ಮುಂಗಾರು ಉದ್ದು ಬೆಳೆಗೆ ಕೀಟಗಳ ಕಾಟದ ʼಗುದ್ದು’

­ಮುಂಗಾರು ಮುಂಚೆ ಸುರಿದ ಮಳೆ ತಂದ ಭರವಸೆ; ­ತೆಲಸಂಗದಲ್ಲಿ 23,195 ಹೆಕ್ಟೇರ್‌ ಭೂಮಿಯಲ್ಲಿ ಬಿತ್ತನೆ

Team Udayavani, Jul 21, 2022, 5:03 PM IST

22

ತೆಲಸಂಗ: ಹೋಬಳಿ ಗ್ರಾಮಗಳಲ್ಲಿನ ಮುಂಗಾರು ಉದ್ದು ಬೆಳೆಯಲ್ಲಿ ಜಿಗಿ, ಹೇನು ಮತ್ತು ಕೀಟಗಳು ಕಾಣಿಸಿಕೊಂಡಿರುವುದು ರೈತರಲ್ಲಿ ಆತಂಕವನ್ನುಂಟು ಮಾಡಿದೆ. ಒಣ ಬೇಸಾಯ ಅವಲಂಬಿಸಿರುವ ತೆಲಸಂಗ ಗ್ರಾಮವೊಂದರಲ್ಲಿಯೇ 23,195 ಹೆಕ್ಟೇರ್‌ ಭೂಮಿಯಲ್ಲಿ ಉದ್ದು ಬಿತ್ತನೆ ಆಗಿದೆ.

ತಾಲೂಕಿನಲ್ಲಿ ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆ ವಾಡಿಕೆಗಿಂತ ಮುಂಚೆ ಸುರಿದ ಪರಿಣಾಮ ಶೇ.60 ಉದ್ದು ಬೆಳೆ ಬಿತ್ತನೆಯಾಗಿದೆ. ಜೂನ್‌ ತಿಂಗಳಲ್ಲಿ ಮಳೆ ಇಲ್ಲದೆ ಕಮರುವ ಹಂತದಲ್ಲಿದ್ದ ಬೆಳೆಗಳಿಗೆ ಜುಲೈ ತಿಂಗಳಲ್ಲಿ ಸುರಿದ ಮಳೆ ಆಕ್ಸಿಜನ್‌ ನೀಡಿದಂತಾಗಿತ್ತು. ಬೆಂಬಿಡದೆ ಸುರಿದ ತುಂತುರು ಮಳೆಗೆ ಬೆಳೆ ನಳನಳಿಸುತ್ತಿವೆ ಏನೋ ನಿಜ. ಆದರೆ 15 ದಿನಗಳಿಂದ ಬಿಸಲನ್ನೇ ಕಾಣದೆ ತುಂತುರು ಮಳೆ, ತಂಪಾದ ವಾತಾವರಣಕ್ಕೆ ಜಿಗಿ ರೋಗ, ಕೀಟಬಾಧೆ ಕಾಣಿಸಿಕೊಂಡಿದೆ. ಇಳುವರಿಯಲ್ಲಿ ಭಾರಿ ಪ್ರಮಾಣದ ಹೊಡೆತ ಬಿದ್ದಂತಾಗಿದೆ.

