ಅಕ್ರಮ ಭೂ ಮಂಜೂರಾತಿ


Team Udayavani, Dec 18, 2018, 6:00 AM IST

16.jpg

ಬೆಳಗಾವಿ: ಭೂ ಮಂಜೂರಾತಿ, ಒತ್ತುವರಿ ಭೂಮಿ ಸಕ್ರಮ ಸೇರಿ ಸರಕಾರಿ ಭೂಮಿ ಮಂಜೂರಾತಿ ಪ್ರಕ್ರಿಯೆಯಲ್ಲಿ ನಿಯಮಾವಳಿ ಗಾಳಿಗೆ ತೂರಿರುವುದು ಸಿಎಜಿ ವರದಿಯಲ್ಲಿ ಬಹಿರಂಗಗೊಂಡಿದೆ. 837 ಎಕರೆ ಭೂಮಿ ಅಕ್ರಮವಾಗಿ ಮಂಜೂರು ಮಾಡಿರುವುದು, 1,055.19 ಎಕರೆ ಒತ್ತುವರಿಯನ್ನು ನಿಯಮ ಬಾಹಿರವಾಗಿ ಸಕ್ರಮಗೊಳಿಸಿರುವುದು ಹಾಗೂ 2.44 ಲಕ್ಷ ಎಕರೆ ಭೂಮಿಯ ಒತ್ತುವರಿ ತೆರವುಗೊಳಿಸಿದ್ದರೂ ಸರಕಾರದ ಸುಪರ್ದಿಗೆ ತೆಗೆದುಕೊಳ್ಳದಿರುವ ಬಗ್ಗೆ ವರದಿಯಲ್ಲಿ ಉಲ್ಲೇಖೀಸಲಾಗಿದೆ.

ಸೋಮವಾರ ಸದನದಲ್ಲಿ ಸರಕಾರಿ ಭೂಮಿ ಮಂಜೂರಾತಿ, ಗುತ್ತಿಗೆ, ಒತ್ತುವರಿಗಳ ತೆರವುಗೊಳಿಸುವಿಕೆ ಕುರಿತ ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾ ಲೆಕ್ಕ ಪರಿಶೋಧಕರ ವರದಿ ಮಂಡಿಸಲಾಗಿದೆ. ವರದಿ ಪ್ರಕಾರ, ಸರಕಾರಿ ಭೂಮಿ ಖಾಸಗಿಯವರಿಗೆ ಮಂಜೂರು ಮಾಡುವಲ್ಲಿ ನಿಯಮ ಉಲ್ಲಂಘಿಸಿದ್ದು, 837 ಎಕರೆ ಅಕ್ರಮ ವಾಗಿ ಮಂಜೂರು ಮಾಡಲಾಗಿದೆ. ಜತೆಗೆ 1,055.19 ಎಕರೆ ಅಕ್ರಮ ಸಾಗುವಳಿಯನ್ನು ನಿಯಮ ಬಾಹಿರವಾಗಿ ಸಕ್ರಮಗೊಳಿಸಲಾಗಿದೆ.

ಒತ್ತುವರಿ ತೆರವುಗೊಳಿಸಿದ ಅನಂತರವೂ 2.44 ಲಕ್ಷ ಎಕರೆ ಒತ್ತುವರಿ ಜಮೀನು ಸ್ವಾಧೀನಪಡಿಸಿಕೊಳ್ಳದೆ ಒತ್ತುವರಿದಾರರ ಸುಪರ್ದಿಯಲ್ಲೇ ಇದೆ. ಅರ್ಜಿಯೇ ಸಲ್ಲಿಸದ 11 ಮಂದಿಗೆ ಅಕ್ರಮವಾಗಿ 47.21 ಎಕರೆ ಮಂಜೂರು ಮಾಡಲಾಗಿದೆ. ಅರ್ಹರಲ್ಲದ 24 ಫಲಾನು ಭವಿಗಳಿಗೆ 117 ಎಕರೆ ಮಂಜೂರು ಮಾಡಲಾಗಿದೆ. ಮಾಹಿತಿ ಖಚಿತಪಡಿಸಿಕೊಳ್ಳದೆ 10 ಕಡೆ 390.38 ಎಕರೆ ಭೂಮಿ ಮಂಜೂರು ಮಾಡಲಾಗಿದೆ. ಸಿಎ ನಿವೇಶನ, ಬಿ ಖರಾಬು, ಗುಂಡುತೋಪು, ಕೆರೆ, ಶ್ಮಶಾನ ಇತ್ಯಾದಿ ಜಮೀನು ಮಂಜೂರು ಮಾಡಲು ಅವಕಾಶವಿಲ್ಲದಿದ್ದರೂ 283.16 ಎಕರೆ ಭೂಮಿಯನ್ನು ಕಂದಾಯ ಇಲಾಖೆ ಹಾಗೂ ಪೌರಾಡಳಿತ ಇಲಾಖೆ ವ್ಯಾಪ್ತಿಯ 204.14 ಎಕರೆಯನ್ನು 86 ಫಲಾನುಭವಿಗಳಿಗೆ ಮಂಜೂರು ಮಾಡಿರುವ ಬಗ್ಗೆ ವರದಿಯಲ್ಲಿ ಹೇಳಲಾಗಿದೆ.

