ಬೆಳಗಾವಿ: 23ರಂದು ಉದ್ಯೋಗ ಮೇಳ
ಅರ್ಹ ಅಭ್ಯರ್ಥಿಗಳು ಸ್ಕಿಲ್ ಕನೆಕ್ಟ್ ಪೋರ್ಟಲ್ನಲ್ಲಿ ಹೆಸರು ನೊಂದಾಯಿಸಿಕೊಳ್ಳಬೇಕು
Team Udayavani, Dec 18, 2021, 5:51 PM IST
ಬೆಳಗಾವಿ: ನಗರದ ಗೋಗಟೆ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಇಂಜಿನಿಯರಿಂಗ್, ಡಿಪ್ಲೊಮಾ ಮತ್ತು ಐಟಿಐ ಪದವೀಧರರಿಗೆ ಇದೇ ದಿ.23ರಂದು ಉದ್ಯೋಗ ಮೇಳ ನಡೆಯಲಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಮೇಳವನ್ನು ಉದ್ಘಾಟಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದರು.
ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ಜಿಲ್ಲೆಯ ಸಚಿವರು ಮತ್ತು ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿದ ಅವರು ಈಗಾಗಲೇ 34 ಕಂಪನಿಗಳು ಈ ಮೇಳದಲ್ಲಿ ಪಾಲ್ಗೊಳ್ಳಲು ಒಪ್ಪಿಗೆ ಸೂಚಿಸಿದ್ದು, ಇನ್ನೂ 70 ಕಂಪನಿಗಳು ಬರಲು ಉತ್ಸುಕವಾಗಿವೆ. ಮೇಳವು ಸಂಪೂರ್ಣ ವಾಗಿ ಹೆ„ಬ್ರಿಡ್ ಮಾದರಿಯಲ್ಲಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಸ್ಕಿಲ್ ಕನೆಕ್ಟ್ ಪೋರ್ಟಲ್ನಲ್ಲಿ ಹೆಸರು ನೊಂದಾಯಿಸಿಕೊಳ್ಳಬೇಕು ಎಂದರು.
ನೋಂದಣಿ ಮಾಡಿಕೊಂಡ ನಂತರ ಉದ್ಯೋಗದ ಸ್ವರೂಪ, ಯಾವ ಕಂಪನಿಯು ಅಭ್ಯರ್ಥಿಯನ್ನು ಸಂದರ್ಶಿಸಲಿದೆ ಎನ್ನುವ ಅಗತ್ಯ ಮಾಹಿತಿಗಳನ್ನು ಒದಗಿಸಲಾಗುವುದು ಎಂದು ಅವರು ಹೇಳಿದರು.
ದಿ. 23ರಂದು ನಡೆಯುವ ಮೊದಲ ಸುತ್ತಿನ ಸಂದರ್ಶನದಲ್ಲಿ ಆಯ್ಕೆಯಾಗುವವರಿಗೆ ದಿ. 24 ರಂದು ಎರಡನೇ ಸುತ್ತಿನ ಸಂದರ್ಶನ ನಡೆಯಲಿದೆ. ಸಂದರ್ಶನದಲ್ಲಿ ವಿಫಲರಾಗುವ ಅಭ್ಯರ್ಥಿಗಳಿಗೆ ಏನು ಕೊರತೆ ಇದೆ ಎಂಬುದನ್ನು ಕಂಡುಕೊಂಡು ಅಂತಹವರಿಗೆ ಸೂಕ್ತ ಮತ್ತು ಅಗತ್ಯ ಕೌಶಲ್ಯ ತರಬೇತಿಗೆ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಹೇಳಿದರು.
80 ಸಾವಿರ ಉದ್ಯೋಗಾಕಾಂಕ್ಷಿಗಳಲ್ಲಿ ಸುಮಾರು 40 ಸಾವಿರ ಜನರಲ್ಲಿ ಸರಿಯಾದ ಕೌಶಲ್ಯಗಳೇ ಇಲ್ಲ. ಈ ಕೊರತೆಯನ್ನು ನಿವಾರಿಸಲು ಸರಕಾರ ಬದ್ಧವಾಗಿದೆ ಎಂದು ಸಚಿವರು ಹೇಳಿದರು.
ಶಾಸಕ ಅಭಯ ಪಾಟೀಲ ಮಾತನಾಡಿ, ಬೆಳಗಾವಿ ಭಾಗದ ಯುವಕ ಮತ್ತು ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡಬೇಕು ಎಂದು ಸಚಿವರಲ್ಲಿ ಮನವಿ ಮಾಡಲಾಗಿತ್ತು. ಅದಕ್ಕೆ ಸ್ಪಂದಿಸಿದ ಸಚಿವರು ದಿ.23 ರಂದು ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಿದ್ದಾರೆ ಎಂದರು. ಸಭೆಯಲ್ಲಿ ಸಚಿವ ಉಮೇಶ ಕತ್ತಿ, ಶಾಸಕರಾದ ಅಭಯ ಪಾಟೀಲ, ಪಿ.ರಾಜೀವ, ಮಹೇಶ ಕುಮಟಳ್ಳಿ, ಮಹಾಂತೇಶ ದೊಡ್ಡಗೌಡರ, ಮಹಾದೇವಪ್ಪ ಯಾದವಾಡ,
ದುರ್ಯೋಧನ ಐಹೊಳೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು