ಜಾರಕಿಹೊಳಿ ಸೋದರರಿಗೆ ನಾಯಕರಿಂದ ಸಡ್ಡು?

ಉಮೇಶ ಕತ್ತಿ ಮನೆಯಲ್ಲಿ ಸಭೆ ಸವದಿ, ಜೊಲ್ಲೆ ಸಹಿತ ಹಲವರ ಉಪಸ್ಥಿತಿ

Team Udayavani, Jan 24, 2022, 6:55 AM IST

ಜಾರಕಿಹೊಳಿ ಸೋದರರಿಗೆ ನಾಯಕರಿಂದ ಸಡ್ಡು?

ಬೆಳಗಾವಿ: ರಾಜ್ಯ ಮತ್ತು ಜಿಲ್ಲಾ ರಾಜಕೀಯದಲ್ಲಿ ತಮ್ಮದೇ ಆದ ಪ್ರಭಾವ ಹಾಗೂ ವರ್ಚಸ್ಸು ಹೊಂದಿರುವ ಜಾರಕಿಹೊಳಿ ಸಹೋ ದರರನ್ನು ಬಿಜೆಪಿ ರಾಜಕೀಯ ಚಟುವಟಿಕೆಗಳಿಂದ ದೂರವಿಡುವ ಪ್ರಯತ್ನ ನಡೆದಿದೆ. ಇದೇ ಹಾದಿಯಲ್ಲಿ ಬಿಜೆಪಿಯ ಎಲ್ಲ ಸಮುದಾಯದ ಮುಖಂಡರೆಲ್ಲ ಒಂದಾಗಿದ್ದಾರೆ ಎಂಬ ಗುಲ್ಲು ಶುರುವಾಗಿದೆ. ಎರಡು ದಿನಗಳ ಹಿಂದೆ ಅರಣ್ಯ ಸಚಿವ ಉಮೇಶ ಕತ್ತಿ ಮನೆಯಲ್ಲಿ ನಡೆದ ಜಿಲ್ಲೆಯ ಪ್ರಮುಖ ಮುಖಂಡರ ರಹಸ್ಯ ಸಭೆ ಈ ಅನುಮಾನಗಳಿಗೆ ಆಸ್ಪದ ಮಾಡಿಕೊಟ್ಟಿದೆ.

ಸಭೆಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಸಂಸದ ಅಣ್ಣಾಸಾಹೇಬ ಜೊಲ್ಲೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಮಹಾಂತೇಶ ದೊಡ್ಡಗೌಡರ, ಪಿ.ರಾಜೀವ್‌, ಶ್ರೀಮಂತ ಪಾಟೀಲ್‌, ಮಹೇಶ ಕುಮಟಳ್ಳಿ, ರಾಜ್ಯಸಭಾ ಮಾಜಿ ಸದಸ್ಯ ಪ್ರಭಾಕರ ಕೋರೆ, ವಿಧಾನ ಪರಿಷತ್‌ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಮೊದಲಾದವರಿದ್ದರು. ರಮೇಶ ಜಾರಕಿಹೊಳಿ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರಿಗೆ ಮಾತ್ರ ಸಭೆಗೆ ಆಹ್ವಾನ ನೀಡಿರಲಿಲ್ಲ.

ಬೆಳಗಾವಿ ಉಪಚುನಾವಣೆ, ವಿಧಾನ ಪರಿಷತ್‌ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿ ತಾಂಶದ ಬಳಿಕ ಜಿಲ್ಲಾ ರಾಜಕೀಯ ಮೊದಲಿ ನಂತಿಲ್ಲ ಎನ್ನಲಾಗುತ್ತಿದೆ. ಮುಖ್ಯವಾಗಿ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಸೋಲು, ಸ್ಥಳೀಯ ಸಂಸ್ಥೆಗಳಲ್ಲಿ ಪಕ್ಷದ ಹಿನ್ನಡೆಯು ರಮೇಶ ಜಾರಕಿಹೊಳಿ ಮತ್ತು ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ಅನುಮಾನದಿಂದ ನೋಡುವಂತೆ ಮಾಡಿದೆ.

ಡಿಸಿಸಿ ಬ್ಯಾಂಕ್‌ ವಿಚಾರದಲ್ಲಿ ಕತ್ತಿ ಸಹೋದರರ ಜತೆ ಮುನಿಸಿಕೊಂಡಿದ್ದ ಲಕ್ಷ್ಮಣ ಸವದಿ ಅವರು ಉಮೇಶ ಕತ್ತಿ ಜತೆ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿರುವುದು ಚರ್ಚೆಗೆ ಕಾರಣವಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಚಿಹ್ನೆ ಮೇಲೆ ಸ್ಪರ್ಧಿಸುವ ಅವಕಾಶ ಇದ್ದರೂ ಪಕ್ಷೇತರರ ಹೆಸರಿನಲ್ಲಿ ತಮ್ಮ ಬೆಂಬಲಿಗರನ್ನು ನಿಲ್ಲಿಸಿ ಅವರನ್ನು ಗೆಲ್ಲಿಸಿ ತಂದಿದ್ದು, ಪಕ್ಷದ ನಿಷ್ಠಾವಂತ ಮುಖಂಡರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎಂಬ ಮಾತುಗಳು ಕೇಳಿಬಂದಿದ್ದವು.

