ರಮೇಶದ್ವಯರ ಒಳಹೊಡೆತದ ಆತಂಕ

ಆತಂಕ |ಕೈ-ಕಮಲ ಸಮಬಲ ನಿರೀಕ್ಷೆ |ನೀರು ಕೊಡದ ಪ್ರಕಾಶ ಹುಕ್ಕೇರಿ ವಿರುದ್ಧ ಬರಪೀಡಿತ ಜನ ಅಸಮಾಧಾನ

Team Udayavani, May 3, 2019, 1:56 PM IST

belegavi-tdy-1..
ಚಿಕ್ಕೋಡಿ: ರಾಯಬಾಗ ಮೀಸಲು ವಿಧಾನಸಭೆ ಕ್ಷೇತ್ರದಲ್ಲಿ ಒಂದೊಂದು ಕಡೆ ಒಂದೊಂದು ಅಭ್ಯರ್ಥಿ ಮುನ್ನಡೆ ಪಡೆಯುವ ಮೂಲಕ ಕ್ಷೇತ್ರದಲ್ಲಿ ಕಾಂಗ್ರೆಸ್‌-ಬಿಜೆಪಿ ಸಮಬಲ ಸಾಧಿಸುತ್ತವೆ ಎನ್ನುವ ಚರ್ಚೆಗಳು ಕುತೂಹಲ ಮೂಡಿಸಿವೆ.

ಚಿಕ್ಕೋಡಿ ಲೋಕಸಭೆ ಮತಕ್ಷೇತ್ರದಲ್ಲಿ ಬರುವ ರಾಯಬಾಗ ಮೀಸಲು ವಿಧಾನಸಭೆ ಕ್ಷೇತ್ರ ಬಿಜೆಪಿ ಭದ್ರಕೋಟೆಯಾಗಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸತತ ಮೂರು ಬಾರಿ ಆಯ್ಕೆಗೊಳ್ಳುವ ಮೂಲಕ ಹ್ಯಾಟ್ರಿಕ್‌ ಗೆಲುವು ಸಾಧಿಸಿದ್ದಾರೆ. ಆದರೆ ಕಳೆದ 2014ರ ಲೋಕಸಭೆ ಚುನಾವಣೆಯಲ್ಲಿ ಸಂಸದ ಪ್ರಕಾಶ ಹುಕ್ಕೇರಿ 6,324 ಮತಗಳು ಮುನ್ನಡೆ ಪಡೆದುಕೊಂಡಿದ್ದಾರೆ. ಆದರೆ ಈ ಬಾರಿ ಕಾಂಗ್ರೆಸ್‌ಗೆ ಮುನ್ನಡೆ ಸಾಧಿಸುವ ನಿರೀಕ್ಷೆಗಳಿಲ್ಲ, ಏನೇ ಆದರೂ ಬಿಜೆಪಿ ಅಭ್ಯರ್ಥಿ ಪಡೆದಿರುವ ಮತಗಳ ಸರಿಸಮನಾಗಿ ಕಾಂಗ್ರೆಸ್‌ ಮತ ಪಡೆಯುತ್ತದೆ ಎನ್ನುವ ಮಾತುಗಳು ಎಲ್ಲೆಡೆ ಕೇಳಿ ಬರುತ್ತಿದೆ.

