ಜೆ ಬ್ರದರ್ಸ್ ಸರ್ಕಾರ ಪತನ ಪಟಾಕಿ
• ಮೂರನೇಯವರ ತಡೆಗೆ ತಂತ್ರ•ನೀರಾದರೆ ಅಂಬಲಿ, ಗಟ್ಟಿಯಾದರೆ ರೊಟ್ಟಿ ಜಾರಕಿಹೊಳಿ ಜಾಯಮಾನ
Team Udayavani, May 11, 2019, 12:03 PM IST
ಬೆಳಗಾವಿ: ಖಾಸಗಿ ಹೋಟೆಲ್ದಲ್ಲಿ ಯಮಕನಮರಡಿ ಕ್ಷೇತ್ರದ ಬಿಜೆಪಿ ಮುಖಂಡರ ಜೊತೆ ಸಭೆ ನಡೆಸಿದ ಶಾಸಕ ರಮೇಶ ಜಾರಕಿಹೊಳಿ.
ಬೆಳಗಾವಿ: ಲೊಕಸಭೆ ಚುನಾವಣೆಯ ಫಲಿತಾಂಶದ ನಂತರ ರಾಜ್ಯ ಸರಕಾರ ಪತನಕ್ಕೆ ಕ್ಷಣ ಗಣನೆ ಆರಂಭವಾಗಲಿದೆ ಎಂದು ಜಾರಕಿಹೊಳಿ ಸಹೋದರರು ಬಹಿರಂಗವಾಗಿ ಹೇಳುವ ಮೂಲಕ ಎರಡು ರಾಷ್ಟ್ರೀಯ ಪಕ್ಷಗಳ ಚಿತ್ತ ಮತ್ತೆ ಗಡಿನಾಡು ಬೆಳಗಾವಿಯ ಕಡೆ ತಿರುಗುವಂತೆ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಭೆ ನಡೆಸಿದ ಬೆನ್ನಲ್ಲೇ ಬೆಳಗಾವಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ರಮೇಶ ಜಾರಕಿಹೊಳಿ ಗುಪ್ತ ಸಭೆ ನಡೆಸಿದ್ದಲ್ಲದೆ ಮೈತ್ರಿ ಸರಕಾರದ ಉಳಿವಿನ ಬಗ್ಗೆ ಅನುಮಾನದ ಮಾತು ಆಡಿರುವುದು ರಾಜಕೀಯ ಚಟುವಟಿಕೆಗಳು ಮತ್ತೆ ಬಿರುಸುಗೊಳ್ಳುವಂತೆ ಮಾಡಿದ್ದಾರೆ.
ಬೆಳಗಾವಿ ಹಾಲು ಒಕ್ಕೂಟದ ಅಧ್ಯಕ್ಷರ ಆಯ್ಕೆ ಸಂಬಂಧ ನಗರದ ಖಾಸಗಿ ಹೋಟೆಲ್ದಲ್ಲಿ ಬಾಲಚಂದ್ರ ಜಾರಕಿಹೊಳಿ ನಿರ್ದೇಶಕರ ಸಭೆ ನಡೆಸುತ್ತಿರುವ ಸಂದರ್ಭದಲ್ಲೇ ರಮೇಶ ಜಾರಕಿಹೊಳಿ ಅಲ್ಲಿಗೆ ಆಗಮಿಸಿದ್ದು ನಾನಾ ರೀತಿಯ ರಾಜಕೀಯ ಚರ್ಚೆಗಳಿಗೆ ಎಡೆಮಾಡಿಕೊಟ್ಟಿತು. ಸಹೋದರ ಬಾಲಚಂದ್ರ ಜೊತೆ ಕೆಲಕಾಲ ಮಾತುಕತೆ ನಡೆಸಿದ ರಮೇಶ ಜಾರಕಿಹೊಳಿ ನಂತರ ಯಮಕನಮರಡಿ ಭಾಗದ ಬಿಜೆಪಿ ಹಿರಿಯ ನಾಯಕರ ಜೊತೆ ಸಹ ಗುಪ್ತ ಸಭೆ ನಡೆಸಿ ಮತ್ತಷ್ಟು ಕುತೂಹಲ ಉಂಟುಮಾಡಿದ್ದಾರೆ.
