ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಿಗೆ ಆಹ್ವಾನ
Team Udayavani, Nov 21, 2018, 4:54 PM IST
ಎಂ.ಕೆ.ಹುಬ್ಬಳ್ಳಿ: ಚಿಕ್ಕಮುನವಳ್ಳಿ ಗ್ರಾಮದಲ್ಲಿ ಡಿ. 8 ರಂದು ನಡೆಯಲಿರುವ ಖಾನಾಪುರ ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಖ್ಯಾತ ಸಾಹಿತಿ ಸತೀಶ ಕುಲಕರ್ಣಿ ಅವರನ್ನು ಹಾವೇರಿಯ ಅವರ ನಿವಾಸಕ್ಕೆ ತೆರಳಿ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು, ಗ್ರಾಮಸ್ಥರು ತೆರಳಿ ಸತ್ಕರಿಸಿ ಆಹ್ವಾನಿಸಿದರು.
ತಾಲೂಕಾ ಅಧ್ಯಕ್ಷ ವಿಜಯ ಬಡಿಗೇರ ಮಾತನಾಡಿ, ಸತೀಶ ಕುಲಕರ್ಣಿಯವರು ಖಾನಾಪುರದಲ್ಲಿ 80 ರ ದಶಕದಲ್ಲಿ ಸೇವೆ ಸಲ್ಲಿಸಿ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಲೋಕದಲ್ಲಿ ಸಂಚಲನ ಮೂಡಿಸಿದವರು ಅವರ ಸಾಹಿತ್ಯಿಕ ಕೊಡುಗೆ ಅಪಾರವಾಗಿದ್ದು ಇಂಥವರನ್ನು ಸರ್ವಾಧ್ಯಕ್ಷರನ್ನಾಗಿ ಆಹ್ವಾನಿಸಲು ನಮಗೆ ಹೆಮ್ಮೆಯಾಗುತ್ತಿದೆ ಹಾಗೂ ಸಮ್ಮೇಳನದ ಉದ್ಘಾಟಕರಾಗಿ ಖ್ಯಾತ ಸಾಹಿತಿಗಳಾದ ಸರಜೂ ಕಾಟ್ಕರ ಆಗಮಿಸಲು ಒಪ್ಪಿದ್ದಾರೆ ಮತ್ತು ಗ್ರಾಮಸ್ಥರ ಹಾಗೂ ಪದಾಧಿಕಾರಿಗಳ ಸಹಕಾರದಿಂದ ಸಮ್ಮೇಳನದ ಸಕಲ ಸಿದ್ಧತೆಗಳು ನಡೆದಿವೆ ಎಂದರು.
ಸತೀಶ ಕುಲಕರ್ಣಿ ಮಾತನಾಡಿ, ಗಡಿಭಾಗದ ಜನ ನನ್ನನ್ನು ಸರ್ವಾಧ್ಯಕ್ಷನನ್ನಾಗಿ ಆಹ್ವಾನಿಸುತ್ತಿರುವುದು ಸುದೈವ ಅಲ್ಲಿನ ನಾಡು ನುಡಿ ಸೇವೆಗೆ ನಾನು ಸಹಕಾರ ನೀಡುತ್ತೇನೆ ಎಂದರು. ಚಿಕ್ಕಮುನವಳ್ಳಿಯ ಅಶೋಕ ಬೆಂಡಿಗೇರಿ, ಕಸಾಪ ಪದಾಧಿಕಾರಿ ಬಿ.ಎನ್. ಬನೋಶಿ ಹಾಗೂ ಸಾಹಿತಿಗಳು ಮಾತನಾಡಿದರು. ನಾರಾಯಣ ಜೋಶಿ, ಎಸ್.ಎಸ್.ಹಿರೇಮಠ, ಆರ್.ಬಿ.ಹುಣಶೀಕಟ್ಟಿ ಹಾಗೂ ಹಾವೇರಿ ಜಿಲ್ಲಾ ಕಾರಾಗೃಹ ಅಧಿ ಕಾರಿ ಟಿ.ಬಿ.ಭಜಂತ್ರಿ, ತಾಲೂಕಾ ಕಸಾಪ ಮಾಜಿ ಅಧ್ಯಕ್ಷ ವಿ.ಎಂ.ಪತ್ರಿ ಮತ್ತು ಸಾಹಿತ್ಯ ಬಳಗದ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