ನಾಡಿನ ಕೀರ್ತಿ ಹೆಚ್ಚಿಸಿದ ಕನಕದಾಸರು


Team Udayavani, Dec 4, 2020, 1:14 PM IST

ನಾಡಿನ ಕೀರ್ತಿ ಹೆಚ್ಚಿಸಿದ ಕನಕದಾಸರು

ಚಿಕ್ಕೋಡಿ: ವಿಶ್ವಾಸಕ್ಕೆ ಮತ್ತೂಂದು ಹೆಸರು ಕುರುಬ ಸಮುದಾಯ ಎನ್ನುವುದು ಜನಜನಿತವಾಗಿದೆ. ಕುರುಬರನ್ನು ಎಸ್‌ಟಿಗೆ ಸೇರಿಸುವ ಹೋರಾಟಕ್ಕೆ ನಮ್ಮ ಬೆಂಬಲ ಇದೆ. ಎಸ್‌ಟಿಗೆ ಸೇರಿಸುವ ಕುರಿತುಮುಖ್ಯಮಂತ್ರಿಗಳ ಗಮನಕ್ಕೆ ತಂದು ಮೀಸಲಾತಿ ನೀಡುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗುತ್ತದೆ ಎಂದು ವಿಧಾನ ಪರಿಷತ್‌ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು.

ಇಲ್ಲಿನ ಮಿನಿ ವಿಧಾನಸೌಧ ಸಭಾ ಭವನದಲ್ಲಿತಾಲೂಕಾಡಳಿತ. ತಾಲೂಕಾ ಪಂಚಾಯತ್‌.ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಂತ ಶ್ರೇಷ್ಠ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

15 ನೆಯ ಶತಮಾನದಲ್ಲಿ ದಾಸ ಸಾಹಿತ್ಯಕ್ಕೆ ದೊಡ್ಡ ಕೊಡುಗೆ ಕೊಟ್ಟವರು ಕನಕದಾಸರು. ಮಾಡುವ ಕೆಲಸ ಸಮಾಜಮುಖೀಯಾದರೆ ಅವರು ಶ್ರೇಷ್ಠರಾಗುತ್ತಾರೆಎನ್ನುವುದಕ್ಕೆ ಕನಕದಾಸರು ಆದರ್ಶವಾಗಿದ್ದಾರೆ. ಜಯಂತಿಗಳು ಕೇವಲ ಮೆರವಣಿಗೆ ಮತ್ತು ಆಚರಣೆಗೆಸಿಮೀತವಾಗದೆ ಅವರ ತತ್ವಾದರ್ಶ ನಮ್ಮ ಜೀವನದಲ್ಲಿಅಳವಡಿಸಿಕೊಂಡು ಉತ್ತಮ ಜೀವನ ರೂಪಿಸುವಲ್ಲಿ ಮುನ್ನಡೆಯಬೇಕು. ವರ್ಣ ಮತ್ತು ವರ್ಗ ರಹಿತ ಸಮಾಜ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಗಣೇಶ ಹುಕ್ಕೇರಿ ಮಾತನಾಡಿ, ಸಮಾಜದ ಒಳಿತಿಗಾಗಿ ಹೋರಾಡಿದ ಸಂತ ಕನಕದಾಸರು ನಾಡಿನ ಕೀರ್ತಿ ಹೆಚ್ಚಿಸಿದ್ದಾರೆ. ಮುಂದಿನ ದಿನಗಳಲ್ಲಿ ಬೃಹತ್‌ ಕಾರ್ಯಕ್ರಮ ಆಯೋಜನೆ ಮಾಡಿ ಕನಕದಾಸರ ಸಾಹಿತ್ಯದ ಸಂದೇಶ ಇಂದಿನ ಯುವ ಪೀಳಿಗೆಗೆ ಪರಿಚಯಿಸುವ ಕೆಲಸ ಎಲ್ಲರೂ ಕೂಡಿ ಮಾಡೋಣ ಎಂದರು.

