- Saturday 07 Dec 2019
ಹರಿಜನ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯ
•ನಿರ್ವಾಹಕನ ಶವ ಇಟ್ಟು ಪ್ರತಿಭಟನೆ••ಸಾರಿಗೆ ಅಧಿಕಾರಿಗಳ ಅಮಾನತಿಗೆ ಆಗ್ರಹ
Team Udayavani, Jul 8, 2019, 2:42 PM IST
ಬೆಳಗಾವಿ: ನಗರದ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಡಿಪೋದಲ್ಲಿ ನಿರ್ವಾಹಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದು, ಕಿರುಕುಳ ನೀಡಿದವರನ್ನು ಶೀಘ್ರವೇ ಅಮಾನತು ಮಾಡುವಂತೆ ದಲಿತ ಸಂಘಟನೆಗಳ ಕಾರ್ಯಕರ್ತರು ರವಿವಾರ ಮೃತದೇಹ ಇಟ್ಟು ಪ್ರತಿಭಟನೆ ನಡೆಸಿದರು.
ಇತ್ತೀಚೆಗೆ ಕೆಲವು ದಿನಗಳ ಹಿಂದೆಯಷ್ಟೇ ಹುಬ್ಬಳ್ಳಿ ಡಿಪೋಗೆ ವರ್ಗಾವಣೆಗೊಂಡಿದ್ದ ತಾಲೂಕಿನ ಕೇದನೂರ ಗ್ರಾಮದ ಆನಂದ ಹರಿಜನ (52) ಎಂಬ ನಿರ್ವಾಹಕ ಡಿಪೋ ಸಂಖ್ಯೆ2ರಲ್ಲಿ ನೇಣು ಬಿಗಿದುಕೊಂಡು ಶನಿವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ರವಿವಾರ ಬೆಳಗ್ಗೆ ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ದಲಿತ ಸಂಘಟನೆಯವರು ಹಾಗೂ ಸಿಬ್ಬಂದಿ ಪ್ರತಿಭಟನೆಗೆ ಮುಂದಾದರು. ಕಿರುಕುಳ ನೀಡಿದವರನ್ನು ಅಮಾನತು ಮಾಡುವವರೆಗೆ ಮೃತದೇಹ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದರು.
ಬೆಳಗಾವಿ ಡಿಪೋದಲ್ಲಿಯೇ ಅನೇಕ ವರ್ಷಗಳಿಂದ ಆನಂದ ಹರಿಜನ ಕರ್ತವ್ಯ ನಿರ್ವಹಿಸುತ್ತಿದ್ದರು. ಈಗ ದಿಢೀರ್ ವರ್ಗಾವಣೆ ಮಾಡಲಾಗಿದೆ. ಹೀಗಾಗಿ ಸಿಬ್ಬಂದಿ ಕಿರುಕುಳದಿಂದಲೇ ನಿರ್ವಾಹಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪದೇ ಪದೇ ಕಿರುಕುಳ ನೀಡಿದ್ದರಿಂದ ನಿರ್ವಾಹಕ ಆನಂದ ಹರಿಜನ ಮನನೊಂದಿದ್ದರು. ಈ ಸಾವಿನಿಂದ ಅವರ ಕುಟುಂಬ ಅನಾಥವಾಗಿದ್ದು, ಕೂಡಲೇ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಂದು ಹರಿಜನ ಕುಟುಂಬಕ್ಕೆ ನ್ಯಾಯ ಒದಗಿಸಿ ಕೊಡಬೇಕು. ಕೂಡಲೇ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.
ಸ್ಥಳಕ್ಕೆ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಭೇಟಿ ನೀಡಿ ಪ್ರತಿಭಟನಾಕಾರರನ್ನು ಭೇಟಿಯಾದರು. ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಬೆಳಗ್ಗೆ 7 ಗಂಟೆಯಿಂದಲೇ ಪ್ರತಿಭಟನೆ ನಡೆಸುತ್ತಿದ್ದ ದಲಿತ ಮುಖಂಡರನ್ನು ವಾಕರಸಾ ಸಂಸ್ಥೆಯ ಅಧಿಕಾರಿಗಳು ಸಮಾಧಾನ ಗೊಳಿಸಿದರೂ ಇದಕ್ಕೆ ಯಾರೂ ಕಿವಿಗೊಡಲಿಲ್ಲ. ಹಿರಿಯ ಅಧಿಕಾರಿಗಳು ಬಂದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಾಗ ಮುಖ್ಯ ಭದ್ರತಾ ಮತ್ತು ಜಾಗೃತ ಅಧಿಕಾರಿ ರಾಜೇಶ ಹುದ್ದಾರ, ಮುಖ್ಯ ತಾಂತ್ರಿಕ ಶಿಲ್ಪಿ ಪಿ.ಆರ್. ಮಹಾಜನ, ಬೆಳಗಾವಿ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಆರ್. ಮುಂಜಿ ಭೇಟಿ ಮಾಡಿ ಸಮಾಧಾನಪಡಿಸಿದರು. ಬಳಿಕ ಸ್ಥಳದಲ್ಲಿಯೇ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ ಬಳಿಕ ಮೃತದೇಹ ತೆಗೆದು ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಈ ವೇಳೆ ದಲಿತ ಮುಖಂಡರಾದ ಮಲ್ಲೇಶ ಚೌಗಲೆ, ರಾಜು ಪನ್ನ್ಯಾಗೋಳ, ಮಲ್ಲೇಶ ಕುರಂಗಿ, ಎಂ.ಆರ್. ಕಲಪತ್ರಿ, ಚವ್ಹಾಣ ಸೇರಿದಂತೆ ಇತರರು ಇದ್ದರು.
