ಮದ್ಯದಂಗಡಿ ಪರವಾನಗಿ ರದ್ದತಿಗೆ ಒತ್ತಾಯ
Team Udayavani, Jul 19, 2019, 2:53 PM IST
ಹಾರೂಗೇರಿ: ಸ್ವಾಮಿ ವಿವೇಕಾನಂದ ನಗರಕ್ಕೆ ಹೊಂದಿಕೊಂಡಿರುವ ಮುಖ್ಯರಸ್ತೆಯಲ್ಲಿ ಮದ್ಯದಂಗಡಿ ಪ್ರಾರಂಭಿಸಲು ಅನುಮತಿ ನೀಡಬಾರದೆಂದು ಆಗ್ರಹಿಸಿ ಮಹಿಳಾ ಸಂಘಟನೆ ವತಿಯಿಂದ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.
ಹಾರೂಗೇರಿ: ಸ್ವಾಮಿ ವಿವೇಕಾನಂದ ನಗರಕ್ಕೆ ಹೊಂದಿಕೊಂಡಿರುವ ಮುಖ್ಯರಸ್ತೆಯಲ್ಲಿ ಮದ್ಯದಂಗಡಿ ಪ್ರಾರಂಭಿಸಲು ಅನುಮತಿ ನೀಡಬಾರದೆಂದು ಆಗ್ರಹಿಸಿ ಮಹಿಳಾ ಸಂಘಟನೆ ಕಾರ್ಯಕರ್ತೆಯರು ಮುಖ್ಯಾಧಿಕಾರಿಗೆ ಗುರುವಾರ ಮನವಿ ಸಲ್ಲಿಸಿದರು.
ಸ್ವಾಮಿ ವಿವೇಕಾನಂದ ನಗರದಲ್ಲಿ ಶ್ರೀರಾಘವೇಂದ್ರಸ್ವಾಮಿ ದೇವಸ್ಥಾನ, ಮಾಡರ್ನ್ ಕಾಲೇಜು, ಮಕ್ಕಳು ಹಾಗೂ ವಿದ್ಯಾರ್ಥಿನಿಯರು ಶಾಲಾ-ಕಾಲೇಜುಗಳಿಗೆ ತೆರಳುವ ಪ್ರಮುಖ ರಸ್ತೆಯಾಗಿದೆ. ಈ ಭಾಗದ ಮಹಿಳೆಯರು ಪಟ್ಟಣದ ಮಾರುಕಟ್ಟೆ, ದೇವಸ್ಥಾನಗಳಿಗೆ ಸಂಚರಿಸಲು ಮದ್ಯದಂಗಡಿಯಿಂದ ತೊಂದರೆಯಾಗಲಿದೆ. ನಿರಂಜನ ಶಿವಪ್ಪ ಬಾಗೇವಾಡಿ ಕಟ್ಟಡದಲ್ಲಿ ಪ್ರಾರಂಭವಾಗುತ್ತಿರುವ ಬಾರ್ ಮತ್ತು ರೆಸ್ಟೋರೆಂಟ್ನಿಂದ ಮಹಿಳೆಯರು ಮತ್ತು ಮಕ್ಕಳು ಭಯಭೀತರಾಗಿದ್ದಾರೆ. ಪುರಸಭೆ ಹಾಗೂ ಮೇಲಧಿಕಾರಿಗಳು ಕೂಡಲೇ ಮದ್ಯದಂಗಡಿ ಪರವಾನಿಗೆಯನ್ನು ರದ್ದು ಪಡಿಸಬೇಕೆಂದು ಆಗ್ರಹಿಸಿದರು.
ಶ್ರೀರಾಮಸೇನಾ ವಿಭಾಗೀಯ ಪ್ರಮುಖ ಗೋಪಾಲ ನಾಯಿಕ ಮಾತನಾಡಿ, ರಾಜ್ಯ ಹೆದ್ದಾರಿಯಿಂದ ಕನಿಷ್ಠ ಅರ್ಧ ಕಿಮೀ ಅಂತರದಲ್ಲಿ ಮದ್ಯದಂಗಡಿಗಳಿಗೆ ಅನುಮತಿ ನೀಡಬೇಕೆಂದು ಕಾನೂನವಿದ್ದರೂ ಮುಖ್ಯರಸ್ತೆ ಪಕ್ಕದಲ್ಲೇ ಪರವಾನಿಗೆ ನೀಡಲಾಗುತ್ತಿದೆ. ಒಂದು ವೇಳೆ ಅನುಮತಿ ನೀಡಿ, ಮದ್ಯದಂಗಡಿ ಪ್ರಾರಂಭವಾದಲ್ಲಿ ಸಾರ್ವಜನಿಕರೆಲ್ಲ ಸೇರಿ ಪ್ರತಿಭಟನೆ ನಡೆಸಲಾಗುವುದು ಎಂದರು.
ಪ್ರತಿಭಟನೆಯಲ್ಲಿ ಪುರಸಭೆ ಸದಸ್ಯೆ ಲಲಿತಾ ಬದ್ನಿಕಾಯಿ, ಹವಶವ್ವ ಬದ್ನಿಕಾಯಿ, ಶಾಂತಾ ಆಲಗೂರ, ಸರಸ್ವತಿ ಶಿರಗಾಂವಕರ, ಸುರೇಖಾ ಹಿಪ್ಪರಗಿ, ಗಂಗವ್ವ ಸದಲಗಿ, ಸಿದ್ದವ್ವ ಯಲಶೆಟ್ಟಿ, ಬಾಳವ್ವ ಬಾಡಗಿ, ಶಿವಲೀಲಾ ಸಾಲಿಮಠ, ವೀಣಾ ಪಾಟೀಲ, ಕಸ್ತೂರಿ ಪತ್ತಾರ, ಸುಧಾ ದೇಶಪಾಂಡೆ, ಭೀಮು ಭಂಡಾರಿ, ಹಣಮಂತ ಯಲಶೆಟ್ಟಿ, ರಮೇಶ ನಾಟಿಕರ, ಶ್ರೀಕಾಂತ ದಟವಾಡ, ಸುರೇಶ ಶೇಡಬಾಳ, ಜೀವನ ಮಾನಕಾಪೂರೆ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