ಸರ್ಕಾರ ಹಠ ಬಿಟ್ಟು ಮಸೂದೆ ವಾಪಸ್ ಪಡೆಯಲಿ: ಸತೀಶ
ರೈತರ ಹೋರಾಟಕ್ಕೆ ವಿದೇಶಿಗರು ಬೆಂಬಲ ನೀಡಿದ್ದು ತಪ್ಪಲ್ಲ
Team Udayavani, Feb 8, 2021, 6:11 PM IST
ಬೆಳಗಾವಿ: ಕೃಷಿ ಕಾಯ್ದೆ ವಿರುದ್ಧ ರೈತರ ಹೋರಾಟ ನಿರಂತರವಾಗಿದ್ದು, ಸರ್ಕಾರ ರೈತರ ಪರವಾಗಿ ಕೆಲಸ ಮಾಡಬೇಕು. ಆದರೆ ಸರ್ಕಾರ ರೈತರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಹಠ ಬಿಟ್ಟು ವಿವಾದಿತ ಕೃಷಿ ಮಸೂದೆಯನ್ನು ಹಿಂಪಡೆಯಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆಗ್ರಹಿಸಿದರು.
ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ರೈತರ ಹೋರಾಟಕ್ಕೆ ಕಾಂಗ್ರೆಸ್ ಪ್ರಿ ಪ್ಲಾನ್ ಎಂಬ ಬಿಜೆಪಿ ಆರೋಪ ನಿರಾಧಾರ. ರೈತರು ಮೊದಲಿನಿಂದಲೇ ಈ ಹೋರಾಟ ನಡೆಸಿದ್ದಾರೆ. ಅವರ ಬೆಂಬಲಕ್ಕೆ ನಾವು ನಿಂತಿದ್ದೇವೆ. ಜ.26ರಂದು ದೆಹಲಿಯಲ್ಲಿ ಉದ್ದೇಶಪೂರ್ವಕವಾಗಿಯೇ ಬಿಜೆಪಿ ರೈತರ ಹೋರಾಟದ ದಿಕ್ಕು ಬದಲಿಸುವ ಪ್ರಯತ್ನ ಮಾಡಿದೆ. ಬಿಜೆಪಿ ನಾಯಕರ ಕುಮ್ಮಕ್ಕಿನಿಂದಲೇ ಹಿಂಸಾಚಾರ ನಡೆದಿದೆ. ಆದರೆ ಅವರ ಉದ್ದೇಶ ಯಶಸ್ವಿಯಾಗಲಿಲ್ಲ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ, ಫೋಟೋಗಳಲ್ಲಿ ಗೊತ್ತಾಗಿದೆ ಎಂದರು.
ದೇಶದಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ವಿದೇಶದ ಸೆಲೆಬ್ರೆಟಿಗಳು ಬೆಂಬಲಿಸಿರುವುದಕ್ಕೆ ಬಿಜೆಪಿ ವಿರೋಧಿ ಸುತ್ತಿರುವುದು ಸರಿಯಲ್ಲ. ಅಮೆರಿಕಕ್ಕೆ ಪ್ರಧಾನಿ ಮೋದಿ ಅವರೇ ಹೋಗಿ ಪ್ರಚಾರ ಮಾಡಿ ಬಂದಿದ್ದರು. ಬೇರೆ ದೇಶಕ್ಕೆ ಇವರು ಏಕೆ ಹೋಗಬೇಕಿತ್ತು? ದೇಶದಲ್ಲಿ ಆಗಾಗ ಅನ್ಯಾಯವಾದಾಗ ಕಾಂಗ್ರೆಸ್ ಧ್ವನಿ ಎತ್ತುತ್ತದೆ. ಶ್ರೀಲಂಕಾದಲ್ಲಿ ಅನ್ಯಾಯವಾದಾಗ ನಮ್ಮ ಸೈನಿಕರು ಹೋಗಿದ್ದರು. ಬಾಂಗ್ಲಾದೇಶವನ್ನು ಇಂದಿರಾ ಗಾಂಧಿ ಅವರೇ ಪ್ರತ್ಯೇಕ ದೇಶ ಮಾಡಿದ್ದರು. ಆದರೆ ಅಮೆರಿಕಕ್ಕೆ ಹೋಗಿ ಪ್ರಧಾನಿ ಮೋದಿ, ಟ್ರಂಪ್ ಪರವಾಗಿ ಏಕೆ ಪ್ರಚಾರ ಮಾಡಬೇಕಿತ್ತು. ಅದು ಬೇರೆ ದೇಶ ಅಲ್ಲವೇ ಎಂದು ಕಿಡಿಕಾರಿದರು.
ಇದನ್ನೂ ಓದಿ :ಶೃಂಗೇರಿ: ಗುರುಸ್ಪಂದನ ಕಾರ್ಯಕ್ರಮ
ವಿಧಾನಸಭೆ ಅಧಿವೇಶನದಲ್ಲಿ ಮುಖ್ಯಮಂತ್ರಿ ಬಿಎಸ್ವೈ ಉಪಚುನಾವಣೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದಿದ್ದಾರೆ. ಭಾರತ ಸ್ವತಂತ್ರ ರಾಷ್ಟ್ರ. ಎಲ್ಲರಿಗೂ ವಾಕ್ ಸ್ವಾತಂತ್ರ್ಯ ಇದೆ. ಮಾತನಾಡಲು ಅವಕಾಶ ಇದೆ, ಮಾತನಾಡುತ್ತಾರೆ. ಕೊನೆಗೆ ಮತದಾರರು ತೀರ್ಮಾನ ಮಾಡಬೇಕಾಗುತ್ತದೆ. ಕೆ.ಎಸ್. ಈಶ್ವರಪ್ಪ ಅವರೇ ಸಚಿವರಿದ್ದಾರೆ, ಪೆನ್ನು, ಹಾಳೆ ಅವರ ಹತ್ತಿರವೇ ಇದೆ. ಆದರೂ ಕುರುಬರ ಎಸ್ಟಿ ಮೀಸಲಾತಿ ಹೋರಾಟದಲ್ಲಿ ಈಶ್ವರಪ್ಪ ಭಾಗಿಯಾಗಿದ್ದಾರೆ. ಈ ಬಗ್ಗೆ ಅವರೇ ಉತ್ತರ ನೀಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?