ಬೆಳಗಾವಿ: ಧ್ವಜಾರೋಹಣ ನೆರವೇರಿಸಿದ ಸಚಿವ ರಮೇಶ್ ಜಾರಕಿಹೊಳಿ
Team Udayavani, Aug 15, 2020, 10:43 AM IST
ಬೆಳಗಾವಿ: ಜಿಲ್ಲೆಯಾದ್ಯಂತ 74 ನೇ ಸ್ವಾತಂತ್ರ್ಯ ದಿನಾಚರಣೆಗೆ ಸಂಭ್ರಮದ ಚಾಲನೆ ನೀಡಲಾಯಿತು. ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಳೆಯಲ್ಲೇ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೋವಿಡ್ ನಿಯಂತ್ರಣ ಮಾಡುವಲ್ಲಿ ನಮ್ಮ ಸರಕಾರ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು ಜನರು ಆತಂಕ ಪಡಬೇಕಿಲ್ಲ ಎಂದರು.
ಕೋವಿಡ್ ವೈರಸ್ ನಮಗೆ ಬಹಳ ಪಾಠ ಕಲಿಸಿದೆ. ನಮ್ಮ ಜೀವನದಲ್ಲಿ ಬದಲಾವಣೆ ತಂದಿದೆ. ಇದಕ್ಕೆ ಪೂರಕವಾಗಿ ಜನರ ನೆರವಿಗೆ ನಿಂತಿರುವ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಅನೇಕ ಯೋಜನೆಗಳನ್ನು ಜಾರಿಮಾಡಿದೆ ಎಂದರು.
ಪ್ರತಿ ವರ್ಷ ಕೃಷ್ಣಾ ನದಿಯಿಂದ ಉಂಟಾಗುವ ಪ್ರವಾಹದ ಆತಂಕವನ್ನು ಈ ಬಾರಿ ದೂರ ಮಾಡಲಾಗಿದೆ. ನೀರು ಬಿಡುಗಡೆ ಮಾಡುವ ಮುನ್ನ ಕರ್ನಾಟಕಕ್ಕೆ ಮಾಹಿತಿ ನೀಡುವಂತೆ ಮಹಾರಾಷ್ಟ್ರ ಸರಕಾರಕ್ಕೆ ಕೋರಲಾಗಿದ್ದು ಈ ಸಂಬಂಧ ಸಮನ್ವಯ ಸಮಿತಿ ರಚನೆ ಮಾಡಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