ಭೂಮಿಗಿಳಿದ ಜೆಸಿಬಿ; ಕಟ್ಟೆಯೊಡೆದ ಆಕ್ರೋಶ

|ಜಿಲ್ಲಾಡಳಿತ ವಿರುದ್ಧ ರೈತರ ಅಸಮಾಧಾನ |ಕಾಮಗಾರಿ ನಿಲ್ಲಿಸಲು ಶಾಸಕಿ ಸೂಚನೆ |ಅನ್ಯಾಯದಿಂದ ಅಭಿವೃದ್ಧಿ ಅಸಾಧ್ಯ

Team Udayavani, Jun 1, 2019, 12:51 PM IST

bg-tdy-2..

ಬೆಳಗಾವಿ: ಒಳಚರಂಡಿ ನೀರು ಶುದ್ಧೀಕರಣ ಘಟಕ ನಿರ್ಮಾಣಕ್ಕೆ ಫಲವತ್ತಾದ ಭೂಮಿ ಸ್ವಾಧೀನ ಪಡಿಸಿಕೊಳ್ಳುತ್ತಿರುವುದನ್ನು ಖಂಡಿಸಿ ತಾಲೂಕಿನ ಹಲಗಾ ಗ್ರಾಮದ ಹೊಲದಲ್ಲಿ ಅಧಿಕಾರಿಗಳಿಗಾಗಿ ಹಾಕಿದ್ದ ಕುರ್ಚಿಗಳನ್ನು ಮುರಿದು ರೈತರು ಜಿಲ್ಲಾಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಹಲಗಾ ಹೊರವಲಯದ 19.20 ಎಕರೆ ಜಮೀನಿನಲ್ಲಿ 17 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾಡಳಿತ ಒಳಚರಂಡಿ ಘಟಕ ನಿರ್ಮಾಣ ಮಾಡಲು ಮುಂದಾಗಿದೆ. ಅದಕ್ಕಾಗಿ ಶುಕ್ರವಾರ ಬೆಳಗ್ಗೆ ಏಕಾಏಕಿ ಸ್ಥಳಕ್ಕೆ ಹೋದ ಅಧಿಕಾರಿಗಳು ಜೆಸಿಬಿ ಮೂಲಕ ಭೂಮಿ ಸಮತಟ್ಟು ಮಾಡಲು ಮುಂದಾಗಿದ್ದಾರೆ. ಆಗ ಇದಕ್ಕೆ ರೈತರು ಆಕ್ಷೇಪ ವ್ಯಕ್ತಪಡಿಸಿದರು. ಫಲವತ್ತಾದ ಈ ಜಮೀನು ತೆಗೆದುಕೊಂಡರೆ ಮುಂದೆ ನಮ್ಮ ಬದುಕು ಹೇಗೆ ಎಂದು ಪ್ರಶ್ನಿಸಿದರು.

ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಬರುವವರೆಗೆ ಯಾವುದೇ ಕಾರಣಕ್ಕೂ ಇಲ್ಲಿ ಕೆಲಸ ಮುಂದುವರಿಸಬಾರದು ಎಂದು ರೈತರು ಪಟ್ಟು ಹಿಡಿದರು. ಹಲವು ಗಂಟೆಗಳ ಕಾಲ ಕಾಯ್ದರೂ ಯಾವ ಅಧಿಕಾರಿಯೂ ಬರಲಿಲ್ಲ. ಇದರಿಂದ ಕುಪಿತಗೊಂಡ ರೈತರು ಅಲ್ಲಿ ಇದ್ದ ಪ್ಲಾಸ್ಟಿಕ್‌ ಕುರ್ಚಿಗಳನ್ನು ಪೊಲೀಸರ ಎದುರೇ ಧ್ವಂಸ ಮಾಡಿ ಅಸಮಾಧಾನ ವ್ಯಕ್ತಪಡಿಸಿದರು.

ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಗ್ರಾಮೀಣ ಶಾಸಲಕಿ ಲಕ್ಷ್ಮೀ ಹೆಬ್ಟಾಳಕರ ಅವರು ರೈತರನ್ನು ಸಮಾಧಾನ ಪಡಿಸಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಹುಲುಸಾಗಿ ಬೆಳೆದ ಭೂಮಿ ಮೇಲೆ ಜೆಸಿಬಿ ಹಾಕಿ ನಮ್ಮ ಜೀವನದ ಮೇಲೆ ಬರೆ ಎಳೆಯುತ್ತಿರುವ ಜಿಲ್ಲಾಡಳಿತ ಅನ್ಯಾಯ ಮಾಡುತ್ತಿದೆ. ರೈತರ ಜಮೀನು ಕಸಿದುಕೊಂಡು ಅಭಿವೃದ್ಧಿ ಮಾಡಲು ಹೊರಟಿರುವುದು ಎಷ್ಟು ಸರಿ. ನಮ್ಮ ಜಾಗ ನಾವು ಬಿಟ್ಟು ಕೊಡುವುದಿಲ್ಲ ಎಂದು ರೈತರು ಕಣ್ಣೀರು ಹಾಕುತ್ತ ಶಾಸಕಿ ಎದುರು ಅಳಲು ತೋಡಿಕೊಂಡರು. ಮಹಿಳೆಯರು, ಮಕ್ಕಳು ಸಮೇತ ಸ್ಥಳದಲ್ಲಿ ಜಮಾಯಿಸಿದ ರೈತರ ಕುಟುಂಬದವರ ಪರವಾಗಿ ಸ್ಥಳಕ್ಕೆ ಬಂದ ಶಾಸಕಿಯ ಮಾತನ್ನೂ ಕೇಳುವ ಸ್ಥಿತಿಯಲ್ಲಿ ಅಧಿಕಾರಿಗಳು ಇರಲಿಲ್ಲ. ಕೂಡಲೇ ಸಂಬಂಧಿಸಿದವರ ವಿರುದ್ಧ ಹರಿಹಾಯ್ದ ಶಾಸಕಿ ಹೆಬ್ಟಾಳಕರ, ತಾತ್ಕಾಲಿಕವಾಗಿ ಈ ಕೆಲಸ ನಿಲ್ಲಿಸಬೇಕು. ರೈತರಿಗೆ ನ್ಯಾಯ ಸಿಗುವವರೆಗೆ ಯಾವುದೇ ಕಾರಣಕ್ಕೂ ಈ ಜಮೀನು ಸ್ವಾಧೀನಪಡಿಸಿಕೊಳ್ಳಬಾರದು ಎಂದು ಹೇಳಿದರು. ಶಾಸಕಿಯಾಗಿರುವ ನನ್ನ ಗಮನಕ್ಕೂ ತರದೇ ಭೂಮಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವ ಜಿಲ್ಲಾಡಳಿತ ಕ್ರಮ ಸರಿಯಲ್ಲ. ರೈತರ ಮನಸ್ಸು ನೋಯಿಸಿ ಅಭಿವೃದ್ಧಿ ಮಾಡುವುದರಲ್ಲಿ ಅರ್ಥ ಇಲ್ಲ. ಈ ಭಾಗದ ರೈತರ ಧ್ವನಿಯಾಗಿ ನಾನು ಕೆಲಸ ಮಾಡುತ್ತೇನೆ. ಅಭಿವೃದ್ಧಿ ಕೆಲಸಕ್ಕೆ ನಮ್ಮ ವಿರೋಧ ಇಲ್ಲ. ಆದರೆ ಒಬ್ಬರಿಗೆ ಅನ್ಯಾಯ ಮಾಡಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದರಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ರೈತರಿಗೆ ನ್ಯಾಯ ಒದಗಿಸಿ ಕೊಡುವಲ್ಲಿ ನಾನು ಸದಾ ಮುಂಚೂಣಿಯಲ್ಲಿ ಇರುತ್ತೇನೆ ಎಂದು ಅಭಯ ನೀಡಿದರು.

ಎರಡು ದಿನಗಳ ಹಿಂದಷ್ಟೇ ಜೆಸಿಬಿ ಮೂಲಕ ರೈತರ ಹೊಲಗಳಿಗೆ ಬಂದಿದ್ದನ್ನು ಖಂಡಿಸಿ ಶಾಸಕಿ ಹೆಬ್ಟಾಳಕರ ಅವರ ಪುತ್ರ ಮೃಣಾಲ್ ಹೆಬ್ಟಾಳಕರ ಪ್ರತಿಭಟನೆ ನಡೆಸಿದ್ದರು. ಆಗ ಮೃಣಾಲ್ ಸೇರಿದಂತೆ 15ಕ್ಕೂ ಹೆಚ್ಚು ರೈತರನ್ನು ವಶಕ್ಕೆ ಪಡೆದುಕೊಂಡು ಪೊಲೀಸರು ನಂತರ ಬಿಡುಗಡೆಗೊಳಿಸಿದ್ದರು.

ರೈತರ ದನಿಯಾಗಿ ಕೆಲಸ ಮಾಡುವೆ:

ಇದ್ದ ಜಮೀನು ವಶಪಡಿಸಿಕೊಂಡು ಅಭಿವೃದ್ಧಿ ಮಾಡಲು ಹೊರಟಾಗ ರೈತರು ಏನು ಮಾಡಬೇಕು. ಕಣ್ಣೀರಲ್ಲಿ ಕೈ ತೊಳೆಯುವ ಪರಿಸ್ಥಿತಿ ಬಂದೀತು ಎಚ್ಚರಿಕೆ. ಜಿಲ್ಲಾಡಳಿತ ನನ್ನ ಗಮನಕ್ಕೂ ತರದೇ ಏಕಾಏಕಿ ಜೆಸಿಬಿ ಮೂಲಕ ಫಲವತ್ತಾದ ಜಮೀನು ಸಮತಟ್ಟು ಮಾಡಿ ಸ್ವಾಧೀನಪಡಿಸಿಕೊಳ್ಳುತ್ತಿರುವುದು ಎಷ್ಟು ಸರಿ. ರೈತರ ಧ್ವನಿಯಾಗಿ ನಾನು ಕೆಲಸ ಮಾಡುತ್ತೇನೆ. ಅನ್ಯಾಯ ಆಗಲು ಬಿಡುವುದಿಲ್ಲ.
• ಲಕ್ಷ್ಮೀ ಹೆಬ್ಟಾಳಕರ, ಶಾಸಕಿ ಬೆಳಗಾವಿ ಗ್ರಾಮೀಣ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.