ಸರಕಾರದಿಂದ ರಿಯಾಯಿತಿ ದರದಲ್ಲಿ ಭೂಮಿ ಮಂಜೂರು ಮಾಡುವ ವೇಳೆಯೂ 56 ಮಂದಿ ಅನರ್ಹ ಫಲಾನುಭವಿಗಳಿಗೆ 196 ಕೋಟಿ ರೂ. ರಿಯಾಯಿತಿ ನೀಡಿರುವುದು ಪ್ರಸ್ತಾವಿಸಲಾಗಿದೆ. ಹೊಸ ಒತ್ತುವರಿ ಗುರುತಿಸಿಲ್ಲ 2017ರ ಮಾರ್ಚ್‌ವರೆಗೆ ರಾಜ್ಯದಲ್ಲಿ 4,48,615 ಎಕರೆ ಭೂಮಿ ಒತ್ತುವರಿಯಾಗಿತ್ತು. ಬೆಂಗಳೂರು ನಗರದಲ್ಲಿ ಹೊರತುಪಡಿಸಿದಂತೆ ಆಗಸ್ಟ್‌ 2013ರ ಅನಂತರ ಆಗಿರುವ ಯಾವುದೇ ಹೊಸ ಒತ್ತುವರಿ ಗುರುತಿಸಿಲ್ಲ. ಒತ್ತುವರಿ ತೆರವುಗೊಳಿಸಿದ ಬಳಿಕ ಸ್ವಾಧೀನಪಡಿಸಿಕೊಳ್ಳಲಾದ 2,62,293 ಎಕರೆ ಭೂಮಿ ಪೈಕಿ 18,273.74 ಎಕರೆ ಭೂಮಿ ಮಾತ್ರ ಸಂರಕ್ಷಿಸಲಾಗಿದೆ. ಉಳಿದಂತೆ 2.44 ಲಕ್ಷ ಎಕರೆ ಭೂಮಿ ಯನ್ನು ಸಂರಕ್ಷಿಸುವ ಪ್ರಯತ್ನ ಮಾಡಿಲ್ಲ.

ನಾಲ್ಕು ಜಿಲ್ಲೆಗಳಲ್ಲಿ ಒತ್ತುವರಿಯಾಗಿದ್ದ 89.31 ಎಕರೆ ಭೂಮಿ ಒತ್ತುವರಿದಾರರಿಗೇ ಮಂಜೂರು ಮಾಡಲಾಗಿದೆ. ಈ ಬಗ್ಗೆ ಸಿಎಜಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಒತ್ತುವರಿ ಕುರಿತ ಪ್ರಕರಣಗಳ ತ್ವರಿತ ವಿಲೇವಾರಿಗೆ 2016ರಲ್ಲಿ ಸ್ಥಾಪಿಸಿರುವ ವಿಶೇಷ ನ್ಯಾಯಾಲಯಕ್ಕೆ ಕೇವಲ 69 ಪ್ರಕರಣ ವರ್ಗಾಯಿಸಲಾಗಿದೆ. 1,131 ಪ್ರಕರಣಗಳನ್ನು ವಿವಿಧ ಸಿವಿಲ್‌ ಹಾಗೂ ಕಂದಾಯ ನ್ಯಾಯಾಲಯಗಳಿಂದ ವರ್ಗಾವಣೆ ಮಾಡುವುದು ಬಾಕಿಯಿದೆ. ಹೀಗಾಗಿ 1,64,874.24 ಎಕರೆಗೆ ಸಂಬಂಧಿಸಿದ 47,348 ಪ್ರಕರಣಗಳ ವಿಲೇವಾರಿ ಬಾಕಿ ಉಳಿದುಕೊಂಡಿದೆ.

ಕಾಂಗ್ರೆಸ್‌ಗೆ 15 ಗುಂಟೆ
ಕಂದಾಯ ನಿಯಮಗಳಲ್ಲಿ ರಾಜಕೀಯ ಪಕ್ಷಗಳಿಗೆ ಭೂಮಿ ಮಂಜೂರು ಮಾಡಲು ಅವಕಾಶವಿಲ್ಲ. ಆದರೂ ಚೆನ್ನ ಪಟ್ಟಣ ತಾಲೂಕು-ಜಿಲ್ಲಾ ಕಾಂಗ್ರೆಸ್‌ ಸಮಿತಿಗೆ ಬೋಳಪ್ಪನ ಹಳ್ಳಿಯಲ್ಲಿ 10 ಗುಂಟೆ, ಜಿಲ್ಲಾ ಕಾಂಗ್ರೆಸ್‌ ಸಮಿತಿಗೆ ಮಂಗಳವಾರ ಪೇಟೆ ಯಲ್ಲಿ 5 ಗುಂಟೆ ಮಂಜೂರು ಮಾಡಲಾಗಿದೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.