ಪುರಸಭೆ ಅಧ್ಯಕ್ಷ ಪ್ರವೀಣ ಕಾಂಬಳೆ ಮತ್ತು ಗ್ರಾಮ ಲೆಕ್ಕಾಧಿಕಾರಿ ವಿಠuಲ ಢವಳೇಶ್ವರ ಮಾತನಾಡಿದರು. ಪುರಸಭೆ ಉಪಾಧ್ಯಕ್ಷ ಸಂಜಯ ಕವಟಗಿಮಠ, ತಹಶೀಲ್ದಾರ ಸುಭಾಷ ಸಂಪಗಾವಿ, ತಾಪಂ ಇಒ ಸಮೀರ ಮುಲ್ಲಾ, ಪುರಸಭೆ ಸದಸ್ಯರಾದ ನಾಗರಾಜ

ಮೇಧಾರ, ವಿಜಯಭಾಸ್ಕರ ಇಟಗೋನಿ, ಬೀರಾ ಬನ್ನೆ, ಎಚ್‌.ಎಸ್‌.ನಸಲಾಪೂರೆ, ಎಂ.ಕೆ.ಪೂಜೇರಿ, ಶಿವು ಮರ್ಯಾಯಿ, ಮಾಳು ಕೋರೆ, ಡಾ.ವಿಠ್ಠಲ ಶಿಂಧೆ, ಆರ್‌ ಟಿಓ ಭೀಮನಗೌಡಾ ಪಾಟೀಲ, ಬಿ.ಎ.ಮೆಕನಮರಡಿ, ಕೆ.ಬಿ.ತಳವಾರ, ಡಾ. ಸುಂದರ ರೋಗಿ ಮುಂತಾದವರು ಉಪಸ್ಥಿತರಿದ್ದರು.

ಸಮಾಜ ಕಲ್ಯಾಣ ಅಧಿಕಾರಿ ಮಲ್ಲಿಕಾರ್ಜುನ ಉಳ್ಳಾಗಡ್ಡಿ ಸ್ವಾಗತಿಸಿದರು. ನಾಗೇಶಹನುಮಂತಗೋಳ ನಿರೂಪಿಸಿದರು. ಎಸ್‌.ಆರ್‌ .ದೇಸಾಯಿ ವಂದಿಸಿದರು.

ತೆಲಸಂಗ :

ತೆಲಸಂಗ: ತಮ್ಮ ಸಾಹಿತ್ಯದ ಮೂಲಕ ಎಲ್ಲ ಜನಾಂಗದವರನ್ನು ಒಗ್ಗೂಡಿಸಿ ಜ್ಞಾನದ ಮಾರ್ಗವನ್ನು ತೋರಿಸಿದ ಕನಕದಾಸರ ಪದಗಳು ರಾಷ್ಟ್ರದ ಏಕತೆಗೆ ಶಕ್ತಿ ತುಂಬಿವೆ ಎಂದು ತಾಪಂ ಸದಸ್ಯ ಶ್ರೀಶೈಲ ಶೆಲ್ಲೆಪ್ಪಗೋಳ ಹೇಳಿದರು.

ಗ್ರಾಮದ ಕನಕದಾಸ ವೃತ್ತದಲ್ಲಿ ಕನಕ ಜಯಂತಿ ನಿಮಿತ್ತ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿ, ಕನಕರ ಬೋಧನೆಗಳನ್ನು

