ಪುನೀತ್ ಸಾವಿನಿಂದ ಆಘಾತಗೊಂಡ ಅಭಿಮಾನಿ ಹೃದಯಾಘಾತದಿಂದ ನಿಧನ
Team Udayavani, Oct 30, 2021, 8:16 AM IST
ಬೆಳಗಾವಿ: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನದ ಸುದ್ದಿ ಕೇಳಿ ಹೃದಯಾಘಾತದಿಂದ ಬೆಳಗಾವಿಯ ಅಭಿಮಾನಿಯೋರ್ವ ಸಾವಿಗೀಡಾದ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.
ಅಪ್ಪುವಿನ ಅಪ್ಪಟ ಅಭಿಮಾನಿ ಆಗಿದ್ದ ಶಿಂಧೋಳ್ಳಿ ಗ್ರಾಮದ ಕನಕದಾಸ ನಗರದ ಪರುಶರಾಮ ಹನುಮಂತ ದೇಮಣ್ಣವರ(33) ಎಂಬ ಯುವಕ ಕೊನೆಯುಸಿರೆಳೆದಿದ್ದಾನೆ. ಪುನೀತ್ ರಾಜಕುಮಾರ ಸಾವಿನ ಸುದ್ದಿ ಕೇಳಿ ಶುಕ್ರವಾರ ಸಂಜೆಯಿಂದ ಟಿವಿ ಎದುರು ಕುಳಿತಿದ್ದನು. ಸಾವಿನಿಂದ ಆಘಾತಗೊಂಡು ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
ಮಾಳಿ ಕೆಲಸ ಮಾಡುತ್ತಿದ್ದ ಪರುಶರಾಮ ದೇಮಣ್ಣವರ ಶಿವರಾಜ್ ಕುಮಾರ ಹಾಗೂ ಪುನೀತ್ ರಾಜಕುಮಾರನ ಅಪ್ಪಟ ಅಭಿಮಾನಿ ಆಗಿದ್ದನು. ಚಿತ್ರ ಬಿಡುಗಡೆ ಆದಾಗ ಮೊದಲ ಶೋ ನೋಡಲು ಹೋಗುತ್ತಿದ್ದನು. ಶುಕ್ರವಾರ ಕೆಲಸ ಮುಗಿಸಿಕೊಂಡು ಬಂದು ಟಿವಿ ಎದುರು ಕುಳಿತಿದ್ದನು. ಅಪ್ಪುವಿನ ಪಾರ್ಥೀವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅಳುತ್ತಿದ್ದನು. ಶುಕ್ರವಾರ ರಾತ್ರಿ ಆಘಾತಗೊಂಡು ಸಾವನ್ನಪ್ಪಿದ್ದಾನೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಮೊದಲಿನಿಂದಲೂ ಶಿಂಧೋಳಿ ಗ್ರಾಮದಲ್ಲಿ ಶಿವಣ್ಣ ಹಾಗೂ ಪುನೀತ್ ಅಭಿಮಾನಿಗಳು ಬಹಳಷ್ಟು ಮಂದಿ ಇದ್ದಾರೆ. ಸುಮಾರು 17 ವರ್ಷಗಳ ಹಿಂದೆ ‘ತವರಿಗೆ ಬಾ ತಂಗಿ’ ಸಿನಿಮಾ ಪ್ರಚಾರದ ವೇಳೆ ಶಿವರಾಜ್ ಕುಮಾರ್ ಶಿಂಧೋಳ್ಳಿ ಗ್ರಾಮಕ್ಕೆ ಆಗಮಿಸಿದ್ದರು. ಈ ವೇಳೆ ಕಾರ್ಯಕ್ರಮದಲ್ಲಿ ಪರುಶರಾಮ ಓಡಾಡಿಕೊಂಡಿದ್ದನು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