ಮಕ್ಕಳಿಗೆ ಅಕ್ಷರದ ಜತೆ ಸಂಸ್ಕಾರವೂ ಮುಖ್ಯ
ತುಕ್ಕಾನಟ್ಟಿ ಸರ್ಕಾರಿ ಶಾಲೆಯಲ್ಲಿ ಯುಗಾದಿ-ಹೊಸ ವರ್ಷಾಚರಣೆ
Team Udayavani, Apr 5, 2022, 3:12 PM IST
ಮೂಡಲಗಿ: ವಿದ್ಯಾರ್ಥಿಗಳು ನಮ್ಮ ನಾಡಿನ ಹಬ್ಬ-ಹರಿದಿನಗಳು, ಸಂಸ್ಕೃತಿ-ಸಂಸ್ಕಾರ ಅರಿತುಕೊಂಡು ಅಕ್ಷರಭ್ಯಾಸ ಮಾಡಿದಲ್ಲಿ ಆ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಂಸ್ಕಾರವಂತ ವ್ಯಕ್ತಿಗಳಾಗಿ ಬಾಳುತ್ತಾರೆ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು.
ಅವರ ತಾಲೂಕಿನ ತುಕ್ಕಾನಟ್ಟಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಚಂದ್ರಮಾನ ಯುಗಾದಿ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಅಕ್ಷರ ದಾಸೋಹದ ವಿಶೇಷ ಭೋಜನ ಕೂಟದಲ್ಲಿ ಮಾತನಾಡಿ, ಈ ಶಾಲೆಯ ಶಿಕ್ಷಕರು ನಮ್ಮ ಹಿಂದೂ ಸಂಸ್ಕೃತಿಯಂತೆ ಯುಗಾದಿ ಹಬ್ಬದ ದಿನ ಹೊಸ ವರ್ಷಾಚರಣೆ ಆಯೋಜಿಸಿರುವುದು ಶ್ಲಾಘನೀಯ ಎಂದರು.
ಗೋಕಾಕ ತಾಲೂಕಾ ಅಕ್ಷರದಾಸೋಹ ನಿರ್ದೇಶಕ ಅಶೋಕ ಮಲಬನ್ನವರ ಮಾತನಾಡಿ, ಬೇವು ಬೆಲ್ಲದಂತೆ ಜೀವನದಲ್ಲಿ ಕಷ್ಟ ಸುಖ ಸಮಾನವಾಗಿ ಹಂಚಿಕೊಂಡು ಸೌರ್ಹಾದಯುತವಾಗಿ ಬಾಳಬೇಕೆಂಬ ಪರಂಪರೆಯನ್ನು ಸಾರುವ ಈ ಯುಗಾದಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿ ವಿಶೇಷ ಭೋಜನವನ್ನು ಏರ್ಪಡಿಸಿರುವುದು ಮಾದರಿಯಾಗಿದೆ ಎಂದರು.
ಈಗಾಗಲೇ ಅಕ್ಷರದಾಸೋಹದಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ಭೋಜನ ಏರ್ಪಡಿಸುವುದರ ಮೂಲಕ ಸರ್ಕಾರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಈ ಸರ್ಕಾರಿ ಶಾಲೆ ರಾಜ್ಯಕ್ಕೆ ಮಾದರಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಸುಮಾರು 700 ವಿದ್ಯಾರ್ಥಿಗಳಿಗೆ ಬೇವು ಬೆಲ್ಲದೊಂದಿಗೆ ಕುರ್ಮಾ ಪುರಿ, ಬಟಾಟಿ ಪಲ್ಯೆ, ಗುಲಾಬ ಜಾಮೂನ್, ಲಾಡು, ಮಸಾಲೆ ಅನ್ನ, ಮೊಸರನ್ನ, ರಾಗಿ ಅಂಬಲಿ, ಸಾಂಬಾರ ಹೀಗೆ ವಿವಿಧ ಖಾದ್ಯಗಳನ್ನು ನೀಡಲಾಯಿತು.
ತುಕ್ಕಾನಟ್ಟಿ ಗ್ರಾಪಂ ಅಧ್ಯಕ್ಷ ಕುಮಾರ ಮರ್ದಿ, ಸದಸ್ಯರಾದ ಸುನಂದಾ ಭಜಂತ್ರಿ, ರೈತ ಮುಖಂಡ ಮಂಜು ಗದಾಡಿ ಹಾಗೂ ಪ್ರಧಾನ ಗುರುಗಳಾದ ಎ.ವಿ ಗಿರೆಣ್ಣವರ, ಶಿವಾನಂದ ಸೋಮವ್ವಗೋಳ, ಕಲ್ಲೋಳಿ ಸಂಪನ್ಮೂಲ ವ್ಯಕ್ತಿ ಗಣಪತಿ ಉಪ್ಪಾರ ಶಿಕ್ಷಕರಾದ ವಿಮಲಾಕ್ಷಿ ತೋರಗಲ್ಲ, ಕುಸುಮಾ ಚಿಗರಿ, ಲಕ್ಷ್ಮೀ ಹೆಬ್ಟಾಳ, ಪುಷ್ಪಾ ಭರಮದೆ, ಸಂಗೀತಾ ತಳವಾರ, ಶೀಲಾ ಕುಲಕರ್ಣಿ, ಖಾತೂನ ನದಾಫ, ಶಿವಲೀಲಾ ಹುಲಕುಂದ, ಹೊಳೆಪ್ಪಾ ಗದಾಡಿ, ಶಂಕರ ಲಮಾಣಿ, ಕಿರಣ ಭಜಂತ್ರಿ, ಮಹಾದೇವ ಗೋಮಾಡಿ, ಮಂಜುನಾಥ ಕಮ್ಮಾರ ಮತ್ತಿತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್