ರಾಯಬಾಗ ಮೀಸಲು ಕ್ಷೇತ್ರದ ಅರ್ಧಕ್ಕಿಂತ ಹೆಚ್ಚಿನ ಹಳ್ಳಿಗಳು ತೀವ್ರ ಬರಪೀಡಿತ ಪ್ರದೇಶಕ್ಕೆ ಒಳಪಡುವುದರಿಂದ ಈ ಕ್ಷೇತ್ರದಲ್ಲಿ ನೀರಾವರಿಗೆ ಆದ್ಯತೆ ನೀಡುವ ಅಭ್ಯರ್ಥಿಗಳನ್ನು ಬೆಂಬಲಿಸುತ್ತಾ ಬರಲಾಗಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಮುಖ ಕರಗಾಂವ ಏತ ನೀರಾವರಿ ಯೋಜನೆ ಅನುಷ್ಠಾನ ಮಾಡಿ ರೈತರ ಜಮೀನುಗಳಿಗೆ ನೀರು ಕೊಡುತ್ತೇನೆಂದು ಪ್ರಕಾಶ ಹುಕ್ಕೇರಿ ಭರವಸೆ ನೀಡಿದರು. ಆದರೆ ಐದು ವರ್ಷಗಳಲ್ಲಿ ನೀರಾವರಿ ಯೋಜನೆಗೆ ಯಾವುದೇ ಕಾರ್ಯ ಮಾಡದಿರುವುದರಿಂದ ಪ್ರಕಾಶ ಹುಕ್ಕೇರಿ ಮೇಲೆ ಬರಪೀಡಿತ ಜನ ಮುನಿಸಿಕೊಂಡಿದ್ದರು. ಪ್ರಚಾರಕ್ಕೆ ತೆರಳಿದಾಗ ಕರಗಾಂವ ಏತ ನೀರಾವರಿ ಯೋಜನೆ ವಿಷಯ ಬಿಟ್ಟರೆ ಬೇರೆ ವಿಷಯ ಪ್ರಸ್ತಾಪವಾಗಿಲ್ಲ, ಹೀಗಾಗಿ ಕರೋಶಿ ಜಿಪಂ ವ್ಯಾಪ್ತಿಯ ಮತದಾರರು ಪೂರ್ಣವಾಗಿ ಬಿಜೆಪಿ ಬೆಂಬಲಿಸಿದ್ದಾರೆ ಎನ್ನುವುದು ಚರ್ಚೆಯ ವಿಷಯ. ಆದರೆ ನಾಗರಮುನ್ನೋಳ್ಳಿ ಜಿಪಂ.ವ್ಯಾಪ್ತಿಯಲ್ಲಿ ಅರ್ಧಕ್ಕಿಂತ ಹೆಚ್ಚಿನ ಮತದಾರರು ಕಾಂಗ್ರೆಸ್‌ ಬೆಂಬಲಿಸಿದ್ದಾರೆ ಎನ್ನುವುದು ಜನಜನಿತವಾಗಿದೆ.

ಕಾಂಗ್ರೆಸ್‌-ಬಿಜೆಪಿಗೆ ಒಳಹೊಡೆತ: ಮಾಜಿ ಸಚಿವ ರಮೇಶ ಜಾರಕಿಹೊಳಿ ಕೊನೆಗಳಿಗೆಯಲ್ಲಿ ಬಿಜೆಪಿ ಬೆಂಬಲಿಸಿದ್ದಾರೆ ಎನ್ನುವ ಕಾರಣದಿಂದ ರಾಯಬಾಗ ಭಾಗದಲ್ಲಿ ವಿಧಾನ ಪರಿಷತ್‌ ಸದಸ್ಯ ವಿವೇಕರಾವ ಪಾಟೀಲ ಬಿಜೆಪಿ ಬೆಂಬಲಿಸುವ ಮೂಲಕ ಕಾಂಗ್ರೆಸ್‌ಗೆ ಆಘಾತ ನೀಡಿರುವುದು ಬಿಜೆಪಿಗೆ ಅನುಕೂಲವಾಗಿದೆ ಎನ್ನುವುದು ಬಿಜೆಪಿ ವಲಯದಲ್ಲಿ ಭಾರಿ ಚರ್ಚೆವಾಗುತ್ತಿದೆ. ಅದರಂತೆ ಮಾಜಿ ಸಂಸದ ರಮೇಶ ಕತ್ತಿ ಬಿಜೆಪಿ ಮೇಲೆ ಮುನಿಸಿಕೊಂಡು ಕೊನೆಗಳಿಗೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡುವ ಮೂಲಕ ಬಿಜೆಪಿಗೆ ದೊಡ್ಡ ಹೊಡೆತ ಕೊಟ್ಟಿದ್ದಾರೆ. ಹೀಗಾಗಿ ಬಿಜೆಪಿ ನಿರೀಕ್ಷೆ ಮಾಡಿದಷ್ಟು ಲೀಡ್‌ ಬರುವುದಿಲ್ಲ ಎನ್ನುವುದು ಕಾಂಗ್ರೆಸ್‌ ಕಾರ್ಯಕರ್ತರ ಅಭಿಪ್ರಾಯ.

