ಟೋಲ್ ಗೇಟ್ ರದ್ಧತಿಗೆ ಒತ್ತಾಯ
Team Udayavani, Dec 7, 2019, 3:51 PM IST
ಬೈಲಹೊಂಗಲ: ಹಿರೇಬಾಗೇವಾಡಿ–ಸವದತ್ತಿ ಬೈಲಹೊಂಗಲ ಮಾರ್ಗವಾಗಿ ನಿರ್ಮಾಣಗೊಂಡ ನೂತನ ರಸ್ತೆಗೆ ಟೋಲ್ ಸಂಗ್ರಹ ಪ್ರಾರಂಭದ ವಿರುದ್ಧ ಬೀದಿಗಿಳಿದು ಹೋರಾಡಿದ ರೈತರ, ವಿವಿಧ ಕನ್ನಡಪರ ಸಂಘಟನೆಗಳ ಪ್ರತಿಭಟನೆಗೆ ಮನಿದ ಅಧಿಕಾರಿಗಳು ಶುಕ್ರವಾರ ಸಭೆ ನಡೆಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾ ಭವನದಲ್ಲಿ ಶುಕ್ರವಾರ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಪ್ರದೀಪ ಗುಂಟೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರೈತ ಮುಖಂಡರು, ಗುತ್ತಿಗೆದಾರರು, ವಕೀಲರು, ವೈದ್ಯರು, ಆಟೋ ಚಾಲಕರು, ಸಾರ್ವಜನಿಕರು ಪಾಲ್ಗೊಂಡು ತಮ್ಮ ಅಳಲು ತೊಡಿಕೊಂಡು ಟೋಲ್ ಗೇಟ್ ಸಂಪೂರ್ಣವಾಗಿ ರದ್ಧುಗೊಳಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ಜಿಪಂ ಸದಸ್ಯೆ ರೋಹಿಣಿ ಪಾಟೀಲ ಮಾತನಾಡಿ, ಹಳ್ಳಿಗಳನ್ನು ಜೋಡಿಸುವ ಹಿರೇಬಾಗೇವಾಡಿ, ಸವದತ್ತಿ ರಸ್ತೆಗೆ ಎರಡು ಟೋಲ್ ನಿರ್ಮಿಸುವ ಮೂಲಕ ಈ ಭಾಗದ ಜನರ ಜೇಬಿಗೆ ಕತ್ತರಿ ಹಾಕುವುದು ಸರಿಯಲ್ಲ. ಇದನ್ನು ಕೂಡಲೇ ರದ್ಧುಗೊಳಿಸಬೇಕು ಎಂದರು.
ಸವದತ್ತಿ ಎಪಿಎಂಸಿ ಸದಸ್ಯ ಎಫ್.ಎಸ್.ಸಿದ್ಧನಗೌಡರ ಮಾತನಾಡಿ, ಅಪೂರ್ಣಗೊಂಡಿರುವ ರಸ್ತೆಗೆ ಟೋಲ್ ಹಾಕುವುದು ನ್ಯಾಯ ಸಮ್ಮತವಲ್ಲ. ರಸ್ತೆ ಪೂರ್ಣಗೊಂಡ ನಂತರ ಬೈಲಹೊಂಗಲ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ನೋಂದಾಯಿತ ವಾಹನಗಳಿಗೆ ಸಂಪೂರ್ಣವಾಗಿ ಟೋಲ್ ನಿಂದ ಮುಕ್ತಿ ನೀಡಬೇಕು. ಗ್ರಾಮೀಣ ಈ ರಸ್ತೆಗೆ ಟೋಲ್ ರದ್ಧುಗೊಳಿಸಲು ಜನಪ್ರತಿನಿಧಿ ಗಳು, ಸರ್ಕಾರ ಗಮನ ಹರಿಸಬೇಕು. ಇಲ್ಲದಿದ್ದರೆ ಕೊಲ್ಲಾಪುರದಲ್ಲಿ ಟೋಲ್ ಕಿತ್ತು ಹಾಕಿದ ಹಾಗೆ ಇಲ್ಲಿಯೂ ಟೋಲ್ ಕಿತ್ತು ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಪಂ ಮಾಜಿ ಸದಸ್ಯ ಬಿ.