ರಮೇಶ ಅವರನ್ನು ಭೇಟಿ ಮಾಡಿಲ್ಲ ಎಂದು ಬಾಲಚಂದ್ರ ಹೇಳಿದರೂ ಒಂದೇ ಹೋಟೆಲ್ನಲ್ಲಿ ಇಬ್ಬರೂ ಏಕಕಾಲಕ್ಕೆ ಕಾಣಿಸಿಕೊಂಡಿದ್ದು, ಅವರ ಬೆಂಬಲಿಗರು ಪರಸ್ಪರ ಸಮಾಲೋಚನೆ ನಡೆಸಿದ್ದು, ಮುಂದಿನ ರಾಜಕೀಯ ಬೆಳವಣಿಗೆಯ ಸೂಚನೆ ನೀಡಿತು.
ಯಮಕನಮರಡಿ ಸಭೆ: ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಬಂದಾಗಿನಿಂದ ಪಕ್ಷದ ನಾಯಕರ ಜೊತೆ ಮುನಿಸಿಕೊಂಡು ಸಾಕಷ್ಟು ಅಂತರ ಕಾಯ್ದುಕೊಂಡಿರುವ ರಮೇಶ ಪಕ್ಷದ ಚಟುವಟಿಕೆಗಳಿಂದ ಸಹ ದೂರ ಉಳಿದಿದ್ದಾರೆ. ಇದಕ್ಕೆ ಪೂರಕವೆಂಬಂತೆ ಶುಕ್ರವಾರ ಯಮಕನಮರಡಿಯ ಬಿಜೆಪಿ ಮುಖಂಡರ ಜೊತೆ ಅರ್ಧಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿದ್ದಾರೆ.
ಯಮಕನಮರಡಿ ಭಾಗದ ಬಿಜೆಪಿ ಹಿರಿಯ ಮುಖಂಡರಾದ ಬಿ.ಬಿ. ಹಂಜಿ ಹಾಗೂ ಅವರ ಪುತ್ರ ರವಿ ಹಂಜಿ ಜೊತೆ ಸುಮಾರು ಆರ್ಧಗಂಟೆಗಳ ಕಾಲ ರಹಸ್ಯ ಸಭೆ ನಡೆಸಿದ ರಮೇಶ ಜಾರಕಿಹೊಳಿ ಯಮಕನಮರಡಿ ವಿಧಾನಸಭಾ ಕ್ಷೇತ್ರದ ರಾಜಕೀಯ ಚಟುವಟಿಕೆಗಳು ಹಾಗೂ ಜನರ ಅಭಿಪ್ರಾಯದ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡಿದ್ದಾರೆ.
ಲೋಕಸಭೆ ಚುನಾವಣೆಯ ನಂತರ ಈ ಸರಕಾರ ಬೀಳುವುದು ಖಚಿತ. ಆಗ ತಾವೂ ರಾಜೀನಾಮೆ ನೀಡಿ ನಂತರ ನಡೆಯುವ ಉಪ ಚುನಾವಣೆಯಲ್ಲಿ ಗೋಕಾಕದಿಂದ ಸ್ಪರ್ಧೆ ಮಾಡುತ್ತೇನೆ. ಮುಂದೆ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಯಮಕನಮರಡಿಯಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿರುವ ಬಗ್ಗೆ ಮೂಲಗಳು ಮಾಹಿತಿ ನೀಡಿವೆ.
ತಮ್ಮ ಸ್ಪರ್ಧೆಯಿಂದ ಆಗುವ ಸಾಧಕ-ಬಾಧಕಗಳೇನು. ಜಾರಕಿಹೊಳಿ ಕುಟುಂಬದ ಬಗ್ಗೆ ಕ್ಷೇತ್ರದ ಜನರಲ್ಲಿ ಯಾವ ಅಭಿಪ್ರಾಯ ಇದೆ ಎಂಬುದರ ಬಗ್ಗೆ ರಮೇಶ ಮಾಹಿತಿ ಪಡೆದುಕೊಂಡಿದ್ದಾರೆ.