ಜೀವನಲ್ಲಿ ಅಳವಡಿಸಿಕೊಂಡು ಜೀವನ ಸಾರ್ಥಕ ಮಾಡಿಕೊಳ್ಳೋಣ ಎಂದು ಕರೆ ನೀಡಿದರು. ನಿವೃತ್ತ ಸೈನಿಕ ಅಮಸಿದ್ದ ಟೋಪನಗೋಳ ಮಾತನಾಡಿದರು. ಡಾ.ಎಸ್‌.ಐ.ಇಂಚಗೇರಿ, ಹಿರಿಯರಾದ ಮಾಯಪ್ಪ ನಿಡೋಣಿ, ಬಿ.ಎಚ್‌.ಶೆಲ್ಲೆಪ್ಪಗೋಳ, ಸೆ„ಬಣ್ಣ ಶೆಲ್ಲೆಪ್ಪಗೋಳ, ಲಕ್ಷ್ಮಣ ಶೆಲ್ಲೆಪ್ಪಗೋಳ, ನ್ಯಾಯವಾದಿ ಅಮೋಘ ಖೊಬ್ರಿ, ರಾಮು ನಿಡೋಣಿ, ಭರಮಣ್ಣ ಸೇಗಾರ, ವಿಠಲ ಶೆಲ್ಲೆಪ್ಪಗೋಳ, ಮುದಕಣ್ಣ ಪೂಜಾರಿ, ಗೋಪಾಲ ಶೆಲ್ಲೆಪ್ಪಗೋಳ, ಧರೆಪ್ಪ ಮಾಳಿ, ಆನಂದ ಥೆ„ಕಾರ, ಬಸವಾರಾಜ ಬಿಜ್ಜರಗಿ, ಮುನ್ನಾ ಕರಜಗಿ, ಶಿವಯೋಗಿ ಹತ್ತಿ, ಕಾಸಪ್ಪ ಹಳ್ಳದ, ಮಾಳಪ್ಪ ಇತರರಿದ್ದರು.

ಅಡಹಳ್ಳಿ :

ಅಡಹಳ್ಳಿ: ಕನಕದಾಸರು ಒಂದು ಜಾತಿ, ಮತ, ಪಂಥ, ಪ್ರದೇಶಕ್ಕೆ ಸಿಮೀತವಾಗಲಾರರು. ಅವರು ಸರ್ವಜನಾಂಗಕ್ಕೆ ಆದರ್ಶಪ್ರಾಯ ರಾಗಿದ್ದಾರೆ ಎಂದು ಗ್ರಾ.ಪಂ.ಮಾಜಿ ಅಧ್ಯಕ್ಷ ಈರಗೌಡ ಪಾಟೀಲ ಹೇಳಿದರು.

ಅವರು ಗ್ರಾಮದ ಕನಕ ನಗರದಲ್ಲಿ ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸುನೀಲ ಕೆಂಚಣ್ಣವರ ಹಾಗೂಸೂರ್ಯಕಾಂತ ಡಂಬಳಕರ ಕನಕದಾಸರ ಭಾವಚಿತ್ರದ ಪೂಜೆ ನೆರವೇರಿಸಿದರು. ಶ್ರೀಕಾಂತ ಪತ್ತಾರ, ಲಕ್ಷ್ಮಣ ಕೆಂಚಣ್ಣವರ, ಮಾಳಪ್ಪ ಪೂಜಾರಿ, ಜ್ಯೋತಿ ನಾಗಠಾಣ, ಮಹಾದೇವ ಪಾಟೀಲ, ಕರೇಪ್ಪ ಹಾದಿಮನಿ, ರಾಮು ಬೀಜರಗಿ, ಜಗದೀಶ ಸನದಿ, ಕಲ್ಮೇಶ ಗುಡಿಮನಿ, ಆನಂದ ಧೂಳಶೇಟ್ಟಿ, ಅಣಪ್ಪ ಹಾಲಳ್ಳಿ, ಅಪ್ಪಸಾಬ ಸನದಿ, ಶಂಕರ ನಾವಿ, ಮುತ್ತಪ್ಪ ಮಾಳಿ, ಮಹೇಶ ಹಾದಿಮನಿ, ಹನಮಂತ ಪೂಜಾರಿ, ಸೋಮನಿಂಗ ಸನದಿ, ಬಸಪ್ಪ ಹಾದಿಮನಿ ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.