ಜೆಜೆಎಂ; ಬಹುತೇಕ ಕಾಮಗಾರಿ ಪೂರ್ಣ

ಬೈಲಹೊಂಗಲದ 43 ಗ್ರಾಮಗಳಲ್ಲಿ ಯೋಜನೆ ಮುಕ್ತಾಯ ಹಂತದಲ್ಲಿ ; 88ರ ಪೈಕಿ ಐದು ಹಳ್ಳಿಗಳಲ್ಲಿ ಮಾತ್ರ ಯೋಜನೆ ಅನುಷ್ಠಾನ ಬಾಕಿ

Team Udayavani, May 29, 2022, 5:03 PM IST

25

ಬೈಲಹೊಂಗಲ: ಪ್ರತಿ ಮನೆಗೆ ಶುದ್ಧ ನೀರು ಪೂರೈಸುವ ಜಲಜೀವನ ಮಿಷನ್‌ ಯೋಜನೆ (ಜೆಜೆಎಂ) ಅನುಷ್ಠಾನ ಕಾರ್ಯ ತಾಲೂಕಿನಲ್ಲಿ ಪ್ರಗತಿ ಕಂಡು ಬಂದಿದೆ. ಗ್ರಾಪಂ ಸಿಬ್ಬಂದಿ, ಜನರ ಸಹಕಾರದಿಂದ ಶೇ.80 ಕಾಮಗಾರಿ ಪೂರ್ಣಗೊಂಡು ಕಾರ್ಯಕ್ರಮ ಅನುಷ್ಠಾನ ಸಮರ್ಪಕವಾಗಿ ನಡೆದಿದೆ.

ಕೇಂದ್ರ-ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷಿ ಯೋಜನೆಯಾದ ಜೆಜೆಎಂ ಯೋಜನೆಗೆ ಸರ್ಕಾರಗಳು ಶೇ.37.5 ಅನುದಾನ ಕೊಡುತ್ತವೆ. ಉಳಿದ ಶೇ.25 ಅನುದಾನದಲ್ಲಿ ಶೇ.5 ಅನುದಾನ ಗ್ರಾಪಂಗಳು ತಮ್ಮ 15ನೇ ಹಣಕಾಸು ಆಯೋಗದ ಅಡಿಯಲ್ಲಿ ಪಾವತಿಸಬೇಕಿದೆ. ಉಳಿದ ಶೇ.10 ರಷ್ಟನ್ನು ಗ್ರಾಮಸ್ಥರು ವಂತಿಕೆಯಾಗಿ ನೀಡಬೇಕಿದೆ.

ಕಳೆದ ಮೂರಾಲ್ಕು ವರ್ಷಗಳ ಹಿಂದೆ ಭೀಕರ ಬರಗಾಲ, ಕೊರೊನಾ ಸಂದರ್ಭದಲ್ಲಿ ಬೇಸಿಗೆ ಕಾಲದಲ್ಲಿ ನೀರಿನ ಅಭಾವ ಕಂಡು ಬಂದಿತ್ತು. ತಾಲೂಕಿನ ಹೋಗರ್ತಿ, ಕೊಳ್ಳಾನಟ್ಟಿ ಮೊದಲಾದ ಗ್ರಾಮಗಳಲ್ಲಿ ನೀರಿನ ಅಭಾವ ಕಂಡು ಬಂದು ನೀರಿಗಾಗಿ ಹೊಡೆದಾಟಗಳು ನಡೆದಿದ್ದವು. ಅಲ್ಲದೇ ಬೈಲಹೊಂಗಲದ ಜಿಪಂ ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ದಿನಾಲು ಸಾವಿರಾರು ಜನರು ಫೋನ್‌ ಮೂಲಕ ನೀರಿನ ಸಮಸ್ಯೆ ಬಗ್ಗೆ ಅಳಲು ತೋಡಿಕೊಳ್ಳುತ್ತಿದ್ದರು. ಆದರೆ ಕಳೆದ ನಾಲ್ಕು ವರ್ಷಗಳಿಂದ ಉತ್ತಮ ಮಳೆಯಾದ್ದರಿಂದ ಎಲ್ಲಿಯೂ ಬೇಸಿಗೆ ಕಾಲದಲ್ಲಿ ಟ್ಯಾಂಕರ್‌ ಮೂಲಕ ನೀರು ಪೂರೈಸಿದ ನಿದರ್ಶನಗಳಿಲ್ಲ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾರಂಭದಲ್ಲಿ ತೊಂದರೆ: ತಾಲೂಕಿನಲ್ಲಿ ಅಷ್ಟೇ ಏಕೆ ಜಿಲ್ಲೆಯಲ್ಲಿ ಅನುಷ್ಠಾನದ ಪ್ರಾರಂಭದಲ್ಲಿ ಕೇವಲ ನೆಲ ಅಗೆದು ಯೋಜನೆ ಸಂಪೂರ್ಣವಾಯಿತೆಂದು ಸುಳ್ಳು ಲೆಕ್ಕ ತೋರಿಸುತ್ತಾರೆಂದು ಹಲವರು ಆಡಿಕೊಂಡರು. ಕೆಲವೆಡೆ ಕಿಡಿಗೇಡಿಗಳು ಪೈಪ್‌ಲೈನ್‌ ಒಡೆದು ಹಾಳು ಮಾಡಿ ಯೋಜನೆಗೆ ಕೆಟ್ಟ ಹೆಸರು ಬರುವಂತೆ ನೋಡಿಕೊಳ್ಳಲಾಯಿತು. ಆದರೆ ಉತ್ತಮ ಅಧಿ ಕಾರಿಗಳು, ಗ್ರಾಪಂ ಸದಸ್ಯರ ಸಹಕಾರದಿಂದ ತಾಲೂಕಿನಲ್ಲಿ ಯೋಜನೆ ಸಾಕಾರಗೊಳ್ಳಲು ಮಾರ್ಗ ತೋರಿಸಿದೆ. ಇದೊಂದು ಯಶಸ್ವಿ ಹಂತಕ್ಕೆ ಬರಲು ಪ್ರತಿಯೊಬ್ಬರ ಕಾರ್ಯ ಶ್ಲಾಘಿಸಬೇಕಿದೆ.