ನಾನು ಬಿಜೆಪಿಯಿಂದ ಸ್ಪರ್ಧೆ ಮಾಡುವುದು ಖಚಿತ. ಆಗ ಸತೀಶ ಜಾರಕಿಹೊಳಿ ನಮ್ಮ ವಿರುದ್ಧ ಸ್ಪರ್ಧೆ ಮಾಡಬಹುದು. ಇಲ್ಲವೇ ರಾಯಚೂರು ಭಾಗದಿಂದ ಸ್ಪರ್ಧೆ ಮಾಡಬಹುದು. ಆಗ ಇಲ್ಲಿ ಬಿಜೆಪಿ ಯಿಂದ ಸ್ಪರ್ಧೆ ಮಾಡುತ್ತಿದ್ದ ಮಾರುತಿ ಅಷ್ಟಗಿ ಸತೀಶ ಅವರ ಬೆಂಬಲ ಪಡೆದು ಕಾಂಗ್ರೆಸ್ದಿಂದ ಸ್ಪರ್ದೆ ಮಾಡಿದರೆ ಅದರಿಂದ ಆಗುವ ಪರಿಣಾಮಗಳೇನು. ಕ್ಷೇತ್ರದಲ್ಲಿ ಜಾರಕಿಹೊಳಿ ವಿರುದ್ಧ ಇರುವ ಅಭಿಪ್ರಾಯ ನಮ್ಮ ಮೇಲೆ ಆಗಬಹುದೇ ಎಂಬುದರ ಬಗೆಗೆ ಸಹ ರಮೇಶ ಜಾರಕಿಹೊಳಿ ವಿಚಾರಿಸಿದ್ದಾರೆ.
ಇದಲ್ಲದೆ ತಾವು ಬಿಜೆಪಿ ಯಿಂದ ಸ್ಪರ್ಧೆ ಮಾಡಿದರೆ ಆಗ ಹುಕ್ಕೇರಿಯ ಕತ್ತಿ ಸಹೋದರರಿಂದ ವಿರೋಧ ವ್ಯಕ್ತವಾಗಬಹುದು. ಅವರು ಪಕ್ಷ ಬಿಟ್ಟು ನಮ್ಮ ವಿರುದ್ಧ ರಾಜಕೀಯ ಚಟುವಟಿಕೆ ಮಾಡಬಹುದು. ಇದರಿಂದ ತಮ್ಮ ಗೆಲುವಿಗೆ ಸಮಸ್ಯೆಯಾಗುವುದಿಲ್ಲವೇ ಎಂಬುದರ ಬಗ್ಗೆ ಸಹ ರಮೇಶ ಅವರು ಹಂಜಿ ಕುಟುಂಬದ ಸದಸ್ಯರ ಜೊತೆ ಮಾತುಕತೆ ನಡೆಸಿದ್ದಾರೆ ಎಂಬುದು ಅವರ ಆಪ್ತ ವಲಯದ ಹೇಳಿಕೆ.
ಆದರೆ ಜಾರಕಿಹೊಳಿ ಕುಟುಂಬದ ಅದರಲ್ಲೂ ರಮೇಶ ಜಾರಕಿಹೊಳಿ ಅವರನ್ನು ಬಹಳ ಹತ್ತಿರದಿಂದ ನೋಡಿರುವ ಗೋಕಾಕದ ನಾಯಕರು ಇದು ಈ ಕುಟುಂಬದ ಮತ್ತೂಂದು ನಾಟಕ. ಮೂರನೇಯವರ ಪ್ರವೇಶ ಎಲ್ಲಿಯೂ ಆಗಬಾರದು ಎಂಬ ಲೆಕ್ಕಾಚಾರದಿಂದ ಇದು ನಡೆದಿದೆ. ಹಿಟ್ಟು ನೀರಾದರೆ ಅಂಬಲಿ ಮಾಡಿಕೊಳ್ಳುವದು ಗಟ್ಟಿಯಾದರೆ ರೊಟ್ಟಿ ಮಾಡುವುದು ಜಾರಕಿಹೊಳಿ ಅವರ ಲೆಕ್ಕಾಚಾರ ಎಂಬ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.
•ಕೇಶವ ಆದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