ಪ್ರಭಾವ ಬೀರಿದ ಮೋದಿ ಅಲೆ: ರಾಯಬಾಗ ಕ್ಷೇತ್ರದ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಯುವಕರು ಮತ್ತು ಪ್ರಜ್ಞಾವಂತರ ಮತದಾರರು ನರೇಂದ್ರ ಮೋದಿ ಮತ್ತೂಮ್ಮೆ ಪ್ರಧಾನಿಯಾಗಬೇಕೆಂದು ಬಿಜೆಪಿ ಬೆಂಬಲಿಸಿದ್ದಾರೆ. ಬಾಲಾಕೋಟ್ ದಾಳಿಯಿಂದ ಏಟಿಗೆ ಎದುರೇಟು ಕೊಟ್ಟ ಸೈನಿಕರ ಕಾರ್ಯ ಮೆಚ್ಚುವಂಥದ್ದು, ಸೈನಿಕರಿಗೆ ಮನೋಸ್ಥೈರ್ಯ ತುಂಬಿದ ಮೋದಿ ಪರವಾಗಿ ನಾವೆಲ್ಲ ಇದ್ದೇವೆ ಎಂಬುದು ಯುವಕರ ಅಭಿಪ್ರಾಯ.

ಕಾಂಗ್ರೆಸ್‌ಗೆ ಸಿದ್ದರಾಮಯ್ಯ ಟಾನಿಕ್‌: ರಾಯಬಾಗ ಕ್ಷೇತ್ರದ ಎಲ್ಲೆಡೆ ಮೋದಿ ಅಲೆ ಮತ್ತು ಬಿಜೆಪಿ ಪರ ವಾತಾವರಣ ನಿರ್ಮಾಣದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಜಾಣ ನಡೆ ಅನುಸರಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕರೆಯಿಸಿ ಎರಡು ಬಾರಿ ಪ್ರಚಾರ ಮಾಡಿಸಿದ್ದಾರೆ. ಇದು ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಹೆಚ್ಚಿನ ಹುರುಪು ತುಂಬಿದ್ದು, ಬಿಜೆಪಿಗೆ ಹೋಗುವ ಮತಗಳನ್ನು ಸಿದ್ದರಾಮಯ್ಯ ತಡೆದಿದ್ದಾರೆ ಎನ್ನುವುದು ಕ್ಷೇತ್ರದಾದ್ಯಂತ ಚರ್ಚೆಯಾಗುತ್ತಿದೆ.

