ಜಮೀರ್ಗೆ ಶಿಸ್ತಿಲ್ಲ,ನಂಬೋದು ಹೇಗೆ: ದೇವೇಗೌಡ
Team Udayavani, Apr 10, 2017, 10:46 AM IST
ಬೆಳಗಾವಿ: “ಜೆಡಿಎಸ್ನಿಂದ ಅಮಾನತಾಗಿರುವ ಶಾಸಕ ಜಮೀರ್ ಅಹ್ಮದ್ ಖಾನ್ಗೆ ಶಿಸ್ತಿಲ್ಲ. ಅವರು ಬೆಳಗ್ಗೆ ಒಂದು ಹೇಳುತ್ತಾರೆ, ಸಂಜೆ ಇನ್ನೊಂದು ಹೇಳಿ ಎಲ್ಲರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಾರೆ. ಅವರನ್ನು ನಂಬುವುದು ಹೇಗೆ’ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ವೇಳೆ ಶಾಸಕ ಜಮೀರ್ ಅಹ್ಮದ್ ಜೆಡಿಎಸ್ನಲ್ಲೇ ಉಳಿಯುವ ಆಸೆ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಅವರು, “ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರೋಪದ ಮೇಲೆ ಜೆಡಿಎಸ್ನ 8 ಶಾಸಕರನ್ನು ಅಮಾನತು ಮಾಡಲಾಗಿತ್ತು. ಈ ಪೈಕಿ ಮಹಾಲಕ್ಷ್ಮೀ ಲೇಔಟ್ ಶಾಸಕ ಗೋಪಾಲಯ್ಯ ಕ್ಷಮೆ ಕೇಳಿದ್ದು, ಆ ಕ್ಷೇತ್ರದ ಜನರ ಒತ್ತಾಯದ ಮೇರೆಗೆ ಮತ್ತೆ ಅವರನ್ನು ಜೆಡಿಎಸ್ಗೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಆದರೆ ಜಮೀರ್ ಅವರನ್ನು ಹೇಗೆ ನಂಬುವುದು ಎಂದು ಅರ್ಥವಾಗುತ್ತಿಲ್ಲ’ ಎಂದರು.