ಹೂವು, ಬಳ್ಳಿ, ಕಾಯಿ ಕಟ್ಟುವ ಹಂತದಲ್ಲಿ ರೋಗ ಕಾಣಿಸಿದ್ದು, ಜಿಗಿ ಮತ್ತು ಕೀಟಗಳ ನಿಯಂತ್ರಣಕ್ಕೆ ರೈತರು ಔಷಧಿ ಸಿಂಪರಿಸುತ್ತಿದ್ದಾರೆ. ಕಳೆದ ನಾಲ್ಕಾರು ವರ್ಷದಿಂದ ಮಳೆ ಕಡಿಮೆಯಾಗಿ ಒಂದಿಲ್ಲೊಂದು ಸಂಕಷ್ಟ ಎದುರಿಸುತ್ತಿರುವ ಒಣ ಬೇಸಾಯದ ರೈತರಿಗೆ ಸದ್ಯದ ವಾತಾವರಣ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಕಳೆ ತೆಗಿಯಿಸಿದರೂ ನಷ್ಟ: ಈ ತುಂತುರು ಮಳೆಗೆ ಬೆಳೆಯಷ್ಟೇ ವೇಗವಾಗಿ ಕಳೆ ಕೂಡ ಬೆಳೆದಿದೆ. ಭೂಮಿಯನ್ನು ಬೇಸಿಗೆಯಲ್ಲಿ ಹದಗೊಳಿಸಲು, ಬಿತ್ತನೆ ಮಾಡಲು ಹಾಗೂ ಬೀಜ-ಗೊಬ್ಬರಕ್ಕೆ ಮಾಡಿದ ಖರ್ಚು ಬೆಟ್ಟದಷ್ಟಾಗಿದೆ. ಈಗ ಹವಾಮಾನ ವೈಪರೀತ್ಯದಿಂದ ಇಳುವರಿಯಲ್ಲಿ ಬೀಳುವ ಹೊಡೆತದಿಂದ ಸದ್ಯ ಬೆಳೆಯಿಂದ ಖರ್ಚು ತೆಗೆಯುವುದೂ ಕಷ್ಟ. ಇಂತಹದರಲ್ಲಿ ಒಂದು ಬಾರಿ ಕಳೆ ತೆಗೆಯಿಸಿದ್ದ ರೈತ ಸದ್ಯಕ್ಕೆ ತುಂತುರು ಮಳೆಗೆ ಬೆಳೆಗಿಂತ ವೇಗವಾಗಿ ಬೆಳೆದ ಕಳೆ ತೆಗೆಯಿಸಲು ಕೂಲಿ ಖರ್ಚು ಎಲ್ಲಿಂದ ತರಬೇಕು. ಹಾಗೇನಾದರೂ ಕೂಲಿ ಕೊಟ್ಟು ಕಳೆ ತೆಗೆಸಿದರೆ ಬರುವ ಉತ್ಪನ್ನದಲ್ಲಿ ವ್ಯಯಿಸಿದ ಹಣವೂ ಕೈಗೆಟಕುವುದಿಲ್ಲ. ಹಾಗಾಗಿ ಕಳೆ ತೆಗೆಯಿಸಿದರೂ ನಷ್ಟ ಅಂತ ರೈತರು ಕೈ ಚೆಲ್ಲಿ ಕುಳಿತಿದ್ದಾರೆ.

ಉದ್ದು ಬಿತ್ತನೆ‌ಗೆ ಸಕಾಲಕ್ಕೆ ಮಳೆ ಸುರಿಯಿತು. ಆದರೆ ಸದ್ಯಕ್ಕೆ ಎಡಬಿಡದೆ ಸುರಿಯುತ್ತಿರುವ ತುಂತುರು ಮಳೆಯಿಂದ ಅರ್ಧದಷ್ಟು ಬೆಳೆಯ ಉತ್ಪನ್ನ ರೋಗಕ್ಕೆ ಬಲಿ ಆಯಿತು. ರೋಗ ನಿಯಂತ್ರಣ ಮಾಡಲಿಕ್ಕೆ ಖರ್ಚು ಮಾಡುವ ಸ್ಥಿತಿ ಸದ್ಯಕ್ಕೆ ರೈತರಿಗಿಲ್ಲ. –ಮೃತ್ಯುಂಜಯ ಮಠದ, ರೈತ, ತೆಲಸಂಗ

ಸೂರ್ಯ ಕಾಣಿಸಿಕೊಳ್ಳದೆ ಹಗಲು ರಾತ್ರಿ ಮೋಡ, ತಂಪಾದ ಹವೆಯೊಂದಿಗೆ ಜಿಟಿ ಜಿಟಿ ಮಳೆ ಸುರಿದಿದ್ದರಿಂದ ರೋಗ ಕಾಣಿಸಿಕೊಂಡಿದೆ. ಇಂತಹ ಹವಾಮಾನ ಇದ್ದಾಗ ಬೆಳೆಗಳಿಗೆ ತೊಂದರೆ ಆಗುತ್ತದೆ. ಉದ್ದು ಬೆಳೆಗೆ ಕಾಣಿಸಿಕೊಂಡ ರೋಗ ಹಾಗೂ ಕೀಟದಿಂದ ಬೆಳೆ ರಕ್ಷಣೆ ಮಾಡಿಕೊಳ್ಳಲು ಕೃಷಿ ಅ ಧಿಕಾರಿಗಳ ಅಥವಾ ತಜ್ಞರ ಸಲಹೆ ಪಡೆದು ಆರೈಕೆ ಮಾಡುವುದು ಉತ್ತಮ. –ಯಂಕಪ್ಪ ಉಪ್ಪಾರ, ಕೃಷಿ ಅಧಿಕಾರಿ, ತೆಲಸಂಗ.

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.