ಚಚಡಿ ಯೋಜನೆ ಕಾಲುವೆ ನಿರ್ಮಾಣಕ್ಕೆ ಚಾಲನೆ

ಪೈಪ್‌ಲೈನ್‌ ಅಳವಡಿಸಿ ನೀರಾವರಿ ಒದಗಿಸುವ ಕಾಮಗಾರಿ ಪ್ರಗತಿ ಹಂತದಲ್ಲಿದೆ.

Team Udayavani, Jan 27, 2022, 6:10 PM IST

ಚಚಡಿ ಯೋಜನೆ ಕಾಲುವೆ ನಿರ್ಮಾಣಕ್ಕೆ ಚಾಲನೆ

ಬೈಲಹೊಂಗಲ: ಚಚಡಿ ಏತ ನೀರಾವರಿ ಯೋಜನೆಯ ಚಾಲನೆಯಿಂದ ಗೋಕಾಕ, ಬೈಲಹೊಂಗಲ, ಸವದತ್ತಿ ತಾಲೂಕಿನ ರೈತರ ಹೊಲಗಳು ನೀರಾವರಿಯಿಂದ ಕಂಗೊಳಿಸಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.

ವಣ್ಣೂರ ಗ್ರಾಮದ ಸರಕಾರಿ ಪಿಯು ಕಾಲೇಜಿನಲ್ಲಿ ಚಚಡಿ ಏತ ನೀರಾವರಿ ಯೋಜನೆಯ ಮುಖ್ಯ ಕಾಲುವೆ ಕಿಮೀ 6ರಿಂದ 39ರ ವರೆಗಿನ ನಿರ್ಮಾಣ ಕಾಮಗಾರಿಗಳ ಅಡಿಗಲ್ಲು ಸಮಾರಂಭಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡಿದರು.

ಚಚಡಿ ಯೋಜನೆಯ ಮುಖ್ಯ ಕಾಲುವೆ ನಿರ್ಮಾಣಕ್ಕೆ 2020-21ರಲ್ಲಿ ಅನುಮೋದನೆಗೊಂಡಿತ್ತು. ಇದೀಗ 28.29 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇನ್ನೂ 26 ಕೋಟಿ ರೂ. ನೀಡಲು ಸರಕಾರ ಸಿದ್ಧವಿದೆ. ನಿಗದಿತ ವೇಳೆಯಲ್ಲಿ ಕಾಮಗಾರಿಯನ್ನು ಗುತ್ತಿಗೆದಾರರು ಸಮರ್ಪಕವಾಗಿ ನಿರ್ವಹಿಸಬೇಕು. ಅಸಮರ್ಪಕವಾಗಿ ಕಾಮಗಾರಿ ನಡೆದಿದ್ದು ಕಂಡುಬಂದರೆ ಅವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಬಿಲ್‌ ತಡೆ ಹಿಡಿಯಲಾಗುವುದು ಎಂದು ಎಚ್ಚರಿಸಿದರು.

ರೈತರು ಕಾಲುವೆ ಆದ ಮೇಲೆ ಕೈಕಟ್ಟಿಕೊಂಡು ಎಲ್ಲವೂ ಸರಕಾರವೇ ನಿರ್ವಹಿಸಲಿ ಎಂದು ಯೋಚಿಸದೆ, ತಮ್ಮ ಮನೆಯಂತೆ ಕಾಲುವೆಯನ್ನು ಸ್ವಚ್ಛವಾಗಿಟ್ಟಲ್ಲಿ ಯೋಜನೆ ಸಾಕಾರಗೊಳ್ಳಲು ಸಾಧ್ಯವಿದೆ. ಬರುವ ಜೂನ್‌ ವೇಳೆಗೆ ಕಾಮಗಾರಿ ಪೂರ್ಣಗೊಳ್ಳುವ ವಿಶ್ವಾಸವಿದೆ. ಶಾಸಕ ಮಹಾಂತೇಶ ದೊಡ್ಡಗೌಡರ ಕಿತ್ತೂರ ಮತಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಾಕಷ್ಟು ಸುತ್ತಾಟಗಳ ಮೂಲಕ ಕ್ಷೇತ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದ್ದಾರೆ ಎಂದರು.

ಶಾಸಕ ಮಹಾಂತೇಶ ದೊಡ್ಡಗೌಡರ ಮಾತನಾಡಿ, ಈ ನೀರಾವರಿ ಯೋಜನೆಗೆ ಅರಣ್ಯ ಇಲಾಖೆ ಭಾಗಶಃ ಅನುಮೋದನೆ ಕೊಟ್ಟಿದ್ದು, ಇಲ್ಲಿಯ 14 ಹಳ್ಳಿಗಳಿಗೆ ಕೆನಾಲ್‌ ಮುಖಾಂತರ ಪೈಪ್‌ಲೈನ್‌ ಅಳವಡಿಸಿ ನೀರಾವರಿ ಒದಗಿಸುವ ಕಾಮಗಾರಿ ಪ್ರಗತಿ ಹಂತದಲ್ಲಿದೆ. ವನ್ನೂರ ಗ್ರಾಮದಲ್ಲಿ 20 ಕೋಟಿ ಅನುದಾನದಲ್ಲಿ ಡಾ| ಅಂಬೇಡ್ಕರ್‌ ವಸತಿ ನಿಲಯ ನಿರ್ಮಾಣಗೊಂಡಿದ್ದು, ಜೂನ್‌ದೊಳಗೆ ಉದ್ಘಾಟನೆಗೊಳ್ಳಲಿದೆ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಿ.ಎಫ್‌. ಕೊಳದೂರ, ಕಿತ್ತೂರು ಗ್ರಾಮೀಣ ಬಿಜೆಪಿ ಅಧ್ಯಕ್ಷ ಬಸವರಾಜ ಪರವನ್ನವರ, ಬಸನಗೌಡ ಸಿದ್ರಾಮನಿ, ಗ್ರಾಪಂ ಅಧ್ಯಕ್ಷ ಸಿದ್ದಪ್ಪ ಮಿಂಡೊಳ್ಳಿ, ಮುಖ್ಯ ಅಭಿಯಂತ ಅರವಿಂದ ಕಣಗಿಲ, ಅಧಿಧೀಕ್ಷಕ ಅಭಿಯಂತ ಸಿ.ಎಂ. ಬಂತಿ, ಮಲ್ಲಿಕಾರ್ಜುನ ತುಬಾಕಿ, ತಹಶೀಲ್ದಾರ್‌ ಬಸವರಾಜ ನಾಗರಾಳ, ತಾಪಂ ಇಒ ಸುಭಾಸ ಸಂಪಗಾವಿ, ಬಸವರಾಜ ಅಂಗಡಿ, ಬಾಳಾಸಾಹೇಬ ದೇಸಾಯಿ, ಬಸಲಿಂಗಪ್ಪ ಬಸೆಟ್ಟಿ, ಎಸ್‌.ಎಫ್‌. ನಾಯಕ, ಸತ್ಯನಾಯ್ಕ ನಾಯ್ಕ, ಎ.ಆರ್‌. ಮಾಳನ್ನವರ, ಎಸ್‌.ಎಂ. ಪಾಟೀಲ, ಮಹಾಂತೇಶ ಹಿರೇಮಠ, ಮನೋಜ ಕೆಳಗೇರಿ, ಆನಂದ ಕಿರಗಿ, ಶಿವು ಚೋಬಾರಿ, ಸಂತೋಷ ಪಾಟೀಲ ಇದ್ದರು.

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.