ಯುದ್ಧ ವಿಮಾನಗಳ ಅವಘಡ: ಬೆಳಗಾವಿಯ ಪೈಲಟ್ ಹುತಾತ್ಮ
Team Udayavani, Jan 29, 2023, 6:30 AM IST
ಬೆಳಗಾವಿ/ಹೊಸದಿಲ್ಲಿ: ಮಧ್ಯಪ್ರದೇಶದ ಗ್ವಾಲಿಯರ್ ಸಮೀಪ ಸುಖೋಯ್ 30 ಎಂಕೆಐ ಹಾಗೂ ಮಿರಾಜ್ 2000 ಯುದ್ಧ ವಿಮಾನಗಳ ನಡುವೆ ಶನಿವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಬೆಳಗಾವಿಯ ಪೈಲಟ್ ಹುತಾತ್ಮರಾಗಿದ್ದಾರೆ.
ಬೆಳಗಾವಿಯ ಗಣೇಶಪುರದ ಹನುಮಂತರಾವ್ ಸಾರಥಿ (34) ಹುತಾತ್ಮರಾದ ವಿಂಗ್ ಕಮಾಂಡರ್. ಅವರಿಗೆ ತಂದೆ, ತಾಯಿ, ಪತ್ನಿ, ಪುತ್ರ, ಪುತ್ರಿ ಇದ್ದಾರೆ.
ಹನುಮಂತರಾವ್ ಸಾರಥಿ 2009ರಿಂದ ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರ ತಂದೆ ರೇವಣಸಿದ್ದಪ್ಪ ಸೇನೆಯಲ್ಲಿ ಕ್ಯಾಪ್ಟನ್ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ. ಸಹೋದರ ಪ್ರವೀಣ ಕೂಡ ಭಾರತೀಯ ವಾಯುಪಡೆಯಲ್ಲಿ ಗ್ರೂಪ್ ಕ್ಯಾಪ್ಟನ್ ಆಗಿದ್ದಾರೆ.
ನಡೆದುದೇನು?
ಶನಿವಾರ ಬೆಳಗ್ಗೆ 5.30ರ ವೇಳೆಗೆ ಎರಡೂ ವಿಮಾನಗಳು ದೈನಂದಿನ ತರಬೇತಿ ಹಾರಾಟಕ್ಕೆಂದು ಗ್ವಾಲಿಯರ್ನ ವಾಯುನೆಲೆಯಿಂದ ಟೇಕ್ಆಫ್ ಆಗಿದ್ದವು. ವಿಂಗ್ ಕಮಾಂಡರ್ ಹನುಮಂತ ರಾವ್ ಅವರು ಮಿರಾಜ್ 2000 ವಿಮಾನವನ್ನು ಮುನ್ನಡೆಸುತ್ತಿದ್ದರೆ ಸುಖೋಯ್ನಲ್ಲಿ ಇಬ್ಬರು ಪೈಲಟ್ಗಳಿದ್ದರು. ಏಕಾಏಕಿ ಎರಡೂ ವಿಮಾನಗಳು ಪತನಗೊಂಡಿದ್ದು, ಸುಖೋಯ್ನಲ್ಲಿದ್ದ ಇಬ್ಬರು ಸುರಕ್ಷಿತವಾಗಿ ಹೊರಗೆ ಹಾರಿದ ಕಾರಣ ಸಣ್ಣಪುಟ್ಟ ಗಾಯಗಳೊಂದಿಗೆ ಬದುಕುಳಿದಿದ್ದಾರೆ.
ಮಿರಾಜ್ನಲ್ಲಿದ್ದ ಹನುಮಂತ ರಾವ್ ಕೊನೆಯುಸಿರೆಳೆದಿದ್ದಾರೆ. ಒಂದು ವಿಮಾನದ ಅವಶೇಷಗಳು ಮಧ್ಯಪ್ರದೇಶದ ಮೊರೆನಾದಲ್ಲಿ ಬಿದ್ದಿದ್ದು, ಮತ್ತೂಂದು ವಿಮಾನದ ಅವಶೇಷ 100 ಕಿ.ಮೀ. ದೂರದಲ್ಲಿ ರಾಜಸ್ಥಾನದ ಭರತ್ಪುರದಲ್ಲಿ ಪತ್ತೆಯಾಗಿವೆ.
ರಷ್ಯಾ ನಿರ್ಮಿತ ಸುಖೋಯ್-30ಎಂಕೆಐ ಜೆಟ್ ಮತ್ತು ಫ್ರಾನ್ಸ್ ನಿರ್ಮಿತ ಮಿರಾಜ್-2000 ಯುದ್ಧ ವಿಮಾನಗಳು ಹಾರಾಟದ ವೇಳೆ ಪರಸ್ಪರ ಢಿಕ್ಕಿ ಹೊಡೆದು ಈ ದುರಂತ ಸಂಭವಿಸಿರಬಹುದು ಎಂದು ರಕ್ಷಣ ತಜ್ಞರು ಅಂದಾಜಿಸಿದ್ದಾರೆ. ಘಟನೆಗೆ ಕಾರಣವೇನು ಎಂಬ ಕುರಿತು ವಾಯುಪಡೆಯಿಂದ ಅಧಿಕೃತ ಮಾಹಿತಿ ಬಂದಿಲ್ಲ. ವಾಯುಪಡೆಯು ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ. ವಿಂಗ್ ಕಮಾಂಡರ್ ಹನುಮಂತ ರಾವ್ ಅವರ ಸಾವಿಗೆ ರಕ್ಷಣ ಸಚಿವ ರಾಜನಾಥ್ ಸಿಂಗ್, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಸೇರಿದಂತೆ ಅನೇಕರು ಕಂಬನಿ ಮಿಡಿದಿದ್ದಾರೆ.
ಇಂದು ಹುಟ್ಟೂರಿಗೆ ಪಾರ್ಥಿವ ಶರೀರ
ವಿಂಗ್ ಕಮಾಂಡರ್ ಹನುಮಂತರಾವ್ ಗ್ವಾಲಿಯರ್ನಲ್ಲೇ ನೆಲೆಸಿದ್ದರು. ಅವರ ಪಾರ್ಥಿವ ಶರೀರ ರವಿವಾರ ವಿಶೇಷ ವಿಮಾನದಲ್ಲಿ ಗಣೇಶಪುರಕ್ಕೆ ಬರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