ಕೋವಿಡ್ ಔಷಧ ಪ್ರಯೋಗಕ್ಕೆ ಜೀವನರೇಖಾ ಆಸ್ಪತ್ರೆ ಆಯ್ಕೆ


Team Udayavani, Jul 4, 2020, 3:59 PM IST

ಕೋವಿಡ್ ಔಷಧ ಪ್ರಯೋಗಕ್ಕೆ ಜೀವನರೇಖಾ ಆಸ್ಪತ್ರೆ ಆಯ್ಕೆ

ಬೆಳಗಾವಿ: ಕೋವಿಡ್ ಮಹಾಮಾರಿ ದೇಶದ ಎಲ್ಲ ಕಡೆ ಆತಂಕ ಸೃಷ್ಟಿಸಿರುವ ಬೆನ್ನಲ್ಲೇ ಸಮಾಧಾನಕರ ಸಂಗತಿಯೊಂದು ಹೊರಬಂದಿದೆ. ಕೇಂದ್ರ ಸರಕಾರದಿಂದ ಮಾನ್ಯತೆ ಪಡೆದಿರುವ ಕೋವ್ಯಾಕ್ಸಿನ್‌ ಔಷಧಿ ಈಗ ಪ್ರಯೋಗಕ್ಕೆ ಸಿದ್ಧವಾಗಿದ್ದು, ಎಲ್ಲ ಅಂದುಕೊಂಡಂತೆ ಯಶಸ್ವಿಯಾದರೆ ಮುಂದಿನ ತಿಂಗಳು ಸಾರ್ವಜನಿಕರಿಗೆ ಲಭ್ಯವಾಗುವ ನಿರೀಕ್ಷೆ ಇದೆ.

ಇದರ ಮಧ್ಯೆ ದೇಶದ 13 ಕಡೆಗಳಲ್ಲಿ ಜನರ ಮೇಲೆ ಇದರ ಪ್ರಯೋಗ ನಡೆಯಲಿದ್ದು, ಈ 13 ನಗರಗಳಲ್ಲಿ ಬೆಳಗಾವಿ ಸಹ ಆಯ್ಕೆಯಾಗಿರುವುದು ಹೊಸ ಬೆಳವಣಿಗೆಯಾಗಿದೆ. ಬೆಳಗಾವಿಯಲ್ಲಿ ಮುಂದಿನ ವಾರದಿಂದ ಇದರ ಪ್ರಯೋಗ ಆರಂಭವಾಗಲಿದೆ. ಬೆಳಗಾವಿ ನಗರದ ಜೀವನರೇಖಾ ಆಸ್ಪತ್ರೆಯನ್ನು ಕೇಂದ್ರ ಸರಕಾರ ಈ ಕೋವಿಡ್ ಔಷಧಿ ಪ್ರಯೋಗಕ್ಕೆ ಆಯ್ಕೆ ಮಾಡಿದ್ದು, ಶೀಘ್ರದಲ್ಲೇ ಈ ಆಸ್ಪತ್ರೆಯಲ್ಲಿ ಸಾರ್ವಜನಿಕರ ಮೇಲೆ ಔಷಧಿಯ ಪ್ರಯೋಗ ನಡೆಯಲಿದೆ. ಇದಕ್ಕಾಗಿ ಸುಮಾರು 200 ಜನ ಆರೋಗ್ಯವಂತ ಸ್ವಯಂ ಸೇವಕರನ್ನು ಗುರುತಿಸಲಾಗುತ್ತಿದೆ. ಈಗಾಗಲೇ ಕೆಲವರು ಹೆಸರು ಸಹ ನೋಂದಣಿ ಮಾಡಿಕೊಂಡಿದ್ದಾರೆ.

ಕರ್ನಾಟಕದಲ್ಲಿ ಬೆಳಗಾವಿಯ ಒಂದೇ ಆಸ್ಪತ್ರೆಯನ್ನು ಆಯ್ಕೆ ಮಾಡಲಾಗಿದೆ. ಈಗ ಸುಮಾರು 100 ರಿಂದ 200 ಜನರ ಮೇಲೆ ಮಾಡುವ ಪ್ರಯೋಗದ ಪರಿಣಾಮವನ್ನು ಗುರುತಿಸಿದ ಬಳಿಕ ಈ ಔಷಧಿಯನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗುತ್ತದೆ. ಮುಂದಿನ ವಾರದಿಂದ ಇದರ ಪ್ರಯೋಗ ನಡೆಯಲಿದ್ದು, ನಂತರ ಇದರ ವರದಿಯನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಗೆ (ಐಸಿಎಂಆರ್‌) ಕಳಿಸಲಾಗುವದು ಎಂದು ಜೀವನ ರೇಖಾ ಆಸ್ಪತ್ರೆಯ ನಿರ್ದೇಶಕ ಡಾ| ಅಮಿತ್‌ಭಾತೆ ಉದಯವಾಣಿಗೆ ಹೇಳಿದರು.

ಸಂಪೂರ್ಣ ಸ್ವದೇಶಿ ಔಷಧಿಯಾಗಿರುವ ಕೋವ್ಯಾಕ್ಸಿನ್‌ನ್ನು ಕೇಂದ್ರ ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಹಿಸುವ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು ಭಾರತ್‌ ಬಯೋಟೆಕ್‌ ಇಂಟರ್‌ ನ್ಯಾಶನಲ್‌ ಲಿಮಿಟೆಡ್‌ ಸಂಸ್ಥೆಯ ಜೊತೆಗೂಡಿ ಸಿದ್ಧಪಡಿಸಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.