ಎಂ.ಚಿಕ್ಕನಗೌಡರ ಮಾತನಾಡಿ, ಆನಿಗೋಳ ಗ್ರಾಮದಿಂದ ಸವದತ್ತಿಯವರೆಗೆ ನಿರ್ಮಾಣವಾದ ರಸ್ತೆಯ ಜಾಗೆ ಕೃಷಿ ಭೂಮಿಗಳಾಗಿದ್ದು, ಇಲ್ಲಿಯವರೆಗೆ ಸಹಿತ ರೈತರ ಹೆಸರಿನಲ್ಲಿದ್ದು, ಕಂದಾಯ ಇಲಾಖೆಯ ದಾಖಲೆಗಳಲ್ಲಿ ರಸ್ತೆಯ ಕುರುಹಗಳೇ ಇಲ್ಲವೆಂಬುವುದನ್ನು ದಾಖಲೆ ಸಮೇತ ಅಧಿಕಾರಿಗಳೆದುರು ತೆರೆದಿಟ್ಟರು. ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಪ್ರದೀಪ ಗುಂಟೆ ಮಾತನಾಡಿ, ಬೈಲಹೊಂಗಲ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ನೊಂದಾಯಿತ ವಾಹನಗಳಿಗೆ ಸಂಪೂರ್ಣ ವಿನಾಯಿತಿ ನೀಡುವ ಕುರಿತು ಕೆ.ಆರ್.ಡಿ.ಸಿ.ಎಲ್. ಮೂಲಕ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು.
ಕೆ.ಆರ್.ಡಿ.ಸಿ.ಎಲ್.ಅ ಧಿಕಾರಿ ಎಂ.ಕೆ. ಕುರುವಂಧಕರ ಮಾತನಾಡಿ, ಡಿ. 7ರಂದು ಪ್ರಾರಂಭವಾಗಬೇಕಿದ್ದ ಟೋಲ್ ಗೇಟ್ ತಾತ್ಕಾಲೀಕವಾಗಿ ಮುಂದೂಡಿದ್ದು, ಡಿ. 10ರೊಳಗೆ ಮತ್ತೂಮ್ಮೆ ಸಾರ್ವಜನಿಕರ ಸಭೆ ಕರೆದು ನಿರ್ಣಯ ತಿಳಿಸಲಾಗುವುದು ಎಂದರು.
ಭಾರತೀಯ ಕೃಷಿಕ ಸಮಾಜ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಕಮತ, ಉದ್ಯಮಿ ವಿಜಯ ಮೆಟಗುಡ್ಡ, ತಾಪಂ ಸದಸ್ಯ ಜಗದೀಶ ಬೂದಿಹಾಳ, ವಕೀಲರಾದ ದುಂಡೇಶ ಗರಗದ, ಶಶಿಧರ ಚಿಕ್ಕೋಡಿ, ಶಿವು ಕೋಲಕಾರ,ಸಂತೋಷ ಹಡಪದ, ಉಮೇಶ ಗೌರಿ ಮಾತನಾಡಿದರು. ಡಾ.ಚಿದಂಬರ ಕುಲಕರ್ಣಿ, ವಕೀಲ ಸಂಘದ ಉಪಾಧ್ಯಕ್ಷ ಕೆ.ಎಸ್.ಕುಲಕರ್ಣಿ, ಜಿಲ್ಲಾ ಪಂಚಾಯ್ತಿ ಸದಸ್ಯ ಬಸವರಾಜ ಬಂಡಿವಡ್ಡರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ
Shivaraj Tangadagi ಹೇಳಿಕೆ ಅತಿರೇಕದ ಪರಮಾವಧಿ: ಯಡಿಯೂರಪ್ಪ ಆಕ್ರೋಶ
MUST WATCH
ಹೊಸ ಸೇರ್ಪಡೆ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