ರಾಯಬಾಗ ಕ್ಷೇತ್ರದ ಬಾ. ಸವದತ್ತಿ, ನಸಲಾಪೂರ ಜಿಪಂ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಮುನ್ನಡೆ ಬರುತ್ತದೆ. ನಾಗರಮುನ್ನೋಳ್ಳಿ ಜಿಪಂ ಮತ್ತು ರಾಯಬಾಗ ನಗರ, ಕಬ್ಬೂರ ಪಟ್ಟಣ ಕಾಂಗ್ರೆಸ್‌ಗೆ ಭಾರಿ ಪ್ರಮಾಣದಲ್ಲಿ ಮತಗಳು ಲಭಿಸಲಿವೆೆ. ಉಳಿದ ಕಡೆಗಳಲ್ಲಿಯೂ ಕಾಂಗ್ರೆಸ್‌ಗೆ ಮತಗಳು ಬರಲಿವೆ. ಇದರಿಂದಈ ಬಾರಿ ಗೆಲುವು ನಮ್ಮದೆಯಾಗುತ್ತದೆ. -ಈರಗೌಡ ಪಾಟೀಲ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು ರಾಯಬಾಗ
ರಾಯಬಾಗ ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಕ್ತಿ ಮೀರಿ ಕೆಲಸ ಮಾಡಿದೆ. ಹೀಗಾಗಿ 7 ರಿಂದ 10 ಸಾವಿರ ಮುನ್ನಡೆ ಪಡೆಯುವ ನಿರೀಕ್ಷೆ ಇದೆ. ಒಂದು ವೇಳೆ ಮುನ್ನಡೆ ಸಿಗದೇ ಹೋದರೂ ಬಿಜೆಪಿ ಸರಿಸಮನಾಗಿ ಕಾಂಗ್ರೆಸ್‌ಗೆ ಮತಗಳು ಬರಲಿವೆ. ಯಾರು ಯಾರಿಗೂ ಒಳ್ಳೋಳಗೆ ಬೆಂಬಲ ನೀಡಿಲ್ಲ, ಅವರವರ ಪಕ್ಷದಲ್ಲಿ ಅವರವರು ಕೆಲಸ ಮಾಡಿದ್ದಾರೆ.
– ಮಹಾವೀರ ಮೋಹಿತೆಕಾಂಗ್ರೆಸ್‌ ಮುಖಂಡರು,ಕೆಆರ್‌ಡಿಸಿಎಲ್ ಮಾಜಿ ಉಪಾಧ್ಯಕ್ಷರು
ನರೇಂದ್ರ ಮೋದಿ ಮತ್ತೂಮ್ಮೆ ಪ್ರಧಾನಿಯಾಗಬೇಕು. ಶಾಸಕ ದುರ್ಯೋಧನ ಐಹೊಳೆ ಅಭಿವೃದ್ಧಿ ಕಾರ್ಯಗಳಿಂದ ಜನ ಬಿಜೆಪಿ ಬೆಂಬಲಿಸಿದ್ದಾರೆ. ಕರೋಶಿ ಜಿ.ಪಂ. ವ್ಯಾಪ್ತಿಯಲ್ಲಿ 6 ರಿಂದ 8 ಸಾವಿರ ಮತಗಳ ಮುನ್ನಡೆ ಬರುತ್ತದೆ. ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಗೆಲುವು ನಿಶ್ಚಿತ. -ಮಹೇಶ ಭಾತೆಬಿಜೆಪಿ ರಾಜ್ಯ ರೈತ ಮೋರ್ಚಾ ಸಹ ಸಂಚಾಲಕರು
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ 17 ಸಾವಿರ ಮತಗಳು ಮುನ್ನಡೆ ಬಂದಿದ್ದವು. ಈ ಚುನಾವಣೆಯಲ್ಲಿಯೂ ಅಷ್ಟೇ ಮತಗಳು ಬಿಜೆಪಿಗೆ ಬರಲಿವೆ. ಮೋದಿ ಅಲೆ, ಅಣ್ಣಾಸಾಹೇಬ ಜೊಲ್ಲೆ ಅವರ ಸಾಮಾಜಿಕ ಕಾರ್ಯಗಳು ಜನಪರವಾಗಿದ್ದರಿಂದ ಬಿಜೆಪಿಗೆ ಭಾರಿ ಮುನ್ನಡೆ ಬರುವುದರಲ್ಲಿ ಸಂದೇಹವಿಲ್ಲ. – ಸದಾನಂದ ಹಳಂಗಳಿಅಧ್ಯಕ್ಷರು ಬಿಜೆಪಿ ಮಂಡಲ ರಾಯಬಾಗ ಕ್ಷೇತ್ರ
•ಮಹಾದೇವ ಪೂಜೇರಿ

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.