ಪೊಲೀಸ್ ಕಣ್ಗಾವಲಲ್ಲಿ ಶುರುವಾಯ್ತು ಕಾಮಗಾರಿ
Team Udayavani, Jun 2, 2019, 11:44 AM IST
ಬೆಳಗಾವಿ: ಹಲಗಾ ಹೊಲದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ತಂತಿ ಬೇಲಿ ಹಾಕುವ ಕಾರ್ಯ ನಡೆಯಿತು.
ಬೆಳಗಾವಿ: ತಾಲೂಕಿನ ಹಲಗಾ ಗ್ರಾಮದ ಹೊರ ವಲಯದ ಜಮೀನಿನಲ್ಲಿ ನಗರ ಒಳಚರಂಡಿ ನೀರು ಶುದ್ಧೀಕರಣ ಘಟಕಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ಶುಕ್ರವಾರ ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ನಡೆದಿದ್ದು, ಯಾವೊಬ್ಬ ರೈತರೂ ಜಮೀನಿನ ಒಳಗೆ ಬರದಂತೆ ಪೊಲೀಸರು ಕಣ್ಗಾವಲು ಹಾಕಿದ್ದಾರೆ.
ಹಲಗಾ ಗ್ರಾಮದ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಜಮೀನಿನಲ್ಲಿ 17 ಕೋಟಿ ರೂ. ವೆಚ್ಚದಲ್ಲಿ ಒಳಚರಂಡಿ ನೀರು ಶುದ್ಧೀಕರಣ ಘಟಕ ನಿರ್ಮಾಣಕ್ಕಾಗಿ ಭೂಸ್ವಾಧೀನಕ್ಕೆ ರೈತರ ವಿರೋಧ ಆಗುತ್ತಿದ್ದಂತೆ ಖಾಕಿ ಸರ್ಪಗಾವಲು ಹಾಕಲಾಗಿದೆ. 19.20 ಎಕರೆ ಜಮೀನಿನಲ್ಲಿ ಈ ಘಟಕ ನಿರ್ಮಾಣವಾಗಲಿದ್ದು, 3-4 ಜೆಸಿಬಿ ಮೂಲಕ ಭೂಮಿ ಸಮತಟ್ಟು ಮಾಡುವುದು ಹಾಗೂ ಆವರಣಕ್ಕೆ ತಂತಿ ಬೇಲಿ ಹಾಕುವ ಕಾರ್ಯ ಮುಂದುವರಿಸಲಾಗಿದೆ.
ಹಲಗಾ ಬ್ರಿಜ್ ಬಳಿಯ ಸರ್ವೀಸ್ ರಸ್ತೆಯ ಎರಡೂ ಕಡೆಯಿಂದ ಬ್ಯಾರಿಕೇಡ್ಗಳನ್ನು ಹಾಕಲಾಗಿದೆ. ಸರ್ವೀಸ್ ರಸ್ತೆಯಲ್ಲಿ ಯಾವುದೇ ವಾಹನ ಓಡಾಡದಂತೆ ಪೊಲೀಸರು ಕಾಯುತ್ತ ನಿಂತಿದ್ದಾರೆ. ನಡೆದುಕೊಂಡೂ ಹೋಗಲೂ ಅಲ್ಲಿ ಜಾಗವಿಲ್ಲ. ಕೇವಲ ಜೆಸಿಬಿ ಹಾಗೂ ಸರ್ಕಾರಿ ವಾಹನಗಳನ್ನು ಬಿಟ್ಟರೆ ಇನ್ನುಳಿದಂತೆ ಯಾವ ವಾಹನಕ್ಕೂ ಅಲ್ಲಿ ಅವಕಾಶವಿಲ್ಲ.
ಯಾವುದೇ ಕಾರಣಕ್ಕೂ ಜಮೀನು ಬಿಟ್ಟು ಕೊಡುವುದಿಲ್ಲ ಎಂದು ಪಟ್ಟು ಹಿಡಿದಿದ್ದ ರೈತರು ಶುಕ್ರವಾರ ಜಿಲ್ಲಾಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಕುರ್ಚಿಗಳನ್ನು ಮುರಿದು, ಧ್ವಂಸ ಮಾಡಿ ಕಣ್ಣೀರು ಹಾಕಿದ್ದರು. ಸ್ಥಳಕ್ಕೆ ಭೇಟಿ ನೀಡಿದ್ದ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಎದುರು ರೈತರು ಅಳಲು ತೋಡಿಕೊಂಡಿದ್ದರು. ತಾತ್ಕಾಲಿಕವಾಗಿ ಕೆಲಸ ನಿಲ್ಲಿಸಿದ್ದ ಶಾಸಕಿ ಹೆಬ್ಟಾಳಕರ ಅವರು, ರೈತರ ಪರವಾಗಿ ನಾನು ಇರುತ್ತೇನೆ. ಯಾವುದೇ ಕಾರಣಕ್ಕೂ ರೈತರನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ರೈತರ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?