![1-kanwar-msid](https://www.udayavani.com/wp-content/uploads/2024/07/1-kanwar-msid-415x233.jpg)
ಫಸಲ್ ಬೀಮಾ ಯೋಜನೆ ಅನುಷ್ಠಾನಗೊಳಿಸಲು ಸೂಚನೆ
Team Udayavani, May 29, 2020, 12:05 PM IST
![ಫಸಲ್ ಬೀಮಾ ಯೋಜನೆ ಅನುಷ್ಠಾನಗೊಳಿಸಲು ಸೂಚನೆ](https://www.udayavani.com/wp-content/uploads/2020/05/bg-tdy-3-20-620x372.jpg)
ಬೆಳಗಾವಿ: ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವುದರ ಜೊತೆಗೆ ರೈತರು ಸ್ವಯಂ ಪ್ರೇರಣೆಯಿಂದ ಭಾಗವಹಿಸುವಂತೆ ಪ್ರೇರೇಪಿಸಬೇಕು ಎಂದು ವಿಧಾನ ಪರಿಷತ್ ಸರಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಲ್ಲಿನ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಅವರು, ವಿಮೆಯ ಅನುಷ್ಠಾನದಲ್ಲಿ ಆಗುತ್ತಿರುವ ತೊಂದರೆಗಳ ಬಗ್ಗೆ ಮಾಹಿತಿ ಪಡೆದು 2019-20ನೇ ಸಾಲಿನ ಬೆಳೆವಿಮೆ ಮಾಡಿಸಿದ ರೈತರ ಖಾತೆಗೆ ಜಮೆ ಆದ ವಿಮಾ ಮೊತ್ತ ಹಾಗೂ ಆಗುತ್ತಿರುವ ಅಡೆತಡೆಗಳ ಬಗ್ಗೆ ಅವಲೋಕನ ನಡೆಸಿದರು.
ವಿಮೆ ಮೊತ್ತವನ್ನು ಆದಷ್ಟು ಶೀಘ್ರ ರೈತರಿಗೆ ದೊರಕಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಯೋಜನೆಯಲ್ಲಿ ರೈತರು ಸ್ವಪ್ರೇರಣೆಯಿಂದ ಭಾಗವಹಿಸುವಂತೆ ಅರಿವು ಮೂಡಿಸಬೇಕು ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಿಲಾನಿ ಮೊಕಾಸಿ, ಉಪನಿರ್ದೇಶಕ ಎಚ್.ಡಿ. ಕೊಳೇಕರ ಇದ್ದರು.
ಟಾಪ್ ನ್ಯೂಸ್
![1-kanwar-msid](https://www.udayavani.com/wp-content/uploads/2024/07/1-kanwar-msid-415x233.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.