂಚು ಹೂಡಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…