ತಮಿಳುನಾಡಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 300 ಕೆ.ಜಿ. ಬೆಳ್ಳಿ ವಶ
Team Udayavani, Feb 2, 2020, 10:02 PM IST
ಬೆಳಗಾವಿ: ಮಹಾರಾಷ್ಟ್ರದಿಂದ ತಮಿಳುನಾಡಿಗೆ ಅಕ್ರಮವಾಗಿ ಬೆಳ್ಳಿ ಗಟ್ಟಿ ಹಾಗೂ ಆಭರಣಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 63 ಲಕ್ಷ ರೂ. ಮೌಲ್ಯದ 300 ಕೆ.ಜಿ. ಬೆಳ್ಳಿ, ಎರಡು ಲಕ್ಷ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ಹುಕ್ಕೇರಿ ತಾಲೂಕಿನ ದಾದಬಾನಹಟ್ಟಿ ಬಳಿ ವಶಪಡಿಸಿಕೊಂಡಿದ್ದಾರೆ.
ತಮಿಳುನಾಡಿನ ಸವಾಪೇಟ ಸೇಲಂನ ವಿಜಯಕುಮಾರ ಆತ್ಮಾರಾಮ ಶಿಂಧೆ ಹಾಗೂ ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಕಟಾವ್ ತಾಲೂಕಿನ ಬೆಳೆವಾಡಿಯ ರಿಯಾಜ್ ಶಾಕೀರಹುಸೇನ ಮುಲ್ಲಾನಿ ಎಂಬವರನ್ನು ಬಂಧಿಸಿರುವ ಪೊಲೀಸರು ಅವರಿಂದ ಡಸ್ಟರ್ ಕಾರು, 300 ಕೆ.ಜಿ.ಬೆಳ್ಳಿ ಗಟ್ಟಿ, ಮೂರು ಲಕ್ಷ ರೂ. ನಗದು ಹಣ ವಶಪಡಿಸಿಕೊಳ್ಳಲಾಗಿದೆ.
ತಮಿಳುನಾಡಿನ ಸೇಲಂಗೆ ಡಸ್ಟರ್ ಕಾರಿನಲ್ಲಿ ಅಕ್ರಮವಾಗಿ ಬೆಳ್ಳಿ ಗಟ್ಟಿ ಹಾಗೂ ಆಭರಣಗಳನ್ನು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಯಮಕನಮರಡಿ ಹಾಗೂ ಡಿಸಿಐಬಿ ಘಟಕ ಪೊಲೀಸರು ಈ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಈ ಅಕ್ರಮ ಸಾಗಾಟದ ಪ್ರಕರಣ ಬೆಳಕಿಗೆ ಬಂದಿದೆ ಎಂಬ ಮಾಹಿತಿ ಲಭಿಸಿದೆ.
ಡಿಸಿಐಬಿ ಘಟಕ ಇನ್ ಸ್ಪೆಕ್ಟರ್ ನಿಂಗನಗೌಡ ಪಾಟೀಲ, ಯಮಕನಮರಡಿಯ ರಮೇಶ ಪಾಟೀಲ, ಎಎಸ್ ಐ ಡಿ.ಕೆ. ಪಾಟೀಲ, ಟಿ.ಕೆ. ಕೊಳಚಿ, ಎಂ.ಜಿ. ಮುಜಾವರ, ಎಸ್.ಎಂ. ಮಂಗಣ್ಣವರ, ಎಂ.ಆರ್. ಪಠಾಣ, ವಿ.ಆರ್. ನಾಯಕ, ಆರ್.ಬಿ.ಕಲ್ಲೋಳ್ಳಿ ಅವರ ತಂಡ ಈ ಯಶಸ್ವಿ ದಾಳಿಯನ್ನು ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ
HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ
ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ
Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ
Belagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು