ಕಾನೂನು ಸಾಕ್ಷರತಾ ಶಿಬಿರ ಉದ್ಘಾಟನೆ
Team Udayavani, Nov 4, 2019, 2:25 PM IST
ಗೋಕಾಕ: ಜನಸಾಮಾನ್ಯರ ಆರೋಗ್ಯ ರಕ್ಷಣೆಗಾಗಿ ಇರುವ ಅನೇಕ ಸೌಲಭ್ಯಗಳ ಹೊರತಾಗಿಯೂ ವಿಶೇಷವಾಗಿ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವಿವಿಧ ಸೌಲಭ್ಯ ಒದಗಿಸಲು ಮುಂದಾಗಿರುವ ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಗಳ ಕ್ರಮ ಶ್ಲಾಘನೀಯ ಎಂದು ಇಲ್ಲಿಯ 2ನೇ ಹೆಚ್ಚುವರಿ ಜೆ.ಎಂ.ಎಫ್.ಸಿ. ನ್ಯಾಯಾಧೀಶ ಮೋಹನ ಪೋಳ ಮೆಚ್ಚುಗೆ ವ್ಯಕ್ತಪಡಿಸಿದರು. ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ತಾಲೂಕು ಆರೋಗ್ಯ ಇಲಾಖೆ, ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆ ಮತ್ತು ಇತರೆ ಇಲಾಖೆಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಗೆಳತಿ ವಿಶೇಷ ಚಿಕಿತ್ಸಾ ಘಟಕ ಮೂಲಕ ವಿವಿಧ ಸೌಲಭ್ಯಗಳು ಎಂಬ ವಿಷಯ ಕುರಿತ ಕಾನೂನು ಸಾಕ್ಷರತಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿ, ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಅಗತ್ಯ ಸಹಾಯ ಒದಗಿಸುವುದು ಮಾನವೀಯತೆಯಾಗಿದೆ ಎಂದರು.
ಶಿಬಿರಾರ್ಥಿಗಳಿಗೆ ವಕೀಲೆ ಸಂಗೀತಾ ಬನ್ನೂರ ಮತ್ತು ಸರ್ಕಾರಿ ಆಸ್ಪತ್ರೆ ಸಾಂಕ್ರಾಮಿಕ ರೋಗಗಳ ವಿಭಾಗಗಳ ವೈದ್ಯಾಧಿ ಕಾರಿ ಡಾ| ಶ್ರೀದೇವಿ ಪೂಜೇರಿ ಮಹಿಳೆಯರಿಗೆ ಸಂಬಂಧಿ ಸಿದ ವಿವಿಧ ವಿಷಯ ಕುರಿತು ಉಪನ್ಯಾಸ ನೀಡಿದರು. ವಕೀಲರ ಸಂಘದ ಅಧ್ಯಕ್ಷ ಯು.ಬಿ. ಸಿಂಪಿ, ತಾಲೂಕು ಆರೋಗ್ಯ ವೈದ್ಯಾಧಿ ಕಾರಿ ಡಾ| ರವೀಂದ್ರ ಅಂಟಿನ, ಡಾ| ಜಗದೀಶ ಜಿಂಗಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿ ಕಾರಿ ಬಿ.ಬಿ. ಈಶ್ವರಪ್ಪಗೋಳ, ಸಹಾಯಕ ಸಿಡಿಪಿಒ ನಸರೀನ ಕೊಣ್ಣೂರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