ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಲು ಒತ್ತಾಯ
Team Udayavani, Oct 26, 2019, 12:24 PM IST
ಮೂಡಲಗಿ: ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಶುಭೋದಯ ಸ್ವಾಭಿಮಾನಿ ಕನ್ನಡ ಸಂರಕ್ಷಣಾ ವೇದಿಕೆ ಸದಸ್ಯರು ಮೂಡಲಗಿ ಸಾರಿಗೆ ನಿಯಂತ್ರಣಾಧಿ ಕಾರಿಗೆ ಮನವಿ ಸಲ್ಲಿಸಿದರು.
ಈ ವೇಳೆ ವೇದಿಕೆ ಅಧ್ಯಕ್ಷ ಸುಭಾಸ ಕಡಾಡಿ ಮಾತನಾಡಿ, ಮೂಡಲಗಿಗೆ ಪ್ರತಿ ದಿನ ಬೆಳಗ್ಗೆ 4ಗಂಟೆಗೆ ಔರಾದದಿಂದ (ಬೀದರ) ಮೂಡಲಗಿ ಮಾರ್ಗವಾಗಿ ಬೆಳಗಾವಿಗೆ ಹೋಗುವ ಬಸ್ ಮೂಡಲಗಿಗೆ ಬರದೆ ಇರುವದರಿಂದ ಮೂಡಲಗಿ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಶೀಘ್ರವೇ ಸಾರಿಗೆ ಇಲಾಖೆ ಅಧಿಕಾರಿಗಳು ಇಲ್ಲಿರುವ ಸಮಸ್ಯೆಗೆ ಕ್ರಮ ಕೈಗೊಳ್ಳಬೇಕು ಎಂದರು.
ಪ್ರತಿದಿನ ಹಲವಾರು ಪ್ರಯಾಣಿಕರು ಈ ಬಸನ್ನು ಅವಲಂಭಿಸಿದ್ದಾರೆ. ಮೂಡಲಗಿ ತಾಲೂಕು ಕೇಂದ್ರವಾಗಿದರಿಂದ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೆಲವು ಬಸಗಳು ಗುರ್ಲಾಪುರದಿಂದ ಹೊರಮಾರ್ಗವಾಗಿ ಹೋಗುತ್ತಿವೆ. ಇದರಿಂದ ಪರೀಕ್ಷೆಗೆ ಅಥವಾ ಸಂದರ್ಶನಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೂ ತೊಂದರೆಯಾಗಿದೆ ಎಂದರು. ಈ ಸಂದರ್ಭದಲ್ಲಿ ವೇದಿ ಕೆ ಸದಸ್ಯರಾದ ಶಿವಬಸು ಗಾಡವಿ, ಶಿವು ಪಿರೋಜಿ, ಕೇಶವ ದೇಸಾಯಿ, ಬಾಳಯ್ನಾ ಹಿರೇಮಠ, ರವಿ ನೇಸೂರ, ಶ್ರೀನಿವಾಸ ಗೀರೆನ್ನವರ, ಸಂತ್ರಾಮ ನಾಶಿ, ಶಿವಾನಂದ ಮುಧೋಳ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