ಈ ವಿಭಾಗದಿಂದ ಇನ್ನಷ್ಟು
-
ಬೈಲಹೊಂಗಲ: ಪಟ್ಟಣದ ಇಂದಿರಾ ನಗರದ ಸಿದ್ಧರ ಕಾಲೋನಿಯಲ್ಲಿರುವ ಅಲೆಮಾರಿ ಸುಡಗಾಡ ಸಿದ್ಧ ಸಮಾಜ ಬಾಂಧವರಿಗೆ ನಿವೇಶನ ಹಕ್ಕು ಪತ್ರ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸಬೇಕು...
-
ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬೃಹತ್ ಪ್ರತಿಭಟನೆ...
-
ಬೆಳಗಾವಿ: ಈರುಳ್ಳಿ ದರ ಮುಗಿಲು ಮುಟ್ಟಿ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ನಗರದ ಹೊಟೇಲ್ ನಲ್ಲಿ ಬಿರ್ಯಾಣಿ ಜೊತೆಗೆ...
-
ಬೆಳಗಾವಿ : ಸಿದ್ದರಾಮಯ್ಯ ಅವರನ್ನು ಶೀಘ್ರವೇ ಬಿಜೆಪಿಗೆ ಕರೆ ತರುತ್ತೇನೆ ಎಂದು ರಮೇಶ ಜಾರಕಿಹೊಳಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಗೋಕಾಕದಲ್ಲಿ ಸುದ್ದಿಗಾರರ...
-
ಬೆಳಗಾವಿ: ಪ್ರವಾಹ ಹೊಡೆತದ ಬಿಸಿ ಈರುಳ್ಳಿಗೂ ತಟ್ಟಿದ್ದು, ಕೆಲವು ದಿನಗಳಿಂದ ಶತಕದ ಗಡಿ ದಾಟಿದ್ದ ಈರುಳ್ಳಿ ದರ ಈಗ ದ್ವಿಶತಕದತ್ತ ದಾಪುಗಾಲು ಹಾಕುತ್ತಿದೆ. ಬೆಳಗಾವಿಯ...
ಹೊಸ ಸೇರ್ಪಡೆ
-
ಕನ್ನಡ ದೃಶ್ಯ ಜಗತ್ತನ್ನು ಕಲಾತ್ಮಕವಾಗಿ ಶ್ರೀಮಂತಗೊಳಿಸಿದ ಕೆಲವೇ ಕೆಲವು ನಿರ್ದೇಶಕರ ಪೈಕಿ ಗಿರೀಶ್ ಕಾಸರವಳ್ಳಿ ಕೂಡ ಒಬ್ಬರು. ಚೊಚ್ಚಲ ನಿರ್ದೇಶನ, "ಘಟಶ್ರಾದ್ಧ'...
-
ಬೆಂಗಳೂರು: ರಾಜ್ಯಾದ್ಯಂತ ಅನುಷ್ಠಾನದಲ್ಲಿರುವ ಶುದ್ಧ ಕುಡಿಯುವ ನೀರು ಘಟಕಗಳ ಕಾರ್ಯನಿರ್ವಹಣೆ ಸಂಬಂಧ ಸೂಕ್ತ ನಿಯಮಾವಳಿ ರೂಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ....
-
ರಘುರಾಮನು ವನರಾಮನಾಗಿ ಆರಾಮದಿಂದ ಇದ್ದ ಸ್ಥಳವೇ ಚಿತ್ರಕೂಟ. ರಾಮ, ಲಕ್ಷ¾ಣ, ಸೀತೆಯರ ಚಿತ್ತಾಪಹಾರ ಮಾಡಿದ್ದ ಚಿತ್ರಕೂಟವು ಪ್ರವಾಸಿಗರ ಚಿತ್ತವನ್ನೂ ಅಪಹರಿಸುವಷ್ಟು...
-
ಮಂಗಳೂರು: ಪಾಶ್ಚಾತ್ಯ ಪ್ರಭಾವದಿಂದಾಗಿ ಭಾರತೀಯ ಸಂಗೀತವು ಸ್ವಲ್ಪ ಮಂಕಾಗಿ ಕಂಡರೂ ಮತ್ತೆ ಚಿಗುರುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ|...
-
ಇಂದು ದೌರ್ಜನ್ಯಗಳಿಗೆ ಮೇರೆಗಳಿಲ್ಲ. ದೆಹಲಿಯಲ್ಲೋ, ಹೈದರಾಬಾದ್ನಲ್ಲೋ ಹೆಣ್ಣಿನ ಮೇಲೆ ಹಾಗಾಯ್ತಲ್ಲ ಎನ್ನುತ್ತಾ ಕಳವಳಿಸುತ್ತಿರುವಾಗಲೇ, ಬೆಂಗಳೂರಿನಲ್ಲಿ...