ಜಿಲ್ಲಾ ಉಸ್ತುವಾರಿ ಮೇಲೆ ಕಣ್ಣು

ಇನ್ನೊಂದೆಡೆ ಉಮೇಶ ಕತ್ತಿ ಅವರಿಗೆ ಜಿಲ್ಲಾ ಉಸ್ತುವಾರಿ ಮೇಲೆ ಕಣ್ಣು ಬಿದ್ದಿದೆ. ಹೀಗಾಗಿ ಜಿಲ್ಲೆಯ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಹಾಗೂ ಡಿಸಿಸಿ ಬ್ಯಾಂಕ್‌ನಲ್ಲಿ ತಮ್ಮ ಶಕ್ತಿ ಇನ್ನೂ ಗಟ್ಟಿ ಮಾಡಿಕೊಳ್ಳಲು ಈ ಸಭೆ ಕರೆದಿದ್ದರು. ಇದೇ ಸಮಯದಲ್ಲಿ ಕೆಲ ಶಾಸಕರಿಗೆ ಸಚಿವ ಸ್ಥಾನ ಹಾಗೂ ನಿಗಮ-ಮಂಡಳಿ ಆಸೆಯನ್ನೂ ಸಹ ತೋರಿಸಲಾಗಿದೆ ಎಂಬ ಮಾತುಗಳು ಸಹ ಕೇಳಿಬಂದಿವೆ. ಸಂಪುಟ ಪುನಾರಚನೆ ವೇಳೆ ಕತ್ತಿ ಹಾಗೂ ಜೊಲ್ಲೆ ಅವರನ್ನು ಕೈಬಿಡಲಾಗುತ್ತದೆ ಎಂಬ ಮಾತುಗಳು ಕೇಳಿಬಂದಿವೆ.

ಸ್ಥಾನಮಾನ ಚರ್ಚೆ
ಜಿಲ್ಲಾ ರಾಜಕೀಯದ ಜತೆಗೆ ಶಿವರಾತ್ರಿ ವೇಳೆಗೆ ಸಂಪುಟ ಪುನಾರಚನೆ, ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಹಾಗೂ ಪಿ.ರಾಜೀವ್‌ಗೆ ಸಚಿವ ಸ್ಥಾನ, ಶಾಸಕ ಅನಿಲ ಬೆನಕೆ ಹಾಗೂ ಮಹಾಂತೇಶ ದೊಡ್ಡಗೌಡರಿಗೆ ನಿಗಮದ ಅಧ್ಯಕ್ಷ ಹುದ್ದೆ ಕೊಡಿಸುವ ಚರ್ಚೆ ನಡೆದಿದೆ. ಅಲ್ಲದೆ, ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ ಚುನಾವಣೆ, ಬೆಳಗಾವಿ ಪಾಲಿಕೆ ಮೇಯರ್‌, ಉಪ ಮೇಯರ್‌ ಆಯ್ಕೆ ಕುರಿತೂ ಚರ್ಚಿಸಲಾಗಿದೆ.

ಇದು ಬಿಜೆಪಿ ಅಧಿಕೃತ ಸಭೆ ಅಲ್ಲ. ದಿನಕ್ಕೊಂದು ಸಭೆ ನಡೆಯುತ್ತದೆ. ಅದರ ಬಗ್ಗೆ ನಾವು ತಲೆಕೆಡಿಸಿಕೊಳ್ಳುವು ದಿಲ್ಲ. ಕೆಲವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಈ ಸಭೆ ಮಾಡಿದ್ದಾರೆ. ಪಕ್ಷದಲ್ಲಿ ಯಾರು ಏನು ಕೆಲಸ ಮಾಡಿದ್ದಾರೆ. ಯಾರ ಕೊಡುಗೆ ಏನು ಎಂಬುದು ವರಿಷ್ಠರಿಗೆ ಗೊತ್ತಿದೆ.
-ಬಾಲಚಂದ್ರ ಜಾರಕಿಹೊಳಿ, ಶಾಸಕರು

ಇದು ಯಾರ ವಿರುದ್ಧದ ಸಭೆಯೂ ಅಲ್ಲ. ಕೆಲವು ಚುನಾವಣೆಯಲ್ಲಿ ಪಕ್ಷದ ಸೋಲಿಗೆ ಕಾರಣ ತಿಳಿದುಕೊಳ್ಳಲು ನಡೆಸಿದ ಸಭೆ. ಜಾರಕಿಹೊಳಿ ಸೋದರರನ್ನು ಕರೆಯದೇ ಇರುವುದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ.
– ಅಣ್ಣಾಸಾಹೇಬ ಜೊಲ್ಲೆ, ಸಂಸದ

-ಕೇಶವ ಆದಿ

ಟಾಪ್ ನ್ಯೂಸ್

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.