ರೈತರಿಗೆ ನ್ಯಾಯ ಕಲ್ಪಿಸಲು ಒತ್ತಾಯ


Team Udayavani, Oct 29, 2019, 12:08 PM IST

bg-tdy-1

ರಾಮದುರ್ಗ: ಫಸಲ್‌ ಬಿಮಾ ಯೋಜನೆಯಲ್ಲಿ ಅಧಿಕಾರಿಗಳ ತಪ್ಪಿನಿಂದಾಗಿ ರೈತರಿಗೆ ಮೋಸವಾಗಿದ್ದು, ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ತೆಗೆದುಕೊಂಡು ರೈತರಿಗೆ ನ್ಯಾಯ ಕಲ್ಪಿಸುವಂತೆ ಆಗ್ರಹಿಸಿ ಮುದೇನೂರ ಗ್ರಾಮಸ್ಥರು ಶಾಸಕ ಮಹಾದೇವಪ್ಪ ಯಾದವಾಡಗೆ ಮನವಿ ಸಲ್ಲಿಸಿದರು.

ಮುದೇನೂರ ಗ್ರಾಪಂ ಅಭಿವೃದ್ಧಿ ಅ ಧಿಕಾರಿ ಶೇಖರ ಹಿರೇಸೋಮನ್ನವರ ಮಾಡಿದ ಯಡವಟ್ಟಿನಿಂದಾಗಿ ಸಮೀಪದ ಆನೆಗುದ್ದಿ ಗ್ರಾಮದ ರೈತರಿಗೆ ಹಂಚಿಕೆ ಮಾಡಲಾದ ಬೆಳೆ ಹಾನಿ ಹಣ ಮುದೇನೂರ ಗ್ರಾಮಸ್ಥರ ಖಾತೆಗೆ ಜಮೆಯಾಗಿಲ್ಲ. 2018-19ನೇ ಸಾಲಿನ ಹಿಂಗಾರು ಹಂಗಾಮಿನ ಫಸಲ್‌ ಬಿಮಾ ಯೋಜನೆ ಪರಿಹಾರದ ಹಣ ಮುದೇನೂರ ರೈತರಿಗೆ ಬೇಕಾಬಿಟ್ಟಿಯಾಗಿ ಏಕರೆಗೆ ಕೇವಲ 1165 ಜಮೆಯಾದರೆ, ಆನೆಗುದ್ದಿ ಗ್ರಾಮದ ರೈತರ ಖಾತೆಗೆ ಏಕರೆಗೆ ಸುಮಾರು 10,800 ರೂ. ಜಮೆಯಾಗಿದೆ. ಎರಡು ಪ್ರದೇಶದ ಜಮೀನು, ಬೆಳೆಗಳು ಒಂದೆಯಾದರೂ ಪರಿಹಾರದ ಹಣ ಹಂಚಿಕೆಯಲ್ಲಿ ತಾರತಮ್ಯವಾಗಿದೆ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.

ಅಧಿಕಾರಿಗಳ ಬೇಜವಾಬ್ದಾರಿ ಹಾಗೂ ಪ್ಯೂಚರ ಜನರಲ್‌ ಇಂಡಿಯಾ ಇನ್ಸೂರನ್ಸ್‌ ಕಂಪನಿಯೊಂದಿಗೆ ಸ್ಥಳೀಯ ಗ್ರಾಪಂ ಹಾಗೂ ವಿವಿಧ ಇಲಾಖೆಯ ಅ ಧಿಕಾರಿಗಳು ಶಾಮೀಲಾಗಿ ಬೇಕಾಬೀಟ್ಟಿಯಾಗಿ ರೈತರ ಖಾತೆಗೆ ಪರಿಹಾರ ಹಣ ಹಂಚಿಕೆ ಮಾಡಲಾಗಿದೆ. ತಾಲೂಕು ಬರಪೀಡಿತವೆಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಆದರೆ ಸಂಕಷ್ಟದಲ್ಲಿರುವ ರೈತರಿಗೆ ಸರಕಾರದಿಂದ ಪರಿಹಾರ ದೊರೆಯಲಿದೆ ಎಂಬ ನಿರೀಕ್ಷೆಯಲ್ಲಿ ರೈತರು ಸಾಲಮಾಡಿ ಫಸಲ್‌ ಬಿಮಾ ಯೋಜನೆ ಕಂತು ಪಾವತಿ ಮಾಡಿದ್ದಾರೆ. ಆದರೆ ಅ ಧಿಕಾರಿಗಳು ಮಾತ್ರ ಆಯಾ ಪ್ರದೇಶದ ಬೆಳೆ ಹಾನಿ ಮಾಹಿತಿ ನೀಡುವಲ್ಲಿ ಮನ ಬಂದಂತೆ ವರ್ತಿಸಿ, ಬೆಳೆ ಕಟಾವು ಪ್ರಯೋಗದ ಮಾಹಿತಿ ನೀಡುವಲ್ಲಿ ರೈತರಿಗೆ ಮೋಸ ಮಾಡಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.

ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ರೈತರಿಗೆ ಆಗಿರುವ ಮೋಸದ ಕುರಿತು ತನಿಖೆ ನಡೆಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ರೈತರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಈ ವೇಳೆ ಗೋವಿಂದರಡ್ಡಿ ಜಾಯಿ, ರುದ್ರಗೌಡ ಪಾಟೀಲ, ಮೈಲಾರಪ್ಪ ಚಿಂಚಲಕಟ್ಟಿ, ಸಿದ್ದಪ್ಪ ಸಂಕದಾಳ, ಬಸಲಿಂಗಪ್ಪ ಹರಗುಟಗಿ, ಸಿದ್ದಪ್ಪ ಸಂಕದಾಳ, ಲಕ್ಕಪ್ಪ ಹುರಕನ್ನವರ, ಗಣಪತಿ ಬಸಿಡೋಣಿ, ಶಂಕರಗೌಡ ಚಿಕ್ಕನಗೌಡ್ರ, ಶಿವನಗೌಡ ಪವಾಡಿಗೌಡ್ರ, ಹುಸೇನಸಾಬ ಬಡೇಖಾನ, ತಿಮ್ಮಣ್ಣ ಹಕಾಟಿ, ಹಣಮಂತ ಅಂಗಡಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.