 43 ಗ್ರಾಮಗಳಲ್ಲಿ ಯಶಸ್ವಿ ಯೋಜನೆ: ತಾಲೂಕಿನ 43 ಗ್ರಾಮಗಳಲ್ಲಿ ಯಶಸ್ವಿಯಾಗಿ ಯೋಜನೆಗೆ ಚಾಲನೆ ದೊರಕಿ ಕೆಲಸ ಮುಕ್ತಾಯ ಹಂತದಲ್ಲಿದೆ. ರಸ್ತೆ ಅಗೆದು ಪೈಪ್‌ಲೈನ್‌ ಅಳವಡಿಕೆ ಕೆಲಸದ ವೇಗ ಹೆಚ್ಚಿಸಿದೆಯಲ್ಲದೇ ಬಹುತೇಕ ಗ್ರಾಮಗಳಲ್ಲಿ ನೀರು ಪಡೆಯುವ ಸನ್ನಿವೇಶ ಕಂಡು ಬರುತ್ತದೆ. 43 ಹಳ್ಳಿಗಳಲ್ಲಿ ಯೋಜನೆ ಫಲಕಾರಿಯಾಗಿದ್ದು, ಒಟ್ಟಾರೆ 5120.29 ಲಕ್ಷ ರೂ. ಬಿಡುಗಡೆಯಾಗಿದ್ದು, ಅದರಲ್ಲಿ ಇಲ್ಲಿಯವರೆಗೆ 3182.29 ಲಕ್ಷ ರೂ. ಕಾರ್ಯ ನಡೆದಿದೆ. ತಾಲೂಕಿನಲ್ಲಿ 35,394 ಗ್ರಾಮಗಳಲ್ಲಿ ನಲ್ಲಿ ನೀರು ಒದಗಿಸಲಾಗಿದೆ. ಕಳೆದ ವರ್ಷ 40 ಹಳ್ಳಿಗಳನ್ನು ಯೋಜನೆ ಅನುಷ್ಠಾನಗೊಳಿಸಿದ್ದು, ಈ ಬಾರಿ 43 ಹಳ್ಳಿಗಳನ್ನು ಒಳಪಡಿಸಿದ್ದು ತಾಲೂಕಿನ 88 ಹಳ್ಳಿಗಳಲ್ಲಿ 5 ಹಳ್ಳಿಗಳಲ್ಲಿ ಮಾತ್ರ ಯೋಜನೆ ಅನುಷ್ಠಾನದ ಬಾಕಿ ಇದೆ. ಕೆಲವೆಡೆ ಸರ್ಕಾರದ ಅನುಮೋದನೆಗಾಗಿ ನೀರಿಕ್ಷಿಸಲಾಗುತ್ತಿದೆ. ಮುರಕೀಭಾವಿಯಲ್ಲಿ ಪೈಪ್‌ಲೈನ್‌ನಿಂದ ನೀರು ಹರಿಸುವ್‌ ಕಾರ್ಯ ಪ್ರಾಯೋಗಿಕವಾಗಿದ್ದು, ಮುರಕೀಬಾವಿ ಗ್ರಾಮಕ್ಕೆ 151.58 ಲಕ್ಷ ರೂ. ಅನುದಾನ ಲಭಿಸಿದೆ. ಅದರಲ್ಲಿ 105.86 ಲಕ್ಷ ರೂ. ವ್ಯಯ ಮಾಡಲಾಗಿದೆ. 738 ಮನೆಗಳಿಗೆ ಇದರಿಂದ ಅನುಕೂಲವಾಗಿದೆ ಎಂದು ಗ್ರಾಪಂ ಪಿಡಿಒ ರಮೇಶ ನಂದಿಹಳ್ಳಿ ತಿಳಿಸಿದ್ದಾರೆ.

ಸಂಗೊಳ್ಳಿಯಲ್ಲಿ ಪೈಪ್‌ಲೈನ್‌ನಿಂದ ನೀರು ಹರಿಸುವ ಕಾರ್ಯ ನಡೆಸಿದ್ದು, ಈ ಗ್ರಾಮಕ್ಕೆ 245 ಲಕ್ಷ ರೂ. ಅನುದಾನ ಲಭಿಸಿದೆ. ಅದರಲ್ಲಿ 193.79 ಲಕ್ಷ ರೂ. ವ್ಯಯ ಮಾಡಲಾಗಿದೆ. 1007 ಮನೆಗಳಿಗೆ ಇದರಿಂದ ಅನುಕೂಲವಾಗಿದೆ ಎಂದು ಗ್ರಾಪಂ ಸದಸ್ಯ ಬಸವರಾಜ ಕೊಡ್ಲಿ ಉದಯವಾಣಿಗೆ ಮಾಹಿತಿ ನೀಡಿದ್ದಾರೆ.

ತಾಲೂಕಿನಲ್ಲಿ ಜಲಜೀವನ್‌ ಮಿಷನ್‌ ಯೋಜನೆ ಅನುಷ್ಠಾನ ಕಾರ್ಯ ಉತ್ತಮ ರೀತಿಯಲ್ಲಿ ನಡೆದಿದ್ದು ಎಲ್ಲರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಪ್ರತಿಯೊಂದು ಹಳ್ಳಿಯ ಮನೆಗೂ ನೀರು ಸಿಗುವ ನಿಟ್ಟಿನಲ್ಲಿ ಶ್ರಮಿಸಲಾಗುತ್ತಿದೆ. ಎಸ್‌.ಕೆ. ಮೂಗಸಜ್ಜಿ, ಎಇಇ, ಜಿ.ಪಂ ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆ, ಬೈಲಹೊಂಗಲ        

– ಸಿ.ವೈ. ಮೆಣಶಿನಕಾಯಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.