ಕಡ್ಡಾಯ ಸ್ಕೌಟ್-ಗೈಡ್ಸ್ ಘಟಕ ಸ್ಥಾಪಿಸಿ
Team Udayavani, Feb 5, 2020, 12:06 PM IST
ಚಿಕ್ಕೋಡಿ: ಸ್ಕೌಟ್ ಮತ್ತು ಗೈಡ್ಸ್ ಇಲ್ಲದ ಪ್ರತಿ ಅನುದಾನಿತ, ಅನುದಾನರಹಿತ ಮತ್ತು ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ತರಬೇತಿ ನೀಡಿ ಕಡ್ಡಾಯವಾಗಿ ಘಟಕಗಳನ್ನು ಸ್ಥಾಪಿಸಬೇಕೆಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳಗಾವಿ ಜಿಲ್ಲಾ ಮುಖ್ಯ ಆಯುಕ್ತರು ಹಾಗೂ ಡಿಡಿಪಿಐ ಗಜಾನನ ಮನ್ನಿಕೇರಿ ಹೇಳಿದರು.
ಇಲ್ಲಿನ ಸಿಟಿಇ ಸಂಸ್ಥೆಯ ಡಿ. ಕೆ. ಶಹಾ ಶಾಲಾ ಸಭಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ ಚಿಕ್ಕೋಡಿ ಹಾಗೂ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಚಿಕ್ಕೋಡಿ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಗೆ ಕಾರ್ಯಕ್ರಮ ನಡೆಸಲು ಕೊಠಡಿಯ ಬೇಡಿಕೆಗೆ ಅನುಮೋದನೆ ನೀಡಿದ ಅವರು, ಶಿಕ್ಷಕರೊಂದಿಗೆ ಚರ್ಚೆ ನಡೆಸಿ ಹಲವಾರು ಸಮಸ್ಯೆಗಳಿಗೆ ಸ್ಪಂದಿಸಿದರು. ರಾಜ್ಯದಲ್ಲಿಯೇ ಚಿಕ್ಕೋಡಿ ತಾಲೂಕನ್ನು ಸ್ಕೌಟ್ಸ್ ಮತ್ತು ಗೈಡ್ಸ್ನ ಮಾದರಿ ತಾಲೂಕಾಗಿಸಲು ಸೂಚಿಸಿದರು. ಅಧ್ಯಕ್ಷತೆ ವಹಿಸಿದ್ದ ಚಿಕ್ಕೋಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎ. ಮೇಕನಮರಡಿ ಪ್ರತಿ ಶಾಲೆಯಲ್ಲಿ ಘಟಕಗಳನ್ನು ಸ್ಥಾಪಿಸಿ ವ್ಯವಸ್ಥಿತವಾಗಿ ಮುನ್ನಡೆಸಿಕೊಂಡು ಹೋಗುವಂತೆ ಸಲಹೆ ನೀಡಿದರು.
ಕಾರ್ಯಕ್ರಮಕ್ಕೆ ಜಿಲ್ಲಾ ಸಂಘಟಕರಾದ ಎನ್.ಬಿ. ಗುಡಸಿ, ಡಿ.ಬಿ. ಅತ್ತಾರ, ಡಿ.ಕೆ. ಶಹಾ ಶಾಲೆಯ ಆಡಳಿತಾಧಿಕಾರಿ ಆರ್.ಪಿ. ದೊಡಮನಿ, ಚಿಕ್ಕೋಡಿ ದೈಹಿಕ ಶಿಕ್ಷಣ ಪ್ರಭಾರಿ ಶಿಕ್ಷಣಾ ಧಿಕಾರಿ ಬಿ.ಎಸ್. ಶೇವಾಳೆ, ಸಂಪನ್ಮೂಲ ವ್ಯಕ್ತಿಗಳಾದ ಪಿ.ಪಿ. ಸಾಮಕ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಚಿಕ್ಕೋಡಿಯ ಕಾರ್ಯದರ್ಶಿಗಳಾದ ಎನ್.ಜಿ. ಪಾಟೀಲ, ಮತ್ತು ತಾಲೂಕಿನ ಎಲ್ಲ ಸ್ಕೌಟ್ ಮಾಸ್ಟರ್ ಮತ್ತು ಗೈಡ್ಸ್ ಕ್ಯಾಪ್ಟನ್ಸ್ ಉಪಸ್ಥಿತರಿದ್ದರು. ದೈಹಿಕ ಶಿಕ್ಷಕ ಎನ್.ಜಿ. ಪಾಟೀಲ ಸ್ವಾಗತಿಸಿದರು. ಕಿರಣ ಮುರಾಳೆ ವಂದಿಸಿದರು. ಶ್ರೀಮತಿ ಎಸ್.ಜಿ. ಜೋಶಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