ವೈದ್ಯನ ರೂಪದ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಜೊಲ್ಲೆ ದಂಪತಿ
Team Udayavani, Aug 23, 2020, 11:48 AM IST
ಚಿಕ್ಕೋಡಿ: ಗಣೇಶ ಚತುರ್ಥಿಯ ಅಂಗವಾಗಿ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಮನೆಯಲ್ಲಿ ವೈದ್ಯನ ರೂಪದಲ್ಲಿರುವ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
ಕೊವಿಡ್-19 ನ ಹಾವಳಿಯು ಇಡೀ ಮಾನವ ಜನಾಂಗವನ್ನೇ ತಲ್ಲಣಗೊಳಿಸಿದೆ. ಈ ಸಂದರ್ಭದಲ್ಲಿ ಕೋವಿಡ್-19 ವಾರಿಯರ್ಸ್ ಮಾತ್ರ ನಿಸ್ವಾರ್ಥವಾಗಿ, ತಮ್ಮ ಜೀವದ ಹಂಗನ್ನು ತೊರೆದು ಕೇವಲ ಜನಸೇವೆಯನ್ನೇ ಉಸಿರಾಗಿಸಿಕೊಂಡು, ನಮಗಾಗಿ ದುಡಿಯುತ್ತಾ, ಇಂದು ನಮ್ಮ ಪಾಲಿನ ದೇವತಾಸ್ವರೂಪಿಗಳಾಗಿದ್ದಾರೆ.
ಗಣೇಶ ಹಬ್ಬದ ಸುಸಂದರ್ಭವನ್ನು, ಈ ಧೀರರಿಗೆ ಧನ್ಯವಾದಗಳನ್ನು ಅರ್ಪಿಸಲು ಬಳಸಿದ್ದೇವೆ. ವೈದ್ಯನ ರೂಪದಲ್ಲಿರುವ ಗಣೇಶನ ಮೂರ್ತಿಯನ್ನು ಸಚಿವೆ ಹಾಗೂ ಸಂಸದರ ಮನೆಗೆ ತಂದು, ಕೋವಿಡ್-19 ವಾರಿಯರ್ ಗಳ ಚಿತ್ರಗಳೊಂದಿಗೆ ಪ್ರತಿಷ್ಟಾಪಿಸಿ, ವಿಧಿವತ್ತಾಗಿ ಪೂಜಿಸಿ, ಲೋಕದ ಸರ್ವ ವಿಘ್ನಗಳನ್ನೂ ನಿವಾರಿಸಲೇಂದು ಗಣಪತಿಯಲ್ಲಿ ಪ್ರಾರ್ಥಿಸಲಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.
ಸಂಸದ ಅಣ್ಣಾಸಾಹೇಬ ಜೊಲ್ಲೆ, ಬಸವಪ್ರಸಾದ ಜೊಲ್ಲೆ, ಜ್ಯೋತಿಪ್ರಸಾದ ಜೊಲ್ಲೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